
CHITRADURGA NEWS | 06 MAY 2026
ಚಿತ್ರದುರ್ಗ: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರಲ್ಲಿ ತುರುವನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದ ಪಿ.ವಾಣಿ ಗ್ರಾಮೀಣ ವಿದ್ಯಾರ್ಥಿನಿಯು ಮರು ಮೌಲ್ಯಮಾಪನದಲ್ಲಿ 581 ಅಂಕಗಳನ್ನು ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಇದನ್ನೂ ಓದಿ: ಯಡಿಯೂರಪ್ಪ ಸಿಎಂ ಆಗಿದ್ದಾಗ ನಾನು ಕೇಳಿದಷ್ಟು ಅನುದಾನ ಕೊಡುತ್ತಿದ್ದರು | ಎಂ.ಚಂದ್ರಪ್ಪ
ಪಿ.ವಾಣಿ ಅವರು ಮೊದಲಿಗೆ 578 ಅಂಕಗಳನ್ನು ಪಡೆದು ಜಿಲ್ಲೆಗೆ ತೃತೀಯ ಸ್ಥಾನ ಪಡೆದಿದ್ದರು. ರಾಜ್ಯಶಾಸ್ತ್ರ ವಿಷಯದಲ್ಲಿ 90 ಅಂಕಗಳು ಬಂದಿದ್ದರಿಂದ ಆ ಉತ್ತರ ಪತ್ರಿಕೆಯನ್ನು ಮರು ಮೌಲ್ಯಮಾಪನಕ್ಕೊಳಪಡಿಸಿದಾಗ 3 ಅಂಕಗಳು ಸೇರ್ಪಡೆಗೊಂಡು 93 ಅಂಕಗಳು ಬಂದಿದ್ದರಿಂದ ಒಟ್ಟು 581 ಅಂಕಗಳೊಂದಿಗೆ ಶೇ.96.83 ರಷ್ಟು ಫಲಿತಾಂಶ ದಾಖಲಿಸಿ ಕಲಾ ವಿಭಾಗದಲ್ಲಿ ಚಿತ್ರದುರ್ಗ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ್ದಾರೆ.
ತುರುವನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪಿ ವಾಣಿಯ ಈ ಅತ್ಯುತ್ತಮ ಸಾಧನೆಗೆ ಚಳ್ಳಕೆರೆ ಶಾಸಕರು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಟಿ.ರಘುಮೂರ್ತಿ, ಉಪಾಧ್ಯಕ್ಷ ಟಿ.ಬಾಬುರೆಡ್ಡಿ, ಸದಸ್ಯರು, ಕಾಲೇಜಿನ ಪ್ರಾಚಾರ್ಯ ಡಾ.ಬಿ.ಕೃಷ್ಣಪ್ಪ ಹಾಗೂ ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
