By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಐವರ ಅಸ್ಥಿಪಂಜರ ಪತ್ತೆ ಪ್ರಕರಣ | ವಿಳಂಬವಾಯ್ತಾ ಮರಣೋತ್ತರ ಪರೀಕ್ಷೆ ವರದಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಐವರ ಅಸ್ಥಿಪಂಜರ ಪತ್ತೆ ಪ್ರಕರಣ | ವಿಳಂಬವಾಯ್ತಾ ಮರಣೋತ್ತರ ಪರೀಕ್ಷೆ ವರದಿ

ಮುಖ್ಯ ಸುದ್ದಿ

ಐವರ ಅಸ್ಥಿಪಂಜರ ಪತ್ತೆ ಪ್ರಕರಣ | ವಿಳಂಬವಾಯ್ತಾ ಮರಣೋತ್ತರ ಪರೀಕ್ಷೆ ವರದಿ

News Desk Chitradurga News
Last updated: 6 January 2024 14:00
News Desk Chitradurga News
1 year ago
Share
ಅಸ್ಥಿಪಂಜರ ಸಿಕ್ಕ ಮನೆ
ಅಸ್ಥಿಪಂಜರ ಸಿಕ್ಕ ಮನೆ
SHARE
https://chat.whatsapp.com/Jhg5KALiCFpDwME3sTUl7x

ಚಿತ್ರದುರ್ಗನ್ಯೂಸ್‌.ಕಾಂ

ರಾಜ್ಯದಲ್ಲೇ ತಲ್ಲಣ ಸೃಷ್ಟಿಸಿರುವ ಅಸ್ಥಿಪಂಜರ ಪತ್ತೆ ಪ್ರಕರಣ ರೋಚಕ ತಿರುವು ಪಡೆಯುತ್ತಿದೆ. ಚಿತ್ರದುರ್ಗ ನಗರದ ಕಾರಾಗೃಹ ರಸ್ತೆಯ ಪಾಳು ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳ ಮರಣೋತ್ತರ ವರದಿ ಎಂಟು ದಿನವಾದರೂ ಪೊಲೀಸರ ಕೈಸೇರುವಲ್ಲಿ ವಿಳಂಬವಾಗಿದೆ ಎಂದು ತಿಳಿದು ಬಂದಿದೆ.

2023ರ ಡಿ.28 (ಗುರುವಾರ) ರಾತ್ರಿ ಅಸ್ಥಿಪಂಜರಗಳು ಪತ್ತೆಯಾಗಿದ್ದವು. ಡಿ.29 (ಶುಕ್ರವಾರ) ಅವುಗಳನ್ನು ಬಸವೇಶ್ವರ ವೈದ್ಯಕೀಯ ಮತ್ತು ಸಂಶೋಧನಾ ಕೇಂದ್ರಕ್ಕೆ ರವಾನಿಸಲಾಗಿತ್ತು. ಡಿ.30 (ಶನಿವಾರ) ಮರಣೋತ್ತರ ಪರೀಕ್ಷೆ ನಡೆಸಿ, ದೊಡ್ಡ ಸಿದ್ದವ್ವನಹಳ್ಳಿಯಲ್ಲಿರುವ ಸಂಬಂಧಿಕರಿಗೆ ಹಸ್ತಾಂತರಿಸಲಾಗಿತ್ತು.

ಇದನ್ನೂ ಓದಿ: ತಿಂಗಳ ಅಂತ್ಯಕ್ಕೆ ದುರ್ಗಕ್ಕೆ ಕಾದಿದೆ ನೀರಿನ ಗಂಡಾಂತರ | ಕುಸಿಯುತ್ತಿದೆ ಸೂಳೆಕೆರೆ ನೀರಿನ ಮಟ್ಟ

