CHITRADURGA NEWS | 04 JULY 2024
ಚಿತ್ರದುರ್ಗ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ 2024-25ನೇ ಸಾಲಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 20 ಕೊನೆಯ ದಿನಾಂಕವಾಗಿದೆ.
ಇದನ್ನೂ ಓದಿ: ಬೆಂಗಳೂರು ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ | ಉಚಿತ ಚಿಕಿತ್ಸೆ
ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ, ಪ.ವರ್ಗ, ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳು ಜಾಲತಾಣದ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಪ್ರವರ್ಗ-1, ಎಸ್.ಸಿ. ಮತ್ತು ಎಸ್.ಟಿ ವರ್ಗದ ವಾರ್ಷಿಕ ಆದಾಯ 2.50 ಲಕ್ಷ, ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗಗಳ ವಾರ್ಷಿಕ ಆದಾಯ ರೂ. 1 ಲಕ್ಷ ಮೀರಿರಬಾರದು.
ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್ಸೈಟ್ https://bcwd.karnataka.gov.in/ ನ್ನು ಪರಿಶೀಲಿಸಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ದೋಷಗಳು ಉಂಟಾದಲ್ಲಿ bcwdhelpline@gmail.comಇ-ಮೇಲ್ ಮುಖಾಂತರ ಅಥವಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ, ತಾಲ್ಲೂಕು ಅಧಿಕಾರಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಲು ಸೂಚಿಸಿದೆ.
ಇದನ್ನೂ ಓದಿ: ವಿದ್ಯಾರ್ಥಿ ನಿಲಯ ಪ್ರವೇಶಾತಿ ವಿಳಂಬ | ಎಬಿವಿಪಿ ಜಿಲ್ಲಾ ಘಟಕ ಪ್ರತಿಭಟನೆ
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಸಹಾಯವಾಣಿ ಸಂಖ್ಯೆ 8050770004, 8050770005 ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಚಿತ್ರದುರ್ಗ ತಾಲ್ಲೂಕು ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
