CHITRADURGA NEWS | 13 MAY 2024
ಚಿತ್ರದುರ್ಗ: ಮೇ.15 ರಂದು ರಾಜವೀರ ಮದಕರಿ ನಾಯಕರ 242 ನೇ ಪುಣ್ಯಸ್ಮರಣೆಯನ್ನು ಸರಳವಾಗಿ ಆಚರಿಸಲಾಗುವುದೆಂದು ನಾಯಕ ಸಮಾಜದ ತಾಲ್ಲೂಕು ಅಧ್ಯಕ್ಷ ಬಿ.ಕಾಂತರಾಜ್ ತಿಳಿಸಿದರು.
ಇದನ್ನೂ ಓದಿ: ಮಳೆ, ಗಾಳಿಗೆ ನೆಲಕಚ್ಚಿದ ಬಾಳೆ | ಲಕ್ಷಾಂತರ ರೂ. ನಷ್ಟ

ಪತ್ರಕರ್ತರ ಭವನದಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಮದಕರಿನಾಯಕನ ಪ್ರತಿಮೆಯನ್ನು ವಿಶೇಷವಾಗಿ ಅಲಂಕರಿಸಿ ಸಮಸ್ತ ಜನತೆಗೂ ಪುಪ್ಷಾರ್ಚನೆ ಸಲ್ಲಿಸಲು ಅವಕಾಶ ಮಾಡಿಕೊಡಲಾಗುವುದು.
ಮದಕರಿನಾಯಕನನ್ನು ಸ್ಮರಿಸುವುದರಲ್ಲಿ ಹಿಂದೆ ಬಿದ್ದಿದ್ದೇವೇನೋ ಅನ್ನಿಸುತ್ತೆ. ಮುಂದಿನ ದಿನಗಳಲ್ಲಿ ಸ್ಮರಣೋತ್ಸವ, ಪಟ್ಟಾಭಿಷೇಕ ಸೇರಿದಂತೆ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಗುವುದು.
ನಾಳೆ ನಡೆಯುವ ಪುಣ್ಯಸ್ಮರಣೆಯಲ್ಲಿ ಪ್ರತಿಮೆ ಎದುರು ಮೇಣದ ಬತ್ತಿ ಹಚ್ಚಲಾಗುವುದು. ಜಿಲ್ಲೆಯ ಸಮಸ್ತರು ಭಾಗವಹಿಸುವಂತೆ ಬಿ.ಕಾಂತರಾಜ್ ಮನವಿ ಮಾಡಿದರು.
ಜಿಲ್ಲಾ ನಾಯಕ ಸಮಾಜದ ಅಧ್ಯಕ್ಷ ಹೆಚ್.ಜೆ.ಕೃಷ್ಣಮೂರ್ತಿ ಮಾತನಾಡಿ ನೀತಿ ಸಂಹಿತೆ ಜಾರಿ ಇರುವುದಿಂದ ಸರಳವಾಗಿ ಮದಕರಿನಾಯಕ ಪುಣ್ಯ ಸ್ಮರಣೆ ಮಾಡಲಾಗುತ್ತಿದ್ದು ಮುಂದಿನ ಬಾರಿ ಅದ್ದೂರಿಯಾಗಿ ಮಾಡಲಾಗುತ್ತದೆ. ಪುಣ್ಯ ಸ್ಮರಣೆಗೆ ಎಲ್ಲಾ ಸಮಾಜದವರು ಭಾಗವಹಿಸಿ ಎಂದರು.
ಇದನ್ನೂ ಓದಿ: ಆದಿಚುಂಚನಗಿರಿ ಗುರುಕುಲಕ್ಕೆ ಮಾದಾರ ಚನ್ನಯ್ಯ ಗುರುಪೀಠದ ವಟು ಜಯಬಸವ ದೇವರು
ಈ ವೇಳೆ ಜೆ.ಎನ್.ಕೋಟೆ ಗುರುಸಿದ್ದಪ್ಪ, ಕಾಟಿಹಳ್ಳಿ ಕರಿಯಪ್ಪ, ನಗರಸಭೆ ಸದಸ್ಯ ದೀಪು, ಮಾಜಿ ಸದಸ್ಯ ತಿಪ್ಪೇಸ್ವಾಮಿ, ಡಿ.ಗೋಪಾಲಸ್ವಾಮಿ ನಾಯಕ, ಹೆಚ್.ಅಂಜಿನಪ್ಪ ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