ಪುತ್ರಿ ತ್ರಿವೇಣಿ
ಪುತ್ರಿ ತ್ರಿವೇಣಿ

ಆ ವೇಳೆ ಸಂಪ್ರದಾಯದಂತೆ ಅಸ್ಥಿಪಂಜರಗಳಿಗೆ ಅಗ್ನಿ ಸ್ಪರ್ಶ ಮಾಡಲು ಸಂಬಂಧಿಕರು ನಿರ್ಧರಿಸಿದ್ದರು. ಆದರೆ ದಾವಣಗೆರೆ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಬರುವವರೆಗೂ ಅಗ್ನಿಸ್ಪರ್ಶಕ್ಕೆ ಅವಕಾಶವಿಲ್ಲ ಎಂದು ಪೊಲೀಸರು ತಿಳಿಸಿದ್ದರಿಂದ ಜೋಗಿಮಟ್ಟಿ ರಸ್ತೆಯ ವಿವೇಕಾನಂದ ನಗರ ಬಳಿಯ ಹಿಂದೂ ರುದ್ರಭೂಮಿಯಲ್ಲಿ ಎನ್‌.ಕೆ.ಜಗನ್ನಾಥ ರೆಡ್ಡಿ (85), ಪತ್ನಿ ಪ್ರೇಮಲೀಲಾ (74), ಪುತ್ರಿ ಎನ್‌.ಜೆ.ತ್ರಿವೇಣಿ (56), ಎನ್‌.ಜೆ. ಕೃಷ್ಣ (53), ಎನ್‌.ಜೆ.ನರೇಂದ್ರ (51) ಅವರದ್ದು ಎನ್ನಲಾದ ಅಸ್ಥಿಪಂಜರಗಳಿಗೆ ನಂಬಿಕೆ ಮೇಲೆ ಸಂಬಂಧಿಕರು ಅಂತ್ಯಕ್ರಿಯೆ ನೆರವೇರಿಸಿದರು. 2024 ರ ಜನವರಿ 1 ರಂದು ಮೂರು ದಿನ ತಿಥಿ ಕಾರ್ಯ ಸಹ ನೆರವೇರಿಸಿದ್ದರು.ಘಟನೆ ನಡೆದು 10 ದಿನ ಹಾಗೂ ಮರಣೋತ್ತರ ಪರೀಕ್ಷೆ ನಡೆದು 7 ದಿನ ಕಳೆದರು ಸಹ ಈವರೆಗೂ ಪೊಲೀಸರಿಗೆ ಮರಣೋತ್ತರ ವರದಿ ಲಭ್ಯವಾಗಿಲ್ಲ.

ಇದನ್ನೂ ಓದಿ: ವೇದಗಳಷ್ಟೇ ಪ್ರಾಮುಖ್ಯತೆ ಶ್ರೀರಾಮಾಯಣಕ್ಕಿದೆ | ಬೆಲಗೂರು ಮಾರುತಿ ವಿಜಯ ಶರ್ಮಾ ಸ್ವಾಮೀಜಿ

ಕೃಷ್ಣಾರೆಡ್ಡಿ ಹಾಗೂ ನರೇಂದ್ರ ರೆಡ್ಡಿ
ಕೃಷ್ಣಾರೆಡ್ಡಿ ಹಾಗೂ ನರೇಂದ್ರ ರೆಡ್ಡಿ

ಬಸವೇಶ್ವರ ವೈದ್ಯಕೀಯ ಮತ್ತು ಸಂಶೋಧನಾ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ತಜ್ಞ ವೈದ್ಯ ಡಾ.ವೇಣು ತಂಡ ಅಸ್ಥಿಪಂಜರದ ಮೇಲಿದ್ದ ಉಡುಪು ಹಾಗೂ ಮೂಳೆಗಳ ರಚನೆಯ ಆಧಾರದಲ್ಲಿ ಶವಗಳು ಇಬ್ಬರು ಮಹಿಳೆಯರು ಹಾಗೂ ಮೂವರು ಪುರುಷರದ್ದು ಎಂದು ಗುರುತಿಸಿತ್ತು. ಘಟನೆಗೆ ಕಾರಣ ತಿಳಿಯುವ ಸಲುವಾಗಿ, ಮೂಳೆ, ಬಟ್ಟೆ, ಒಂದು ಅಸ್ಥಿಪಂಜರದ ಮೇಲಿದ್ದ ಚರ್ಮದ ತುಣುಕನ್ನು ಸಂಗ್ರಹಿಸಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಇದನ್ನೂ ಓದಿ: ನಾಲೆ ದಡ ಒಡೆದು ನುಗ್ಗುತ್ತಿವೆ ಟ್ರಾಕ್ಟರ್‌‌ | ಹೂಳು ತೆಗೆಯುವ ಅವೈಜ್ಞಾನಿಕ ಕ್ರಮಕ್ಕೆ ಆಕ್ರೋಶ

