By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಗಡಿಯಲ್ಲಿ ಪೊಲೀಸ್‌ ಸರ್ಪಗಾವಲು | 47 ಚೆಕ್‌ಪೋಸ್ಟ್‌ಗಳಲ್ಲಿ ಹಗಲಿರುಳು ಹೈ ಆಲರ್ಟ್
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಗಡಿಯಲ್ಲಿ ಪೊಲೀಸ್‌ ಸರ್ಪಗಾವಲು | 47 ಚೆಕ್‌ಪೋಸ್ಟ್‌ಗಳಲ್ಲಿ ಹಗಲಿರುಳು ಹೈ ಆಲರ್ಟ್

ಲೋಕಸಮರ 2024

ಗಡಿಯಲ್ಲಿ ಪೊಲೀಸ್‌ ಸರ್ಪಗಾವಲು | 47 ಚೆಕ್‌ಪೋಸ್ಟ್‌ಗಳಲ್ಲಿ ಹಗಲಿರುಳು ಹೈ ಆಲರ್ಟ್

News Desk Chitradurga News
Last updated: 17 March 2024 12:47
News Desk Chitradurga News
1 year ago
Share
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 17 MARCH 2024
ಚಿತ್ರದುರ್ಗ: ಲೋಕಸಭೆ ಚುನಾವಣೆಗೆ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಚುನಾವಣಾ ಅಕ್ರಮ ಕಡಿವಾಣಕ್ಕೆ ಜಿಲ್ಲಾಡಳಿತ ಸಕಲ ಸನ್ನದ್ಧವಾಗಿದೆ. ಈಗಾಗಲೇ ಗಡಿ ರಾಜ್ಯ ಆಂಧ್ರಪ್ರದೇಶದ ಅಧಿಕಾರಿಗಳ ಜತೆ ಮಾತುಕತೆ ನಡೆಸಿದ್ದು, ಗಡಿಯಲ್ಲಿ ಭದ್ರತೆ ಹೆಚ್ಚಿಸಿದೆ.

ಚಿತ್ರದುರ್ಗ (ಪರಿಶಿಷ್ಟ ಜಾತಿ) ಲೋಕಸಭಾ ಕ್ಷೇತ್ರ ಜಿಲ್ಲೆಯ ಮೊಳಕಾಲ್ಮುರು, ಚಳ್ಳಕೆರೆ, ಚಿತ್ರದುರ್ಗ, ಹಿರಿಯೂರು, ಹೊಸದುರ್ಗ, ಹೊಳಲ್ಕೆರೆ ಹಾಗೂ ತುಮಕೂರು ಜಿಲ್ಲೆಯ ಸಿರಾ ಮತ್ತು ಪಾವಗಡ ಸೇರಿದಂತೆ ಒಟ್ಟು 8 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ.

ಜಿಲ್ಲೆಯಲ್ಲಿ 35 ಚೆಕ್‍ಪೋಸ್ಟ್ ಹಾಗೂ ಶಿರಾ ಹಾಗೂ ಪಾವಗಡದಲ್ಲಿ ತಲಾ 6 ಚೆಕ್‌ಪೋಸ್ಟ್‌ ಸ್ಥಾಪನೆ ಸೇರಿದಂತೆ ಒಟ್ಟು 47 ಚೆಕ್‌ಪೋಸ್ಟ್‌ ಹಾಕಲಾಗಿದೆ. ಜಿಲ್ಲೆಯ ಹೊರರಾಜ್ಯದೊಂದಿಗೆ ಗಡಿ ಪ್ರದೇಶ ಹೊಂದಿರುವುದರಿಂದ ಸತ್ಯಸಾಯಿ ಹಾಗೂ ಅನಂತಪುರ ಗಡಿಭಾಗದಲ್ಲಿ ಅಂತರ ರಾಜ್ಯ ಚೆಕ್‌ಪೋಸ್ಟ್‌ಗಳನ್ನು ಸ್ಥಾಪನೆ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್‌ ತಿಳಿಸಿದ್ದಾರೆ.

