Connect with us

    Pomegranate crop: ಜಿಲ್ಲೆಯ ರೈತರಿಗೆ ಸಂತಸದ ಸುದ್ದಿ | 10 ಸಾವಿರ ಎಕರೆಯಲ್ಲಿ ದಾಳಿಂಬೆ ಬೆಳೆ ವಿಸ್ತರಣೆ ಗುರಿ

    press meet

    ಮುಖ್ಯ ಸುದ್ದಿ

    Pomegranate crop: ಜಿಲ್ಲೆಯ ರೈತರಿಗೆ ಸಂತಸದ ಸುದ್ದಿ | 10 ಸಾವಿರ ಎಕರೆಯಲ್ಲಿ ದಾಳಿಂಬೆ ಬೆಳೆ ವಿಸ್ತರಣೆ ಗುರಿ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 26 AUGUST 2024
    ಚಿತ್ರದುರ್ಗ: ಜಿಲ್ಲೆಯಲ್ಲಿ 10,000 ಎಕರೆ ಪ್ರದೇಶದಲ್ಲಿ ದಾಳಿಂಬೆ ಬೆಳೆ ವಿಸ್ತರಣೆ ಗುರಿ ಹೊಂದಲಾಗಿದೆ ಎಂದು ಜಿಲ್ಲಾ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಶರಣಬಸಪ್ಪ ಬೋಗಿ ತಿಳಿಸಿದರು.

    ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮುಂದಿನ 5 ವರ್ಷಗಳಲ್ಲಿ ಚಿತ್ರದುರ್ಗ ಜಿಲ್ಲೆಯ ಯೋಜನೆಗೆ ಒಳಪಟ್ಟ 6 ತಾಲ್ಲೂಕುಗಳ ಒಟ್ಟು 10,000 ಎಕರೆ ಪ್ರದೇಶದಲ್ಲಿ ದಾಳಿಂಬೆ ಬೆಳೆಯನ್ನು ವಿಸ್ತರಿಸಬೇಕು ಎಂದು ಗುರಿ ಗೊತ್ತುಪಡಿಸಲಾಗಿದೆ’ ಎಂದರು.

    ‘ರೈತರು, ಜಿಲ್ಲಾಡಳಿತ, ತೋಟಗಾರಿಕೆ ಇಲಾಖೆ ಹಾಗೂ ಜನಪ್ರತಿನಿಧಿಗಳ ಸಹಕಾರದೊಂದಿಗೆ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಮೂಲಕ ರೈತರ ಆದಾಯ ಹೆಚ್ಚಿಸುವುದು ನಮ್ಮ ಉದ್ದೇಶವಾಗಿದೆ. ಮುಂದಿನ ದಿನಗಳಲ್ಲಿ ಚಿತ್ರದುರ್ಗ ಜಿಲ್ಲೆಯು ದಾಳಿಂಬೆ ಬೆಳೆಯಲ್ಲಿ ಪ್ರಥಮ ಸ್ಥಾನಕ್ಕೆ ಬಂದು ಇತರ ಜಿಲ್ಲೆಗಳಿಗೆ ಹಾಗೂ ರಾಜ್ಯಗಳಿಗೆ ಮಾದರಿ ಆಗಬೇಕು ಎಂಬುದು ನಮ್ಮ ಕನಸಾಗಿದೆ’ ಎಂದು ತಿಳಿಸಿದರು.

    ‘ಶೀಘ್ರದಲ್ಲೇ ತೋಟಗಾರಿಕೆ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ, ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್‌ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತದ ಜೊತೆ ಸೇರಿ ’ದಾಳಿಂಬೆ ಕ್ಲಸ್ಟರ್‌ ಅಭಿವೃದ್ಧಿ’ ಬೃಹತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಚಿತ್ರದುರ್ಗದಲ್ಲಿ ಎಐಸಿ ಕೇಂದ್ರ ಕಚೇರಿ ಕಾರ್ಯನಿರ್ವಹಿಸಲಿದ್ದು, ಈ ಹಿನ್ನೆಲೆಯಲ್ಲಿ ಎಐಸಿ ಅಧ್ಯಕ್ಷ ಬಿ.ಎಂ.ಫಾರೂರ್‌ ಸಮಾರಂಭ ಆಯೋಜಿಸಲಿದ್ದಾರೆ’ ಎಂದರು.

