
CHITRADURGA NEWS | 19 FEBRUARY 2026
ಚಿತ್ರದುರ್ಗ: ಆಕಾಶವಾಣಿಯ ಬೆಂಗಳೂರು ಕೇಂದ್ರದ ಪ್ರಾದೇಶಿಕ ಸುದ್ದಿ ವಿಭಾಗವು ರಾಯಚೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ಅರೆಕಾಲಿಕ ವರದಿಗಾರರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಫೆ.28 ಅರ್ಜಿ ಸಲ್ಲಿಸಲು ಕೊನೆಯ ದಿನ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಫೆಬ್ರವರಿ 19 | ಹತ್ತಿ ರೇಟ್ ಎಷ್ಟಿದೆ?

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಡಿಪ್ಲೊಮಾ / ಪತ್ರಿಕೋದ್ಯಮ / ಸಮೂಹ ಮಾಧ್ಯಮದಲ್ಲಿ ಪದವಿ ಅಥವಾ ಯಾವುದೇ ಪದವಿಯೊಂದಿಗೆ ಮಾಧ್ಯಮದಲ್ಲಿ ಎರಡು ವರ್ಷಗಳ ಅನುಭವ. ವಯೋಮಿತಿ 24 ರಿಂದ 50 ವರ್ಷ (ಅರ್ಜಿ ಸಲ್ಲಿಸುವ ಕೊನೆಯ ದಿನಕ್ಕೆ ಸರಿಯಾಗಿ), ಅರ್ಜಿದಾರರು ಅರ್ಜಿ ಸಲ್ಲಿಸುವ ಜಿಲ್ಲೆಯ ಜಿಲ್ಲಾ ಕೇಂದ್ರದ ನಿವಾಸಿಯಾಗಿರಬೇಕು.
ಅಥವಾ ಕೇಂದ್ರದಿಂದ 10 ಕಿ.ಮೀ. ಒಳಗಿನ ನಿವಾಸಿಯಾಗಿರಬೇಕು. ಕಂಪ್ಯೂಟರ್ ಮತ್ತು ವರ್ಡ್ ಪ್ರಾಸೆಸಿಂಗ್ನಲ್ಲಿ ಜ್ಞಾನ ಹೊಂದಿರಬೇಕು. ಸುದ್ದಿ ಸಂಗ್ರಹಕ್ಕೆ ಬೇಕಾದ ಉಪಕರಣಗಳನ್ನು ಹೊಂದಿರಬೇಕು. ವಿದ್ಯುನ್ಮಾನ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಅಗತ್ಯ.
ಇದನ್ನೂ ಓದಿ: ಜಿಲ್ಲಾ ಬಂಜಾರ(ಲಂಬಾಣಿ) ಸಂಘದ ಪದಾಧಿಕಾರಿಗಳ ಆಯ್ಕೆ | ನಾಗೇಂದ್ರ ನಾಯ್ಕ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಮರು ಆಯ್ಕೆ
ಆಸಕ್ತ ಅಭ್ಯರ್ಥಿಗಳು ಪೂರ್ಣ ವಿವರಗಳು, ಅಗತ್ಯ ದಾಖಲಾತಿಗಳ ಪ್ರತಿಗಳು ಒಳಗೊಂಡ ಅರ್ಜಿಗಳನ್ನು, ರಿಜಿಸ್ಟರ್ಡ್ ಅಂಚೆ ಮೂಲಕ ಅಥವಾ ಖುದ್ದಾಗಿ ಇದೇ ಫೆಬ್ರವರಿ 28 ರೊಳಗೆ ತಲುಪುವಂತೆ The Deputy Director General (E) , (Attn: Regional News Unit), Akashvani, Raj Bhavan Road, Bengaluru 560 001 ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ 080 – 22356344 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
