CHITRADURGA NEWS | 19 JUNE 2026
ಚಿತ್ರದುರ್ಗ: 2026-27ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) ಯೋಜನೆಯಡಿ ವಸತಿ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಜೂನ್ 30 ರವರೆಗೆ ವಿಸ್ತರಿಸಲಾಗಿದೆ.
ಇದನ್ನೂ ಓದಿ: ನೀಟ್ ಮರು ಪರೀಕ್ಷೆ | ಜೂನ್ 21 ರಂದು ನಿಷೇಧಾಜ್ಞೆ ಜಾರಿ
ಒಂಟಿ ಮಹಿಳೆಯರು, ಹಿರಿಯ ನಾಗರಿಕರು, ಅಂಗವಿಕಲರು, ತೃತೀಯ ಲಿಂಗಿಗಳು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವರ್ಗದವರು ಈ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಇವರೊಂದಿಗೆ ಸ್ವಚ್ಛತಾ ಕಾರ್ಮಿಕರು, ಪಿ.ಎಂ. ಸ್ವ-ನಿಧಿ ಯೋಜನೆಯಡಿ ಗುರುತಿಸಲಾದ ಬೀದಿ ಬದಿ ವ್ಯಾಪಾರಿಗಳು, ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿ ಗುರುತಿಸಲಾದ ಕುಶಲ ಕರ್ಮಿಗಳು, ಅಂಗನವಾಡಿ ಕಾರ್ಯಕರ್ತೆಯರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ವಲಸೆ ಬಂದ ಕುಟುಂಬದವರಿಗೂ ಸಹ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಇದನ್ನೂ ಓದಿ: ಮುಂಗಾರು ಹಂಗಾಮು ಬೆಳೆ ವಿಮೆ | ರೈತರ ನೋಂದಣಿಗೆ ಅವಕಾಶ
ಅರ್ಜಿ ಸಲ್ಲಿಕೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಅಥವಾ ಮಾರ್ಗದರ್ಶನದ ಅಗತ್ಯವಿದ್ದಲ್ಲಿ, ಸಾರ್ವಜನಿಕರು ನಗರಸಭೆಯ ಆಶ್ರಯ/ವಸತಿ ಶಾಖೆಯನ್ನು ಖುದ್ದಾಗಿ ಸಂಪರ್ಕಿಸಬಹುದಾಗಿದೆ ಎಂದು ಪೌರಾಯುಕ್ತರು ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

