CHITRADURGA NEWS | 29 NOVEMBER 2024
ಚಳ್ಳಕೆರೆ: ಕರ್ತವ್ಯಕ್ಕೆ ಅನಧಿಕೃತವಾಗಿ ಗೈರು ಹಾಜರಾಗುತ್ತಿದ್ದ ಚಳ್ಳಕೆರೆ ತಾಲೂಕಿನ ಗೌಡಗೆರೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO)ಯನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಗೌಡಗೆರೆ ಗ್ರಾಮ ಪಂಚಾಯಿತಿ ಪಿಡಿಓ ವೆಂಕಟೇಶ್ ಅಮಾನತುಗೊಂಡ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ ರೇಟ್ ಎಷ್ಟಿದೆ?
ಗೌಡಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರು ನ.12 ರಂದು ಮೌಖಿಕವಾಗಿ ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ನ.14 ರಂದು ಚಳ್ಳಕೆರೆ ತಾಲೂಕು ಪಂಚಾಯಿತಿ ಇಓ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ವೇಳೆ ಅಕ್ಟೋಬರ್ 10 ರಿಂದ ಕಚೇರಿಗೆ ಕರ್ತವ್ಯಕ್ಕೆ ಹಾಜರಾಗದಿರುವುದು ಹಾಜರಾತಿ ಪುಸ್ತಕ ಪರಿಶೀಲಿಸಿದ ವೇಳೆ ಕಂಡು ಬಂದಿದೆ. ಇದರಿಂದ ಸರ್ಕಾರಿ ಕೆಲಸಗಳು ಕುಂಠಿತವಾಗಿವೆ. ಅಭಿವೃದ್ಧಿಗೆ ಹಿನ್ನಡೆಯಾಗಿದೆ.
ಇದನ್ನೂ ಓದಿ: ಇನ್ನು ಮುಂದೆ ಈ ಸ್ಥಳಗಳಲ್ಲಿ ಬೋರ್ ವೆಲ್ ಹಾಕಿಸಲು ಅನುಮತಿ ಕಡ್ಡಾಯ | ಜಿಲ್ಲಾಧಿಕಾರಿ
ಜೊತೆಗೆ ಯಾವುದೇ ಪೂರ್ವಾನುಮತಿ ಪಡೆಯದೇ ಅನಧಿಕೃತವಾಘಿ ಗೈರು ಹಾಜರಾಗಿದ್ದು, ಕರ್ತವ್ಯದ ಅವಧಿಯಲ್ಲಿ ಮದ್ಯ ಸೇವನೆ ಮಾಡುತ್ತಿರುವುದು ಕಂಡು ಬಂದಿದೆ ಎಂಧು ವರದಿ ಸಲ್ಲಿಸಿದ್ದಾರೆ.
ಇದೇ ಪಿಡಿಓ ವೆಂಕಟೇಶ್ ಅವರಿಗೆ ಹೆಚ್ಚುವರಿಯಾಗಿ ಗೋಪನಹಳ್ಳಿ ಗ್ರಾಮ ಪಂಚಾಯಿತಿ ಜವಾಬ್ದಾರಿ ವಹಿಸಲಾಗಿದ್ದು, ಅಲ್ಲಿಗೆ ಭೇಟಿ ನೀಡಿ ಪರಿಶೀಲಿಸಿದ ವೇಳೆ ಅಕ್ಟೋಬರ್ 16 ರಿಂದ ಕರ್ತವ್ಯಕ್ಕೆ ಗೈರಾಗಿರುವುದು ತಿಳಿದು ಬಂದಿದೆ.
ಇದನ್ನೂ ಓದಿ: ಸಂವಿಧಾನ ಸನ್ಮಾನ | ಕಾನೂನು ಸಚಿವ ಸ್ಥಾನಕ್ಕೆ ಅಂಬೇಡ್ಕರ್ ರಾಜಿನಾಮೆ ಕೊಟ್ಟಿದ್ದೇಕೆ ?
ಈ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು, ಕೆಸಿಎಸ್ ನಿಯಮಾವಳಿ ಅನ್ವಯ ಪಿಡಿಓ ವೆಂಕಟೇಶ್ ಅವರನ್ನು ಇಲಾಖೆ ವಿಚಾರಣೆ ಕಾಯ್ದಿರಿಸಿ ಅಮಾನತುಗೊಳಿಸಿದ್ದಾರೆ.
ಸದರಿ ಗೌಡಗೆರೆ ಗ್ರಾಮ ಪಂಚಾಯಿತಿ ಪ್ರಭಾರ ಪಿಡಿಓ ಆಗಿ ನನ್ನಿವಾಳ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಆರ್.ಪಿ.ವೇದಮೂರ್ತಿ ಅವರನ್ನು ನೇಮಕ ಮಾಡಲಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
