
CHITRADURGA NEWS | 19 APRIL 2026
ಚಿತ್ರದುರ್ಗ: ಚಿತ್ರದುರ್ಗ ನಗರದ ವಿವಿಧ ಕಡೆ ಬೀದಿಬದಿ ಡಬ್ಬದ ಅಂಗಡಿಗಳನ್ನು ತೆರವುಗೊಳಿಸಿ ಅದೇ ಸ್ಥಳದಲ್ಲಿ ಫುಡ್ ಕೋರ್ಟುಗಳನ್ನು ನಗರಸಭೆ ವತಿಯಿಂದ ನಿರ್ಮಿಸಲಾಗುತ್ತಿದೆೆ, ಚಿತ್ರದುರ್ಗ ನಗರದ ಅಭಿವೃದ್ಧಿಗೆ ಬೀದಿಬದಿ ವ್ಯಾಪಾರಸ್ಥರ ಸಹಕಾರ ನಮಗೆ ಅವಶ್ಯಕವಾಗಿ ಬೇಕಿದೆ ಎಂದು ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಮನವಿ ಮಾಡಿದರು.
ಇದನ್ನೂ ಓದಿ: ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ

ನಗರದ ಕೆಳಕೋಟೆಗೆ ಭಾನುವಾರ ಭೇಟಿ ನೀಡಿ ಸಾರ್ವಜನಿಕರ ಕುಂದು ಕೊರತೆಗಳನ್ನ ಆಲಿಸಿ ಮಾತನಾಡಿದ ಅವರು, ಚಿತ್ರದುರ್ಗ ನಗರವನ್ನು ಅಭಿವೃದ್ಧಿ ಮಾಡುವುದೇ ನನ್ನ ಮೂಲ ಉದ್ದೇಶ, ಅದರಿಂದಾಗಿ ಚಿತ್ರದುರ್ಗದ ನಗರ ಮತ್ತಷ್ಟು ಅಂದವನ್ನು ಹೆಚ್ಚಿಸುವುದಕ್ಕೆ ಈಗಾಗಲೇ ರೂಪೇಶ್ಗಳನ್ನ ತಯಾರಿಸಲಾಗಿದೆ.
ನಗರವನ್ನು ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಈಗಾಗಲೇ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿದ್ದೇನೆ, ಅದರಂತೆ ಫುಡ್ ಕೋರ್ಟ್ ಮಳಿಗೆಗಳನ್ನ ನಿರ್ಮಾಣ ಮಾಡುವ ಕುರಿತಂತೆ ಚಿತ್ರದುರ್ಗ ನಗರದ ಕೆಲವು ಸ್ಥಳಗಳನ್ನು ಭೇಟಿ ಮಾಡಲಾಗಿದೆ.
ಸಾರ್ವಜನಿಕರು ರಸ್ತೆ ಬದಿಗಳಲ್ಲಿ ಇಟ್ಟಿರುವಂತಹ ಡಬ್ಬಗಳ ಅಂಗಡಿಗಳನ್ನು ತೆರವುಗೊಳಿಸಿ ಸುಸ್ಸರ್ಜಿತವಾದ ಫುಡ್ ಕೋರ್ಟ್ಗಳನ್ನ ನಿರ್ಮಿಸಿಕೊಡಲಾಗುತ್ತದೆ ಇದಕ್ಕೆ ತಮ್ಮೆಲ್ಲರ ಒಪ್ಪಿಗೆ ಅವಶ್ಯಕವಾಗಿದೆ ಎಂದು ಕೆಳಗೋಟೆ ನಿವಾಸಿಗಳಲ್ಲಿ ಮನವಿ ಮಾಡಿದರು.
