CHITRADURGA NEWS | 18 SEPTEMBER 2024
ಚಿತ್ರದುರ್ಗ: ಪ್ರಾದೇಶಿಕ ಎಣ್ಣೆಬೀಜ ಬೆಳಗಾರರ ಸಂಘದ ವಾಹನಗಳ ಮೇಲೆ, ಅವರ ಕಂಪನಿಗಳಿಗೆ ಸಂಬಂಧಿಸಿದ ಎಣ್ಣೆ ಉತ್ಪನ್ನಗಳಿಗೆ ಜಾಹೀರಾತು(Advertisement) ಅಳವಡಿಕೆಗೆ ಅನುಮತಿ ನೀಡಲಾಗಿದೆ.
ಕ್ಲಿಕ್ ಮಾಡಿ ಓದಿ: Organic Farming; ಶರಣ ಸಂಸ್ಕೃತಿ ಉತ್ಸವ | ಕೃಷಿ ಮೇಳದಲ್ಲಿ ಸಾವಯವ ಕೃಷಿಗೆ ಹೆಚ್ಚು ಒತ್ತು | ಸಭೆಯಲ್ಲಿ ತೀರ್ಮಾನ

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಯಿತು.
ಎಣ್ಣೆ ಬೀಜ ಬೆಳೆಗಾರರು ಹಾಗೂ ಎಣ್ಣೆ ಉತ್ಪಾದಕ ಸಂಸ್ಥೆಗಳು ತಮ್ಮ ವಾಹನಗಳ ಮೇಲೆ ತಮ್ಮದೇ ಕಂಪನಿಗಳ ಎಣ್ಣೆ ಉತ್ಪನ್ನ ಜಾಹೀರಾತು ಅಳವಡಿಸಲು ಅನುಮತಿ ನೀಡುವಂತೆ ಪ್ರಾಧಿಕಾರದಲ್ಲಿ ಮನವಿ ಮಾಡಿದ್ದರು.
ಸಾರಿಗೆ ಪ್ರಾಧಿಕಾರವು ಮಧ್ಯಮಗಾತ್ರದ ಸರಕು ಸಾಗಾಣಿಕೆ ವಾಹನಗಳಿಗೆ ವಾರ್ಷಿಕ ರೂ.750 ರಂತೆ ಹಾಗೂ ಭಾರಿ ಗಾತ್ರದ ಸರಕು ಸಾಗಾಣಿಕೆ ವಾಹನಗಳಿಗೆ ವಾರ್ಷಿಕ ರೂ.2000 ಶುಲ್ಕ ವಿಧಿಸಿ ಜಾಹೀರಾತು ಅಳವಡಿಸಲು ಅನುಮತಿ ನೀಡಿದೆ.
ಕ್ಲಿಕ್ ಮಾಡಿ ಓದಿ: BESCOM: ಶೋಭಾಯಾತ್ರೆ ನೋಡಲು ಕಟ್ಟಡಗಳ ಮೇಲೆರದಂತೆ ಸೂಚನೆ
ಸಭೆಯಲ್ಲಿ ಮಜಲು ವಾಹನಗಳ ರಹದಾರಿಗೆ ಸಂಬಂದಪಟ್ಟಂತೆ ಒಟ್ಟು 68 ವಿಷಯಗಳು ಮಂಡನೆಯಾದವು. ಇವುಗಳಲ್ಲಿ 22 ಪರಿಷ್ಕøತ ವೇಳಾಪಟ್ಟಿ ವಿಷಯಗಳಿಗೆ ಪ್ರಾಧಿಕಾರವು ಅನುಮೋದಿಸಿ, ಕಾರ್ಯದರ್ಶಿಯವರಿಗೆ ವೇಳಾಪಟ್ಟಿಯ ಸಭೆಯನ್ನು ಕರೆದು ಪರಿಷ್ಕೃತ ವೇಳಾಪಟ್ಟಿ ನಿಗದಿಪಡಿಸಲು ಸೂಚಿಸಿತು.
ಮಾರ್ಗದ ಕಡಿತ ಹಾಗೂ ಮಾರ್ಗದ ವಿಸ್ತರಣೆ ಹಾಗೂ ಇತರೆ ನ್ಯಾಯಾಲಯದಿಂದ ಪ್ರಾಧಿಕಾರದ ಪರಿಗಣನೆಗೆ ಸ್ವೀಕೃತಿಯಾದ ವಿಷಯಗಳಿಗೆ ಸಂಬಂಧಪಟ್ಟಂತೆ ಅರ್ಜಿದಾರರ ಪರ ವಕೀಲರಿಗೆ ಲಿಖಿತ ಹೇಳಿಕೆಗಳನ್ನು ದಾಖಲಿಸಲು 15 ದಿವಸಗಳ ಕಾಲಾವಕಾಶ ನೀಡಲಾಗಿದೆ.
ಆಕ್ಷೇಪಣೆದಾರರ ಪರ ವಕೀಲರಿಗೆ ಈ ಬಗೆಗಿನ ವಿಷಯಗಳಿಗೆ ಆಕ್ಷೇಪಣೆ ಸಲ್ಲಿಸಲು 10 ದಿವಸಗಳ ಕಾಲಾವಕಾಶ ನೀಡಲಾಗಿದೆ. ಈ ವಿಷಯಗಳ ಕುರಿತು ಕಾನೂನುತ್ಮಾಕವಾಗಿ ನಿರ್ಣಯ ಕೈಗೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು.
ಕ್ಲಿಕ್ ಮಾಡಿ ಓದಿ: State Award; ರಾಜ್ಯ ಪ್ರಶಸ್ತಿ | ಅರ್ಜಿ ಆಹ್ವಾನ
ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ರಂಜೀತ್ಕುಮಾರ್ ಬಂಡಾರು, ಕಾರ್ಯದರ್ಶಿ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ ಎಂ ಕಾಳಿಸಿಂಗೆ, ಪ್ರಾದೇಶಿಕ ಸಾರಿಗೆ ಇಲಾಖೆಯ ಹೇಮಂತ್ ಕುಮಾರ್, ಖಾಸಗಿ ಬಸ್ಸು ಮಾಲೀಕರ ಸಂಘದ ಅಧ್ಯಕ್ಷ ಬಿ.ಎಲ್. ಲಿಂಗಾರೆಡ್ಡಿ ಸೇರಿದಂತೆ ಖಾಸಗಿ ಬಸ್ ಸಂಘದ ಕಾರ್ಯದರ್ಶಿ, ಖಜಾಂಚಿ, ಸಂಘದ ಸದಸ್ಯರು, ಬಸ್ಸು ಮಾಲೀಕರು, ವಕೀಲರು ಸಭೆಯಲ್ಲಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
