CHITRADURGA NEWS | 03 AUGUST 2024
ಚಿತ್ರದುರ್ಗ: ಸ್ವಾತ್ಯಂತ್ರ ದಿನಾಚರಣೆ(Independence day) ಹಿನ್ನಲೆಯಲ್ಲಿ ಪೊಲೀಸ್ ಇಲಾಖೆ ನೇತೃತ್ವದಲ್ಲಿ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಆಗಸ್ಟ್ 11 ರಿಂದ 13 ವರೆಗೆ ಪಥ ಸಂಚಲನದ ಕವಾಯತು ಪೂರ್ವಾಭ್ಯಾಸ ನಡೆಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ ಹೇಳಿದರು.
ಕ್ಲಿಕ್ ಮಾಡಿ ಓದಿ: ಯಾದಗಿರಿಯ PSI ಪರಶುರಾಮ್ ಸಾವು | CBI ತನಿಖೆಗೆ ವಹಿಸುವಂತೆ ಕರುನಾಡ ವಿಜಯಸೇನೆಯಿಂದ ಒತ್ತಾಯ
ನಗರದ ಪೊಲೀಸ್ ಕಚೇರಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಲಾದ ಸ್ವಾತ್ಯಂತ್ರೋತ್ಸವದ ಪರೇಡ್ ಉಪ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪೂರ್ವಾಭ್ಯಾಸದಲ್ಲಿ ಪೊಲೀಸ್, ಗೃಹ ರಕ್ಷಕ, ಅರಣ್ಯ ಹಾಗೂ ಅಬಕಾರಿ ಇಲಾಖೆಗಳ ಜೊತೆ ಎನ್.ಸಿ.ಸಿ, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ನಗರದ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸುವರು.
ಆಗಸ್ಟ್ 11 ರಿಂದ 13 ವರೆಗೆ ಪ್ರತಿದಿನ ಬೆಳಿಗ್ಗೆ 6:30ಕ್ಕೆ ಕವಾಯತು ಅಭ್ಯಾಸ ಪ್ರಾರಂಭವಾಗುವುದು. ದೈಹಿಕ ಶಿಕ್ಷಕರು ತಮ್ಮ ಶಾಲೆಯ ಮಕ್ಕಳನ್ನು ಜಾಗರೂಕತೆಯಿಂದ ಪೂರ್ವಾಭ್ಯಾಸಕ್ಕೆ ಕರೆ ತರಬೇಕು. ಸ್ವಾತಂತ್ರ ದಿನಾಚರಣೆಯಂದು ಉತ್ತಮ ಸಮವಸ್ತ್ರಗಳ ಜೊತೆ ಮಕ್ಕಳು ಪಥಸಂಚಲನದಲ್ಲಿ ಪಾಲ್ಗೊಳ್ಳುವಂತೆ ನೋಡಿಕೊಳ್ಳಬೇಕು ಎಂದರು.
ಕ್ಲಿಕ್ ಮಾಡಿ ಓದಿ: Action Prince: ಕರ್ತೃ ಗದ್ದುಗೆಗೆ ಆ್ಯಕ್ಷನ್ ಪ್ರಿನ್ಸ್ ನಮನ | ಮುರುಘಾ ಮಠದಲ್ಲಿ ಅಭಿಮಾನಿಗಳ ದಂಡು
ಕನ್ನಡದಲ್ಲಿ ಫಥಸಂಚಲನದ ಆಜ್ಞೆ : ಸ್ವಾತಂತ್ರೋತ್ಸವದ ಫಥ ಸಂಚಲನದ ಆಜ್ಞೆಗಳನ್ನು ಕನ್ನಡದಲ್ಲಿಯೇ ನೀಡಲಾಗುವುದು. ಈ ಹಿನ್ನಲೆಯಲ್ಲಿ ಪೊಲೀಸ್ ಇಲಾಖೆಯಿಂದ ರಚಿಸಲಾಗಿರುವ ಫಥ ಸಂಚಲದ ವಾಟ್ಸಪ್ಪ್ ಗ್ರೂಪ್ನಲ್ಲಿ ಕನ್ನಡದ ಆಜ್ಞೆಗಳ ಮಾದರಿಯನ್ನು ಹಂಚಿಕೊಳ್ಳಲಾಗಿದೆ.
ದೈಹಿಕ ಶಿಕ್ಷಕರು ಶಾಲೆಯಲ್ಲಿ ಮಕ್ಕಳಿಗೆ ಪ್ರತಿದಿನ ಕನ್ನಡದಲ್ಲಿಯೇ ಆಜ್ಞೆ ನೀಡಿ ಫಥ ಸಂಚಲನದ ಪೂರ್ವಾಭ್ಯಾಸಕ್ಕೆ ಸಜ್ಜುಗೊಳಿಸುವಂತೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ.ಕುಮಾರಸ್ವಾಮಿ ಸಭೆಯಲ್ಲಿ ತಿಳಿಸಿದರು.