    ಕ್ಲಿಕ್ ಮಾಡಿ ಓದಿ: ವಾರದೊಳಗೆ ಭೂಸ್ವಾಧೀನ ಪೂರ್ಣಗೊಳಿಸಿ | ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಸೂಚನೆ

    ‘ತುಮಕೂರು, ಚಿತ್ರದುರ್ಗ, ವಿಜಯನಗರ ಜಿಲ್ಲೆಗಳ ಒಂಬತ್ತು ತಾಲ್ಲೂಕುಗಳು ಕೇಂದ್ರ ಸರ್ಕಾರದ ದಾಳಿಂಬೆ ಕ್ಲಸ್ಟರ್ ಅಭಿವೃದ್ಧಿ ಯೋಜನೆಗೆ ಆಯ್ಕೆಯಾಗಿವೆ. ಅನುಷ್ಠಾನ ಸಂಸ್ಥೆಯಾಗಿ ಎಐಸಿ (ಅಸೋಸಿಯೇಟೆಡ್‌ ಇಂಡಸ್ಟ್ರಿಯಲ್ ಕಾರ್ಪೊರೇಷನ್) ಕಾರ್ಯಾಚರಣೆ ನಡೆಸಲಿದೆ. ದಾಳಿಂಬೆ ಬೆಳೆ ಸಮಗ್ರ ಉತ್ತೇಜನಕ್ಕಾಗಿ ಕೇಂದ್ರ ಸರ್ಕಾರವು ದೇಶದಾದ್ಯಂತ 53 ಕ್ಲಸ್ಟರ್ ಗಳನ್ನು ಗುರುತಿಸಿದ್ದು, ರಾಜ್ಯದ ತುಮಕೂರು, ಚಿತ್ರದುರ್ಗ ಮತ್ತು ವಿಜಯನಗರ ಜಿಲ್ಲೆಗಳು ಇದರಲ್ಲಿ ಸೇರಿವೆ’ ಎಂದು ತಿಳಿಸಿದರು.

    ‘ತುಮಕೂರು ಜಿಲ್ಲೆಯ ಶಿರಾ, ಚಿತ್ರದುರ್ಗ ಜಿಲ್ಲೆಯ ಚಿತ್ರದುರ್ಗ, ಹಿರಿಯೂರು, ಹೊಸದುರ್ಗ, ಹೊಳಲ್ಕೆರೆ, ಚಳ್ಳಕೆರ ಹಾಗೂ ಮೊಳಕಾಲೂರು, ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಮತ್ತು ಕೂಡ್ಲಿಗಿ ತಾಲ್ಲೂಕುಗಳು ಈ ಯೋಜನೆಯ ವ್ಯಾಪ್ತಿಗೆ ಒಳಪಟ್ಟಿರುತ್ತವೆ. 5 ವರ್ಷಗಳ ಅವಧಿಯ ಈ ಯೋಜನೆಗೆ ರಾಷ್ಟ್ರೀಯ ತೋಟಗಾರಿಕೆ ಮಂಡಳಿ, ರಾಜ್ಯದ ಕೃಷಿ ಇಲಾಖೆಗೆ ಒಳಪಡುವ ಕ್ಯಾಪ್ಪೆಕ್‌ (ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು, ನಿಗಮ ನಿಯಮಿತ) ಹಾಗೂ ಎಐಸಿ, ಇವುಗಳ ತ್ರಿಪಕ್ಷೀಯ ಸಹಯೋಗದಲ್ಲಿ ಚಾಲನೆ ನೀಡಲಾಗಿದೆ’ ಎಂದರು.

    ‘ಮಳೆ ಕಡಿಮೆ ಬೀಳುವ ಪ್ರದೇಶಗಳು ದಾಳಿಂಬೆ ಬೆಳೆಗೆ ಸೂಕ್ತ ಎಂದು ಪರಿಗಣಿಸಲಾಗಿದ್ದು, ಅದರ ಜೊತೆಗೆ ಇಲ್ಲಿನ ಮಣ್ಣಿನ ಗುಣವು ಬೆಳೆಗೆ ಅನುಕೂಲಕರವಾಗಿರುವುದರಿಂದ ಮೇಲಿನ ಈ ಜಿಲ್ಲೆಗಳ ವ್ಯಾಪ್ತಿಗೆ ಸೇರಿದ ಪ್ರದೇಶವು ಯೋಜನೆಗೆ ಒಳಪಟ್ಟಿದೆ. ಈ ಯೋಜನೆಯಡಿಗೆ ಒಳಪಟ್ಟ ಜಿಲ್ಲೆಗಳ ವ್ಯಾಪ್ತಿಯಲ್ಲಿ ದಾಳಿಂಬೆ ಬೆಳೆಯುವ ರೈತರಿ ಶೇಕಡಾ 40ರಷ್ಟು ಸಬ್ಸಿಡಿ ದರದಲ್ಲಿ ಸಮಗ್ರ ಸೌಲಭ್ಯದ ಬೆಂಬಲ ಒದಗಿಸಲಾಗುತ್ತದೆ. ಒಟ್ಟಾರೆ, ಈ ಪ್ರದೇಶದಲ್ಲಿ 15,000 ಎಕರೆ ವಿಸ್ತೀರ್ಣವನ್ನು (ಸುಮಾರು 6,000 ಹೆಕ್ಟೇರ್) ಯೋಜನೆಯ ವ್ಯಾಪ್ತಿಗೆ ಒಳಪಡಿಸುವ ಗುರಿ ಹಾಕಿಕೊಳ್ಳಲಾಗಿದೆ’ ಎಂದು ತಿಳಿಸಿದರು.

