Connect with us

ಪಿ.ಆರ್. ತಿಪ್ಪೇಸ್ವಾಮಿ ಸ್ಮಾರಕ ಹಾಗೂ ಪುತ್ಥಳಿ ಅನಾವರಣ-ಸಚಿವ ಡಿ.ಸುಧಾಕರ್

ಪಿ.ಆರ್. ತಿಪ್ಪೇಸ್ವಾಮಿ ಸ್ಮಾರಕ ಹಾಗೂ ಪುತ್ಥಳಿ ಅನಾವರಣ

ಮುಖ್ಯ ಸುದ್ದಿ

ಪಿ.ಆರ್. ತಿಪ್ಪೇಸ್ವಾಮಿ ಸ್ಮಾರಕ ಹಾಗೂ ಪುತ್ಥಳಿ ಅನಾವರಣ-ಸಚಿವ ಡಿ.ಸುಧಾಕರ್

CHITRADURGA NEWS | 10 MARCH 2024

ಹಿರಿಯೂರು : ಪಿ.ಆರ್.ಟಿ ಎಂದೇ ಜನಮಾನಸದಲ್ಲಿ ಹೆಸರಾಗಿರುವ ಹಿರಿಯೂರು ತಾಲ್ಲೂಕು ಹರ್ತಿಕೋಟೆ ಗ್ರಾಮದ ಪಿ.ಆರ್.ತಿಪ್ಪೇಸ್ವಾಮಿ ನಿಸ್ವಾರ್ಥದಿಂದ ಸಮಾಜಮುಖಿ ಜೀವನ ನಡೆಸಿದವರು. ಅವರ ಕೊಡುಗೆಗಳನ್ನು ನೆನಪಿಸುವ ಕೆಲಸವನ್ನು ಪಿ.ಆರ್.ಟಿ ಪ್ರತಿಷ್ಠಾನ ಮಾಡಬೇಕು. ಈ ಕಾರ್ಯಕ್ಕೆ ಒಂದು ವಾರದಲ್ಲಿಯೇ ರೂ.10ಲಕ್ಷ ಗೌರವ ಧನ ನೀಡುವುದಾಗಿ ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಭರವಸೆ ನೀಡಿದರು.

ಇದನ್ನೂ ಓದಿ: ವಾಗ್ವಾದಕ್ಕೆ ಕಾರಣವಾದ ಸಂವಾದ | ಮಾದಾರ ಚನ್ನಯ್ಯ ಗುರುಪೀಠ ಕುರಿತ ಚರ್ಚೆಗೆ ತೀವ್ರ ವಿರೋಧ

ಪಿ.ಆರ್.ತಿಪ್ಪೇಸ್ವಾಮಿ ಪ್ರತಿಷ್ಠಾನ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ, ಹಿರಿಯೂರು ತಾಲ್ಲೂಕು ಹರ್ತಿಕೋಟೆಯಲ್ಲಿ ಭಾನುವಾರ ಆಯೋಜಿಸಿದ್ದ ಪಿ.ಆರ್. ತಿಪ್ಪೇಸ್ವಾಮಿಯವರ ನವೀಕೃತ ಸ್ಮಾರಕ ಲೋಕಾರ್ಪಣೆ ಹಾಗೂ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿ.

ನವೀಕೃತ ಸ್ಮಾರಕ ನಿರ್ಮಾಣ ಕಾರ್ಯ ನಾಡಿಗೆ ಮಾದರಿಯಾಗಿದೆ. ಮೈಸೂರು ವಿಶ್ವ ವಿದ್ಯಾಲಯದಲ್ಲಿ ಪಿ.ಆರ್.ತಿಪ್ಪೇಸ್ವಾಮಿ ಕೆಲಸ ಮಾಡುತ್ತಿದ್ದಾಗ, ಜಿಲ್ಲೆಯ ಹಿಂದುಳಿದ ಭಾಗಗಳಿಂದ ವಿದ್ಯಾಭ್ಯಾಸ ಹರಿಸಿ ಮೈಸೂರಿಗೆ ಬರುವ ವಿದ್ಯಾರ್ಥಿಗಳಿಗೆ ಆಸರೆಯಾಗಿದ್ದರು. ಅವರ ನಿಸ್ವಾರ್ಥವಾದ ಪ್ರೇಮ, ಕಾಳಜಿಯಿಂದ ಬಹಳಷ್ಟು ಜನ ಉನ್ನತ ವಿದ್ಯಾಭ್ಯಾಸ ಗಳಿಸಿ ಜೀವನಮಟ್ಟ ಸುಧಾರಿಸಿಕೊಂಡಿದ್ದಾರೆ. ಕ್ರೀಯಾಶೀಲ ವ್ಯಕ್ತಿತ್ವದ ಪಿ.ಆರ್.ಟಿ ಬದುಕಿನ ಉದ್ದಕ್ಕೂ ಸಮಾಜ ಕಟ್ಟುವ ಕೆಲಸ ಮಾಡಿದರು ಎಂದು ಸಚಿವ.ಡಿ.ಸುಧಾಕರ್ ಸ್ಮರಿಸಿದರು.