ಕ್ಲಿಕ್ ಮಾಡಿ ಓದಿ: https://chitradurganews.com/date-fixed-for-lok-samara-a-26-voting-on-may-7/

ಸಾರ್ವಜನಿಕರು ಚುನಾವಣೆ ಪ್ರಕ್ರಿಯೆ ಸಂಬಂಧಿಸಿದಂತೆ ಯಾವುದೇ ಮಾಹಿತಿ ಮತ್ತು ದೂರುಗಳಿದ್ದಲ್ಲಿ ಮತದಾರರ ಟೋಲ್ ಫ್ರೀ ಸಂಖ್ಯೆ 1950 ಗೆ ಸಂಪರ್ಕಿಸಬಹುದು. ಅಲ್ಲದೇ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾದಲ್ಲಿ ಸಾರ್ವಜನಿಕರು ದೂರುಗಳನ್ನು ಸಿ-ವಿಜಿಲ್‌ ಮೊಬೈಲ್ ಆಪ್ ಮೂಲಕವೂ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

ಕ್ಲಿಕ್ ಮಾಡಿ ಓದಿ: https://chitradurganews.com/payment-of-crop-insurance-within-a-week/

ಲೋಕಸಭಾ ಚುನಾವಣೆ ಸಂಬಂಧ ಕಾನೂನು ಸುವ್ಯವಸ್ಥೆ ಹಾಗೂ ಚುನಾವಣಾ ಅಕ್ರಮ ತಡೆಯಲು ಪೊಲೀಸ್‌ ಇಲಾಖೆಯಿಂದ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಮುಂಜಾಗೃತ ಕ್ರಮವಾಗಿ ಜಿಲ್ಲೆಯಲ್ಲಿ 1058 ಸಮಾಜ ವಿದ್ರೋಹಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. 596 ಜನರನ್ನು ತಹಶೀಲ್ದಾರ್‌ ಮುಂದೆ ಹಾಜರು ಪಡಿಸಿ ವಶಕ್ಕೆ ಪಡೆಯಲಾಗಿದೆ. 20 ಜನರ ಗಡಿಪಾರಿಗೆ ವಿಭಾಗಾಧಿಕಾರಿಗಳ ಮುಂದೆ ವರದಿ ಸಲ್ಲಿಸಲಾಗಿದೆ.

ಜಿಲ್ಲೆಗೆ ಪ್ಯಾರಾ ಮಿಲಿಟರ್ ಆಗಮಿಸಿದ ನಂತರ ಪ್ರತಿ ಹಳ್ಳಿಗಳಿಯೂ ಸಂಚರಿಸಿ ಜನಸಾಮಾನ್ಯರಲ್ಲಿ ಮತದಾನ ಕೈಗೊಳ್ಳಲು ವಿಶ್ವಾಸ ಹೆಚ್ಚಿಸಲಾಗುವುದು. ಈಗಾಗಲೇ ಜಿಲ್ಲೆಯ 35 ಚೆಕ್‌ಪೋಸ್ಟ್‌ಗಳಲ್ಲಿ ಪೊಲೀಸ್‌ ಅಧಿಕಾರಿಗಳನ್ನು ನಿಯೋಜಿಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್‌ ಮೀನಾ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:AnantapurBorderCheckpostHigh AlertSathya Saiಅನಂತಪುರಗಡಿಭಾಗಚೆಕ್‌ಪೋಸ್ಟ್‌ಸತ್ಯಸಾಯಿಹೈ ಆಲರ್ಟ್
Share This Article
Facebook Email Print
Previous Article ನೂತನ ಚೆಕ್ ಡ್ಯಾಮ್ ನಿರ್ಮಾಣ ಮತ್ತು ಕೆರೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಂ.ಚಂದ್ರಪ್ಪ ಚಾಲನೆ ಗಾಂಧಿ ಜಯಂತಿಗೆ ಹೊಳಲ್ಕೆರೆ ತಾಲ್ಲೂಕಿನ ಕೆರೆಗಳಿಗೆ ನೀರು | ಶಾಸಕ ಎಂ.ಚಂದ್ರಪ್ಪ ಭರವಸೆ
Next Article ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಚುನಾವಣಾಧಿಕಾರಿ ಟಿ.ವೆಂಕಟೇಶ್ ಸಭೆ ನೀತಿ ಸಂಹಿತೆ ಜಾರಿಯಾಗಿದೆ | ಚುನಾವಣಾ ಪ್ರಚಾರಕ್ಕೆ ಅನುಮತಿ ಕಡ್ಡಾಯ | ಚುನಾವಣಾಧಿಕಾರಿ ಟಿ.ವೆಂಕಟೇಶ್
Leave a Comment

Leave a Reply Cancel reply

Your email address will not be published. Required fields are marked *

Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up