CHITRADURGA NEWS | 28 FEBRUARY 2025
ಹೊಳಲ್ಕೆರೆ: ಮಾ.9 ಮತ್ತು 10 ರಂದು ಹೊಳಲ್ಕೆರೆಯಲ್ಲಿ ಏರ್ಪಡಿಸಿದ್ದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಾ. 24 ಮತ್ತು 25 ಕ್ಕೆ ಮುಂದೂಡಲಾಗಿದೆ.
Also Read: ಚಿತ್ರದುರ್ಗದ MAX ಫ್ಯಾಷನ್ ಗೆ ರೂ.10 ಸಾವಿರ ದಂಡ | ಯಾಕೆ ಗೊತ್ತಾ?

ಹೊಳಲ್ಕೆರೆಯಲ್ಲಿ ಶುಕ್ರವಾರ ಶಾಸಕ ಎಂ.ಚಂದ್ರಪ್ಪ, ತಹಸೀಲ್ದಾರ್ ಬೀಬೀ ಫಾತೀಮ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ಜರುಗಿದ ಪೂರ್ವಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.
ಶಾಸಕ ಎಂ.ಚಂದ್ರಪ್ಪ ಮಾತನಾಡಿ, ವಿಧಾನ ಮಂಡಲದ ಅಧಿವೇಶನ ಜರುಗುತ್ತಿದೆ ಜೊತೆಗೆ ಪರೀಕ್ಷೆಗಳು ಜರುಗುತ್ತಿವೆ. ಇದು ಜಿಲ್ಲಾ ಸಮ್ಮೇಳನವಾಗಿರುವುದರಿಂದ ಜಿಲ್ಲೆಯ ಉಸ್ತುವಾರಿ ಸಚಿವರು, ಹಾಗೂ ಎಲ್ಲ ಶಾಸಕರು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಳ್ಳುತ್ತಾರೆ.
Also Read: ನೂತನ AC ಯಾಗಿ ಮೆಹಬೂಬ್ ಜಿಲಾನ್ ಅಧಿಕಾರ ಸ್ವೀಕಾರ
ಜೊತೆಗೆ ಕೆಲವು ಸಿದ್ಧತೆಗಳನ್ನು ತರಾತುರಿಯಾಗಿ ಏರ್ಪಡಿಸುವುದರ ಬದಲಾಗಿ ಅಚ್ಚುಕಟ್ಟಾಗಿ ಮಾಡುವುದು ಸೂಕ್ತ. ಇದಕ್ಕೆ ಅಗತ್ಯವಾದ ಎಲ್ಲ ಸಹಕಾರವನ್ನು ನೀಡುತ್ತೇನೆ. ಗೋಷ್ಠಿಗಳು, ಕಲಾತಂಡಗಳು ಸೇರಿದಂತೆ ಎಲ್ಲ ಕಾರ್ಯಕ್ರಮಗಳನ್ನು ರೂಪಿಸುವಂತೆ ಶಾಸಕರು ಸೂಚಿಸಿದರು.
ಇದೇ ಸಂದರ್ಭದಲ್ಲಿ ಸಾಹಿತ್ಯ ಸಮ್ಮೇಳನ ಪ್ರಚಾರದ ಕರಪತ್ರಗಳನ್ನು ಬಿಡುಗಡೆಗೊಳಿಸೊಲಾಯಿತು.
Also Read: ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಪ್ರೊ.ಜಿ.ಪರಮೇಶ್ವರಪ್ಪ ಆಯ್ಕೆ
ಸಭೆಯಲ್ಲಿ ತಹಶೀಲ್ದಾರ್ ಬೀಬೀ ಫಾತೀಮ, ಕಸಾಪ ಜಿಲ್ಲಾಧ್ಯಕ್ಷ ಕೆ.ಎಂ.ಶಿವಸ್ವಾಮಿ, ತಾಲ್ಲೂಕು ಕಸಾಪ ಅಧ್ಯಕ್ಷ ಎಂ.ಶಿವಮೂರ್ತಿ, ತಾಪಂ ಇಒ ಪಿ.ವಿಶ್ವನಾಥ್, ಬಿಇಒ ಹೆಚ್. ಶ್ರೀನಿವಾಸ್, ಪುರಸಭೆ ಮುಖ್ಯಾಧಿಕಾರಿ ಎಸ್.ರೇಣುಕಾ ದೇಸಾಯಿ ಮತ್ತಿತರರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