ನಗರ ಸಭೆ ವತಿಯಿಂದ ಕವಾಯತು ಮೈದಾನವನ್ನು ಸ್ವಚ್ಛಗೊಳಿಸಬೇಕು. ಪೂರ್ವಾಭ್ಯಾಸ ಸೇರಿದಂತೆ ಸ್ವಾತಂತ್ರ್ಯ ದಿನಾಚರಣೆವರೆಗೆ ಕುಡಿಯುವ ನೀರು ಹಾಗೂ ಸಂಚಾರಿ ಶೌಚಾಲಯಗಳ ವ್ಯವಸ್ಥೆ ಮಾಡಬೇಕು. ಪೂರ್ವಾಭ್ಯಾಸದಲ್ಲಿ ಸುಮಾರು 700 ರಿಂದ 800 ಮಕ್ಕಳು ಪಾಲ್ಗೊಳ್ಳಲಿದ್ದಾರೆ.
ಇವರಿಗೆ ಮೊದಲ ದಿನ ಸಮಾಜ ಕಲ್ಯಾಣ, ಎರೆಡನೇ ದಿನ ಪರಿಶಿಷ್ಟ ವರ್ಗ ಹಾಗೂ ಮೂರನೇ ದಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳಿಂದ ಉಪಹಾರದ ವ್ಯವಸ್ಥೆ ಕಲ್ಪಿಸಬೇಕು. ಆಗಸ್ಟ್ 11 ಭಾನುವಾರ ಇರುವುದರಿಂದ ಎಲ್ಲಾ ಶಾಲೆಗಳ ಶಿಕ್ಷಕರು ಮಕ್ಕಳ ಪೊಷಕರಿಗೆ ಮೊದಲೆ ತಿಳಿಸಿ ಮಕ್ಕಳನ್ನು ಪೂರ್ವಾಭ್ಯಾಸಕ್ಕೆ ಕರೆ ತರಬೇಕು ಎಂದು ಎಸ್.ಜೆ.ಕುಮಾರಸ್ವಾಮಿ ನಿರ್ದೇಶನ ನೀಡಿದರು.
ಕ್ಲಿಕ್ ಮಾಡಿ ಓದಿ: MBBS ವಿದ್ಯಾರ್ಥಿ ಆತ್ಮಹತ್ಯೆ | ಸೂಕ್ತ ತನಿಖೆಗೆ ಎಬಿವಿಪಿ ಅಗ್ರಹ
ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಪಥ ಸಂಚಲನದಲ್ಲಿ ಭಾಗವಹಿಸಲು ಸಮಾನ ಅವಕಾಶವಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳು ಬಾಲಕಿ ಹಾಗೂ ಬಾಲಕರ ತಲಾ ಒಂದು ತಂಡಗಳನ್ನು ಪಥ ಸಂಚಲನಕ್ಕೆ ಕಳುಹಿಸಬಹುದು. ಒಂದು ತಂಡದಲ್ಲಿ 26 ವಿದ್ಯಾರ್ಥಿಗಳು ಇರಬೇಕು.
ಎಲ್ಲಾ ಶಾಲಾ ಕಾಲೇಜುಗಳು ಸಹ 1.5 ಅಡಿ ಉದ್ದ ಹಾಗೂ 2 ಅಡಿ ಅಗಲದ ಶಾಲಾ ಫಲಗಳನ್ನು ಹಿಡಿದು ಪಥಸಂಚಲನದಲ್ಲಿ ಪಾಲ್ಗೊಳ್ಳಬೇಕು. ಅತ್ಯುತ್ತಮವಾಗಿ ಪಥಸಂಚಲ ನಡೆಸುವ 3 ತಂಡಗಳಿಗೆ ವೇದಿಕೆಯ ಮೇಲೆ ಬಹುಮಾನ ವಿತರಿಸಲಾಗುವುದು. ಭಾಗವಹಿಸಿದ ಎಲ್ಲಾ ತಂಡಗಳಿಗೆ ಸಮಾಧನಕರ ಬಹುಮಾನ ನೀಡಲಾಗುವುದು ಎಂದರು.
ಸಭೆಯಲ್ಲಿ ಜಿಲ್ಲಾ ಸಶಾಸ್ತ್ರ ಪೊಲೀಸ್ ಮೀಸಲು ಪಡೆ ಡಿವೈಸಪಿ ಗಣೇಶ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಚಿದಾನಂದ, ಗೃಹ ರಕ್ಷಣದಳ ಜಿಲ್ಲಾ ಕಮಾಂಡೆಟ್ ಪಿ.ಕೆ.ಸಂಧ್ಯಾ ಸೇರಿದಂತೆ ವಿವಿಧ ಇಲಾಖೆ ಹಾಗೂ ಶಾಲಾ ಕಾಲೇಜುಗಳ ದೈಹಿಕ ಶಿಕ್ಷಕರು ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