ಇದನ್ನೂ ಓದಿ: ಶಿವರಾತ್ರಿ ಪ್ರಯುಕ್ತ ಕಬೀರಾನಂದಾ ಮಠದಲ್ಲಿ ವಿಶಿಷ್ಟ ಕೌದಿ ಪೂಜೆ

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಮಾತನಾಡಿ, ದೇಶದ ನೂರಾರು ವಿದ್ಯಾರ್ಥಿಗ, ಕಲಾವಿದರ ಬದುಕಿಗೆ ಪಿ.ಆರ್.ಟಿ ದಾರಿ ದೀಪವಾಗಿದ್ದಾರೆ. ಪಿ.ಆರ್.ಟಿ ಅವರ ಸಾಹಿತ್ಯ ಕೃಷಿ ವಿಭಿನ್ನವಾದದು. ಎಂದಿಗೂ ಅವರು ತಮ್ಮ ಸಾಹಿತ್ಯವನ್ನು ವ್ಯಾಪಾರೀಕರಣ ಮಾಡಲಿಲ್ಲ. ತಾವು ಬರೆದ ಕೃತಿಗಳನ್ನು ಇತರರಿಗೆ ಮಾರಾಟ ಮಾಡದೆ ಸ್ನೇಹಿತರಿಗೆ ಕೊಡುಗೆಯಾಗಿ ಕೊಟ್ಟಿದ್ದಾರೆ.

ಆಸೆ ಆಮಿಷಕ್ಕೆ ಬಲಿಯಾಗದೆ, ಸ್ವಾರ್ಥ ರಹಿತ ಬದುಕು ಜೀವಿಸಿದ ಪಿ.ಆರ್.ಟಿ ನಮಗೆಲ್ಲರಿಗೂ ಆದರ್ಶಪ್ರಾಯರಾಗಿದ್ದಾರೆ. ಬೆಂಗಳೂರು ಮಹಾನಗರದಲ್ಲಿನ ಒಂದು ವೃತ್ತಕ್ಕೆ ಹಾಗೂ ಮೈಸೂರಿನ ವಿಶ್ವವಿದ್ಯಾಲಯದ ವಸ್ತು ಸಂಗ್ರಹಾಲಯಕ್ಕೆ ಇವರ ಹೆಸರನ್ನು ನಾಮಕರಣ ಮಾಡುವ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುತ್ತೇನೆ. ಈ ವಿಚಾರದಲ್ಲಿ ಸಕಾರಾತ್ಮಕ ತೀರ್ಮಾನ ತೆಗೆದುಕೊಳ್ಳುವ ಭರವಸೆಯನ್ನು ಕೆ.ವಿ.ಪ್ರಭಾಕರ್ ವ್ಯಕ್ತಪಡಿಸಿದರು.

ಇದನ್ನೂ ಓದಿ: ಲೋಕಸಭೆ ಚುನಾವಣೆಗೆ ಶೀಘ್ರದಲ್ಲೇ ವೇಳಾಪಟ್ಟಿ | ಸಿದ್ಧತೆಗಳ ಬಗ್ಗೆ ನಿಗಾ ಇರಿಸಲು ಡಿಸಿ ಸೂಚನೆ

ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ ಕಾಗಿನೆಲೆ ಕನಕ ಗುರು ಪೀಠದ ಜಗದ್ಗುರು ಶ್ರೀ ನಿರಂಜನಾನಂದ ಪುರಿ ಮಹಾಸ್ವಾಮೀಜಿ, ಸಾಮಾನ್ಯ ವ್ಯಕ್ತಿಯ ಹುಟ್ಟು ಹಾಗೂ ಜೀವನ ಚಾರಿತ್ರಿಕವಾಗಬೇಕಾದರೆ ಅವರ ಜೀವನ ಸಾಧನೆ ಜಗತ್ತಿಗೆ ಮಾದರಿಯಾಗಿರಬೇಕು. ಅಂತಹ ಚಾರಿತ್ರಿಕ ವ್ಯಕ್ತಿತ್ವ ಪಿ.ಆರ್.ತಿಪ್ಪೇಸ್ವಾಮಿ ಅವರದ್ದಾಗಿದೆ. ವೈಯಕ್ತಿಕ ಜೀವನ ಬದಿಗೊತ್ತಿ, ಮದುವೆಯೂ ಅಗದೇ, ಪಿ.ಆರ್.ಟಿ ಅವರು ಸಮಾಜವೇ ತನ್ನ ಕುಟುಂಬ ಎಂದು ಭಾವಿಸಿ ಬದುಕಿದವರು.

ಅವರ ಸಾಧನೆ ಅಪಾರವಾದದ್ದು ಪಿ.ಆರ್.ಟಿ.ಚಿತ್ರಕಲೆಯೇ ಜೀವನದ ಉಸಿರನ್ನಾಗಿಸಿ ಸ್ವೀಕರಿಸಿದವರು. ಎಲ್ಲ ವರ್ಗದ ಮಕ್ಕಳಿಗೆ ವಿದ್ಯಾಧಾನ, ಅನ್ನದಾನಮಾಡಿ ಅವರ ಬದುಕಿಗೆ ಆಸರೆಯಾದರು. ಅವರಿಂದ ಸಹಾಯ ಪಡೆದ ಎಲ್ಲರ ಮನಸ್ಸಲ್ಲಿ ಪಿ.ಆರ್.ಟಿ ಸ್ಥಿರವಾಗಿ ಉಳಿದಿದ್ದಾರೆ. ಪಿಆರ್‍ಟಿ ಪ್ರತಿ ಪ್ರತಿಷ್ಠಾನದ ಸಹಕಾರದಿಂದ ಅವರ ಸ್ಮಾರಕ ನಿರ್ಮಾಣದ ಕೆಲಸ ಆಗಿದೆ. ಇದೇ ಮಾದರಿಯಲ್ಲಿ ಹರ್ತಿಕೋಟೆ ಗ್ರಾಮದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಿ ಸಹಕರಿಬೇಕು ಎಂದು ನಿರಂಜನಾನಂದ ಪುರಿ ಮಹಾಸ್ವಾಮೀಜಿ ಕೋರಿದರು.

ಇದನ್ನೂ ಓದಿ: ಎಸ್‍ಓಪಿ ರಸಗೊಬ್ಬರ ಜಪ್ತಿ | ಕೃಷಿ ಇಲಾಖೆ ಜಾರಿ ದಳ ಜಾರಿ

ಈ ಸಮಾರಂಭದಲ್ಲಿ ಪಿ.ಆರ್.ಟಿ ಪ್ರತಿಷ್ಠಾನದ ಸಂಚಾಲಕ ಹರ್ತಿಕೋಟೆ ರುದ್ರಣ್ಣ, ಅಧ್ಯಕ್ಷ ರಾಜಶೇಖರ್ ಕದಂಬ, ಗೌರವ ಕಾರ್ಯದರ್ಶಿ ಮಹದೇವ ಶೆಟ್ಟಿ, ಪ್ರಜಾಪ್ರಗತಿ ಪತ್ರಿಕೆ ಸಂಪಾದಕ ಎಸ್ ನಾಗಣ್ಣ, ಗ್ರಾ.ಪಂ.ಅಧ್ಯಕ್ಷ ಪ್ರತಾಪ ಸಿಂಹ, ಉಪಾಧ್ಯಕ್ಷೆ ಮಹೇಶ್ವರಿ ಗೋಡೆ ತಿಪ್ಪೇಸ್ವಾಮಿ, ಜಿ.ಪಂ. ಮಾಜಿ ಅಧ್ಯಕ್ಷೆ ಶಶಿಕಲಾ ಸುರೇಶ್, ಸ್ಮಾರಕ ಶಿಲ್ಪಿ ನರಸಿಂಹರಾಜು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾಗಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ನಗದು ಬಹುಮಾನದೊಂದಿಗೆ ಪ್ರಶಸ್ತಿಪತ್ರ ನೀಡಿ ಗೌರವಿಸಲಾಯಿತು.

Click to comment

Leave a Reply

Your email address will not be published. Required fields are marked *

More in ಮುಖ್ಯ ಸುದ್ದಿ

To Top
Exit mobile version