ಜಗನ್ನಾಥ ರೆಡ್ಡಿ, ಅವರ ಪತ್ನಿ ಪ್ರೇಮಲೀಲಾ
ಜಗನ್ನಾಥ ರೆಡ್ಡಿ, ಅವರ ಪತ್ನಿ ಪ್ರೇಮಲೀಲಾ

ಕೊಠಡಿಯೊಂದರಲ್ಲಿ ಮೂರು ಅಸ್ಥಿಪಂಜರಗಳು ಮಂಚದ ಮೇಲೆ, ಒಂದು ಮಂಚದ ಕೆಳಗೆ ಇದ್ದು, ಮತ್ತೊಂದು ನಡುಮನೆಯಲ್ಲಿ ಇತ್ತು. ಈ ಪೈಕಿ ಒಬ್ಬ ಪುರುಷ ಹಾಗೂ ಮಹಿಳೆಯ ಅಸ್ಥಿಪಂಜರದ ಕಾಲುಗಳು ಹಗ್ಗ ಬಿಗಿದ ಸ್ಥಿತಿಯಲ್ಲಿದ್ದವು ಎಂಬ ಅಂಶ ಮರಣೋತ್ತರ ಪರೀಕ್ಷೆ ವೇಳೆ ಗೊತ್ತಾಗಿದೆ ಎನ್ನಲಾಗಿತ್ತು.

ಲೋಕೋಪಯೋಗಿ ಇಲಾಖೆಯಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್‌ ಆಗಿ ನಿವೃತ್ತಿ ಹೊಂದಿದ್ದ ಜಗನ್ನಾಥ ರೆಡ್ಡಿ ಅವರು 2019 ಜನವರಿ ಬಳಿಕ ತಮ್ಮ ನಿವೃತ್ತಿ ವೇತನ ತೆಗೆದುಕೊಂಡಿಲ್ಲ. ಜತೆಗೆ ಜನವರಿ ತಿಂಗಳ ಬಳಿಕ ಈ ಮನೆಯವರಿಂದ ಯಾವುದೇ ಬಿಲ್‌ ಪಾವತಿ ಆಗಿಲ್ಲ ಎಂಬುದು ಬೆಳಕಿಗೆ ಬಂದಿವೆ.

ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯ ಡಾ.ವೇಣು ಕೆಲ ದಿನಗಳಿಂದ ತರಬೇತಿ ಕಾರ್ಯಗಾರದಲ್ಲಿ ಭಾಗಿಯಾಗಿದ್ದರು. ಆ ಕಾರಣಕ್ಕೆ ವರದಿ ಪೊಲೀಸರ ಕೈ ಸೇರುವಲ್ಲಿ ವಿಳಂಬವಾಗಿದೆ ಎನ್ನಲಾಗುತ್ತಿದೆ. ಪರೀಕ್ಷೆ ನಡೆಸಿ ಕೇವಲ ಎರಡು ದಿನದಲ್ಲಿ ಬರಬೇಕಿದ್ದ ವರದಿ ವಿಳಂಬವಾಗಿದ್ದು, ಇಂದು (ಶನಿವಾರ) ಸಂಜೆ ಅಥವಾ ಭಾನುವಾರದ ವೇಳೆಗೆ ತನಿಖಾ ತಂಡದ ಕೈಸೇರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaDelayPost-mortemReportskeletonಅಸ್ಥಿ ಪಂಜರಚಿತ್ರದುರ್ಗಮರಣೋತ್ತರ ಪರೀಕ್ಷೆವರದಿವಿಳಂಬ
Share This Article
Facebook Email Print
Previous Article ತಿಂಗಳ ಅಂತ್ಯಕ್ಕೆ ದುರ್ಗಕ್ಕೆ ಕಾದಿದೆ ನೀರಿನ ಗಂಡಾಂತರ | ಕುಸಿಯುತ್ತಿದೆ ಸೂಳೆಕೆರೆ ನೀರಿನ ಮಟ್ಟ
Next Article ವೀರವನಿತೆ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಭೇಟಿ ಒನಕೆ ಓಬವ್ವ ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿ ದಿವ್ಯಪ್ರಭು ಭೇಟಿ | 2 ದಿನಗಳಲ್ಲಿ ವಿದ್ಯುತ್ ದೀಪ ಸರಿಪಡಿಸಲು ತಾಕೀತು
Leave a Comment

Leave a Reply Cancel reply

Your email address will not be published. Required fields are marked *

ಮುರುಘಾಮಠದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಮೊದಲನೇ ಕಾರ್ಯಕಾರಿ ಸಭೆ | ಮಠಾಧೀಶರು ಸೇರಿದಂತೆ ಗಣ್ಯರು ಭಾಗೀ
ಮುಖ್ಯ ಸುದ್ದಿ
ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up