CHITRADURGA NEWS | 07 FEBRUARY 2026
ಚಿತ್ರದುರ್ಗ: ವಿದ್ಯಾರ್ಥಿಗಳಲ್ಲಿ ಪರೀಕ್ಷಾ ಭಯ ನಿವಾರಣೆ, ಆತ್ಮವಿಶ್ವಾಸ ವೃದ್ಧಿಗೆ ಪೂರ್ವ ಸಿದ್ಧತಾ ಪರೀಕ್ಷೆಗಳು ಸಹಕಾರಿಯಾಗುತ್ತದೆ ಎಂದು ಚಿತ್ರದುರ್ಗ ಡಯಟ್ ಉಪನ್ಯಾಸಕ ಎಸ್.ಬಸವರಾಜು ಹೇಳಿದರು.
ಇದನ್ನೂ ಓದಿ: ಜಮೀನುಗಳ ಸುರಕ್ಷತೆಗಾಗಿ ಭೂ ಸುರಕ್ಷಾ ಯೋಜನೆ | ಎಲ್ಲ ದಾಖಲೆಗಳು ಆನ್ಲೈನ್ನಲ್ಲೇ ಲಭ್ಯ | ಕಂದಾಯ ಸಚಿವ ಕೃಷ್ಣಭೈರೇಗೌಡ
ತಾಲೂಕಿನ ಭರಮಸಾಗರದ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ಎಸ್.ಎಸ್.ಎಲ್.ಸಿ ಪೂರ್ವ ಸಿದ್ಧತಾ ಪರೀಕ್ಷೆ 1 ಮತ್ತು 2 ರಲ್ಲಿ ಮಕ್ಕಳ ಕಲಿಕಾ ಸಾಧನೆ ