CHITRADURGA NEWS | 10 August 2026
ಹೊಸದುರ್ಗ: ವಿದ್ಯುತ್ ಪರಿವರ್ತಕಕ್ಕೆ (ಟ್ರಾನ್ಸ್ಫಾರ್ಮರ್) ವಿದ್ಯುತ್ ಸ್ಪರ್ಶಿಸಿ ನವಿಲು ಮೃತಪಟ್ಟಿದ್ದು, ಅದನ್ನು ತಿನ್ನಲು ತೆರಳಿದ ಚಿರತೆಯೂ ಅದೇ ಸ್ಥಳದಲ್ಲಿ ಮೃತಪಟ್ಟಿರುವ ಅಪರೂಪದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಕಬ್ಬಿನಕೆರೆ ಗ್ರಾಮದಲ್ಲಿ ನಡೆದಿದೆ.
ಇದನ್ನೂ ಓದಿ: ಶಿವಶಿಂಪಿ ಸಮಾಜ ಸಂಘಟನೆಗೆ ಆದ್ಯತೆ ನೀಡಿ | ಕೆ.ಎಸ್.ನವೀನ್
ಕಬ್ಬಿನಕೆರೆ ಗ್ರಾಮದ ಕುಡಿಯುವ ನೀರಿನ ವ್ಯವಸ್ಥೆಗೆ ಸಂಬಂಧಿಸಿದ ವಿದ್ಯುತ್ ಪರಿವರ್ತಕದ ಮೇಲೆ ನವಿಲು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದೆ ಎನ್ನಲಾಗಿದೆ. ಬಳಿಕ ನವಿಲನ್ನು ತಿನ್ನಲು ತೆರಳಿದ ಚಿರತೆಯೂ ವಿದ್ಯುತ್ ಸ್ಪರ್ಶಕ್ಕೆ ಒಳಗಾಗಿ ಟ್ರಾನ್ಸ್ಫಾರ್ಮರ್ ಮೇಲೆಯೇ ಮೃತಪಟ್ಟಿದೆ.
ಘಟನೆ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ನವಿಲು ಹಾಗೂ ಚಿರತೆಯ ಮೃತದೇಹಗಳನ್ನು ತೆರವುಗೊಳಿಸುವ ಕಾರ್ಯ ಕೈಗೊಳ್ಳಲಾಯಿತು.
ಇದನ್ನೂ ಓದಿ: ಸಾವಯವ ಸಮಗ್ರ ಕೃಷಿ ಪದ್ಧತಿ ಕುರಿತು ಮೂರು ದಿನಗಳ ಉಚಿತ ವಸತಿಯುಕ್ತ ತರಬೇತಿ
ಘಟನೆ ಕುರಿತು ಹೊಸದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮುಂದಿನ ಪರಿಶೀಲನೆ ನಡೆಸುತ್ತಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