    ಕ್ಲಿಕ್ ಮಾಡಿ ಓದಿ: ಸಿದ್ದರಾಮಯ್ಯ ಹಠಾವೋ ದಲಿತ್ ಬಚವೋ | 28ಕ್ಕೆ ಫ್ರೀಡಂ ಪಾರ್ಕ್‌ನಲ್ಲಿ ಹೋರಾಟ

    ಎಲ್ಲಾ ಸೌಲಭ್ಯಗಳನ್ನು ದಾಳಿಂದ ಬೆಳೆಯುವ ರೈತರಿಗೆ ಒಂದೇ ಸೂರಿನಡಿ ಲಭ್ಯವಾಗಿಸುವುದು ಯೋಜನೆಯ ಪ್ರಮುಖ ಅಂಶವಾಗಿರುತ್ತದೆ. ರೈತರಿಗೆ ರೋಗರಹಿತ ದಾಳಿಂಬೆ ಸಸಿಗಳನ್ನು ನೀಡಲು ಹೈಟೆಕ್ ನರ್ಸರಿ ಬೆಳಸುವುದು ಸಸಿ ಆರೋಗ್ಯ ಕ್ರಿನಿಕ್ ಸ್ನಾವನೆ, ಸಮಗ್ರ ವ್ಯಾಕ್ ಹೌಸ್, ಜೈವಿಕ ನಿಯಂತ್ರಣ ಪ್ರಯೋಗಾಲಯಗಳ ಸ್ಥಾಪನೆ, ಸಮಗ್ರ ಪೌಷ್ಟಿಕಾಂಶ ಅಳವಡಿಕೆ (ಐಎನ್‌ಎಂ) ಹಾಗೂ ಸಮಗ್ರ ಪೀಡೆ ನಿರ್ವಹಣೆ (ಐಪಿಎಂ) ಅಳವಡಿಕೆ. ಹಳೆಯ ದಾಳಿಂಬೆ ತೋಟಗಳ ಪುನರುಜೀವ ದಟ್ಟಣೆಯ ನಾಟಿಯೊಂದಿಗೆ ಬೆಳೆ ಪ್ರದೇಶ ವಿಸ್ತರಣೆ, ನಿಖರ ಹವಾಮಾನ ವರದಿ ಒದಗಿಸುವುದು, ಮತ್ತು ರೈತರಿಗೆ ಸಾಮರ್ಥ್ಯವೃದ್ಧಿ ತರಬೇತಿಗಳ ಬಗ್ಗೆ, ಎಐಸಿ ಗಮನ ಕೇಂದ್ರೀಕರಿಸಲಿದೆ. ಜೊತೆಗೆ, ಸಣ್ಣ ಹಾಗೂ ಅತಿಸಣ್ಣ ದಾಳಿಂಬೆ ಬೆಳೆ ರೈತರಿಗೆ ಬೋರ್ ವೆಲ್ ಕೊರೆಸುವುದು ಹಾಗೂ ಅದಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸುವುದಕ್ಕೆ, ಸಂಬಂಧಿಸಿದಂತೆ ತೊಂದರೆಗಳಿದ್ದು, ಅದಕ್ಕೆ ಪರಿಹಾರ ಕಂಡುಕೊಳ್ಳುವ ದಿಸೆಯಲ್ಲಿ ಸರ್ಕಾರದ ಮಟ್ಟದಲ್ಲಿ ಗಮನ ಸೆಳೆಯಲಾಗುವುದು ಎಂದು ವಿವರಿಸಿದರು.

    ತೋಟಗಾರಿಕೆ ಇಲಾಖೆ ಅಧಿಕಾರಿಗಳಾದ ಮನೋಜ್ ಕುಶಾಲಪ್ಪ, ಚಂದ್ರಶೇಖರ್‌ ಇದ್ದರು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top