ಇದನ್ನೂ ಓದಿ: ಎರಡು ದಿನ ಕೃಷಿ ಪ್ರಾಯೋಗಿಕ ತರಬೇತಿ
ಕೆಳಗೋಟೆಯ ಸರಸ್ವತಿ ಕಾನೂನು ಕಾಲೇಜು ಮುಂಭಾಗದಲ್ಲಿರುವಂತಹ ಡಬ್ಬ ಅಂಗಡಿಗಳನ್ನು ತರವುಗೊಳಿಸಿ ಡಬ್ಬ ಅಂಗಡಿಗಳ ಬದಲಿಗೆ ಫುಡ್ ಕೋರ್ಟ್ ಮಾಡುವ ಯೋಜನೆಯನ್ನು ನಗರದ ವಿವಿಧ ಕಡೆ ಹಮ್ಮಿಕೊಳ್ಳಲಾಗಿದೆ.
ಅದರಂತೆ ಕೆಳಗೋಟೆ ಬಡಾವಣೆಯಲ್ಲೂ ಸಹ ಫುಡ್ ಕೋರ್ಟ್ ಗಳ ಮಳಿಗೆಯನ್ನ ತೆರೆಯಲಾಗುತ್ತದೆ, ಇದರಿಂದ ಸಾರ್ವಜನಿಕರಿಗೆ ಸಾಕಷ್ಟು ಅನುಕೂಲವಾಗುತ್ತದೆ. ಒಂದೇ ಸೂರಿನ ಅಡಿಯಲ್ಲಿ ವಿದ್ಯುತ್, ಕುಡಿಯುವ ನೀರು, ಶೌಚಾಲಯವನ್ನ ಫುಡ್ ಕೋರ್ಟ್ ಮಳಿಗೆಯಲ್ಲಿ ನಿರ್ಮಿಸಿಕೊಡಲಾಗುತ್ತಿದೆ. ಇದರಿಂದ ಅಂಗಡಿಯ ಮಾಲೀಕರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ಡಬ್ಬ ಅಂಗಡಿ ಮಾಲೀಕರಿಗೆ ತಿಳಿಸಿದರು.
ಚಿತ್ರದುರ್ಗ ನಗರ ಅಷ್ಟೇ ಅಲ್ಲದೆ ಚಿತ್ರದುರ್ಗ ವಿಧಾನಸಭಾ ಕ್ಷೇತ್ರಗಳಿಗೂ ಮುಂದಿನ ದಿನಗಳಲ್ಲಿ ಭೇಟಿ ಮಾಡಿ ಉಳಿದಿರುವಂತಹ ಅಭಿವೃದ್ಧಿ ಕಾರ್ಯಗಳಿಗೆ ಹೆಜ್ಜೆಯನ್ನು ಇಡಲಾಗುತ್ತದೆ. ಚಿತ್ರದುರ್ಗ ನಗರದ ಬಹುದಿನಗಳಿಂದ ಉಳಿದಿರುವಂತಹ ಕೆಲಸಗಳನ್ನ ಅಚ್ಚುಕಟ್ಟಾಗಿ ಮಾಡಲು ಪಣತೊಟ್ಟಿದ್ದೇನೆ ಎಂದು ತಿಳಿಸಿದರು.
ಇದನ್ನೂ ಓದಿ: ಪ್ರಧಾನಿ ಜತೆ ಚಿತ್ರದುರ್ಗದ ದಂತ ವೈದ್ಯ ಡಾ.ದೀಕ್ಷಿತ್ ಕುಮಾರ್ ಸಂವಾದ | ಮೈ ಭಾರತ್ ಬಜೆಟ್ ಕ್ವೆಸ್ಟ್ ರಲ್ಲಿ ಸಾಧನೆ
ಚಿತ್ರದುರ್ಗ ನಗರಕ್ಕೆ ದೇಶ ವಿದೇಶಗಳಿಂದ ಪ್ರವಾಸಿಗರು ಕೂಡ ಆಗಮಿಸುತ್ತಿದ್ದಾರೆ, ಇದರಿಂದ ಚಿತ್ರದುರ್ಗದ ನಗರದ ಬಗ್ಗೆ ದೇಶ ವಿದೇಶಗಳಲ್ಲಿಯೂ ಸಹ ಮಾತನಾಡುತ್ತಾರೆ ಹಾಗಾಗಿ ಚಿತ್ರದುರ್ಗ ನಗರವನ್ನು ಒಂದು ಸುಂದರವಾದ ನಗರವನ್ನಾಗಿಸಲು ಈಗಾಗಲೇ ಎಲ್ಲಾ ಅಧಿಕಾರಿಗಳ ಜೊತೆ ಸಮಾಲೋಚನೆಯನ್ನು ನಡೆಸಿದ್ದೇನೆ. ಮುಂದಿನ ದಿನಗಳಲ್ಲಿ ಅಭಿವೃದ್ಧಿ ಕಾರ್ಯಗಳು ಆಗಲಿವೆ ಎಂದು ಹೇಳಿದರು.
ಕೆಳಗೋಟೆಯ ಬೋವಿ ಕಾಲೋನಿಯಲ್ಲಿ ಹರಿದು ಹೋಗುತ್ತಿರುವ ರಾಜ ಕಾಲುವೆಗೆ ಕೆಲವು ಕಡೆ ತಡೆಗೋಡೆಗಳು ಕುಸಿದಿವೆ, ಕಾಲೋನಿಯ ಸಣ್ಣಪುಟ್ಟ ಮಕ್ಕಳು ರಾಜ ಕಾಲುವೆ ಅಕ್ಕಪಕ್ಕದಲ್ಲಿ ಆಟವಾಡುತ್ತಿರುತ್ತವೆ. ಇದರಿಂದಾಗಿ ಸಾಕಷ್ಟು ಭಯ ಬೀತರಾಗಿದ್ದೇವೆ.
ತಕ್ಷಣವೇ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ತಿಳಿಸಿ, ರಾಜಕಾಲುವೆಗೆ ಕಬ್ಬಿಣದ ಜಲ್ಡಿಯಿಂದ ಮುಚ್ಚಬೇಕು ಎಂದು ಸಾರ್ವಜನಿಕರು ಶಾಸಕರಿಗೆ ಮನವಿ ಮಾಡಿದರು, ಇದಕ್ಕೆ ಶಾಸಕರು ಪ್ರತಿಕ್ರಿಯಿಸಿ ನಗರ ಸಭೆ ಪೌರಯುಕ್ತರನ್ನು ಸ್ಥಳಕ್ಕೆ ಕರೆಸಿ ಇಲ್ಲಿನ ಜನರಿಗೆ ಆಗುತ್ತಿರುವ ತೊಂದರೆಗಳನ್ನು ಸರಿಪಡಿಸುವಂತೆ ಸೂಚನೆ ನೀಡಿದರು.
ಇದನ್ನೂ ಓದಿ: ಸಾಮಾನ್ಯ ಪ್ರವೇಶ ಪರೀಕ್ಷೆ | ಜಿಲ್ಲೆಯಲ್ಲಿ 6640 ವಿದ್ಯಾರ್ಥಿಗಳು, 16 ಪರೀಕ್ಷಾ ಕೇಂದ್ರಗಳು
ಈ ಸಂದರ್ಭದಲ್ಲಿ ಚಿತ್ರದುರ್ಗ ನಗರಸಭೆ ಪೌರಾಯುಕ್ತೆ ಲಕ್ಷ್ಮೀ, ಕೆಳಗೋಟೆ ನಿವಾಸಿಗಳಾದ ಅಂಜಿನಪ್ಪ, ಸುರೇಶ್, ಮಲ್ಲಿಕಾರ್ಜುನ್, ರವಿಕುಮಾರ್, ಸುಜಾತಮ್ಮ, ಲಕ್ಷ್ಮಮ್ಮ, ಮಂಜಮ್ಮ, ಓಬಣ್ಣ, ಖಾಲೀಲ್, ರಾಜಣ್ಣ, ಪ್ರಸನ್ನ, ಶ್ವೇತ, ನಾಗರತ್ನ, ರವಿ, ಮಂಜುನಾಥ್, ನಾಗರಾಜ್ ಹಾಗೂ ಇತರರು ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
