
CHITRADURGA NEWS | 12 NOVEMBER 2024
ಚಿತ್ರದುರ್ಗ: ಹಿರಿಯೂರು ತಾಲ್ಲೂಕು ಜವನಗೊಂಡನಹಳ್ಳಿ ಗ್ರಾಮ ಪಂಚಾಯಿತಿಯ ಪಿಡಿಓ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿ.ಈಶ್ವರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ (ZP) ಜಿ.ಪಂ. ಸಿಇಓ ಎಸ್.ಜೆ.ಸೋಮಶೇಖರ್ ಆದೇಶಿಸಿದ್ದಾರೆ.
ಗ್ರಾಮ ಪಂಚಾಯಿತಿಗೆ ಸಂಬಂಧಿಸಿದ 15 ಹಣಕಾಸಿನ ಖರ್ಚು ವೆಚ್ಚದ ಮಾಹಿತಿಯನ್ನು ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗೆ ನೀಡದೆ ಉದ್ಧಟನವನ್ನು ತೋರುವುದರ ಜೊತೆಗೆ, ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿಗಳ ನೇತೃತ್ವದಲ್ಲಿ ನೇಮಿಸಲಾದ ತನಿಖಾ ತಂಡ ಆಡಿಟ್ ನಡೆಸಲು ಸೂಕ್ತ ದಾಖಲೆಗಳನ್ನು ನೀಡದೆ ಬೇಜವಾಬ್ದಾರಿಯನ್ನು ಪಿಡಿಓ ಸಿ.ಈಶ್ವರ ಪ್ರದರ್ಶಿಸಿದ್ದಾರೆ.
ಇದನ್ನೂ ಓದಿ: ಎಸ್.ನಿಜಲಿಂಗಪ್ಪ ಮನೆ ಮಾರಾಟ ಮಾಡ್ತಾರಂತೆ | ಬೆಲೆ ಹತ್ತು ಕೋಟಿಯಂತೆ..
ಹಣಕಾಸಿನ ವ್ಯವಹಾರದ ಲೆಕ್ಕ ಒದಗಿಸದೆ ಕರ್ತವ್ಯ ಲೋಪ ತೋರಿದ್ದಾರೆ. ಸರ್ಕಾರಿ ನೌಕರರಾಗಿ ಕರ್ನಾಟಕ ನಾಗರೀಕ ಸೇವಾ (ನಡವಳಿ) ನಿಯಮಾವಳಿಗಳು-1966 ನಿಯಮ-3(I)(II)&(III) ಉಲ್ಲಂಘಿಸಿದ ಕಾರಣ ಪಿಡಿಓ ಸಿ.ಈಶ್ವರ್ ಅವರನ್ನು ಅಮಾನತು ಮಾಡಿರುವುದಾಗಿ ಜಿ.ಪಂ. ಸಿಇಓ ಎಸ್.ಜೆ.ಸೋಮಶೇಖರ್ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

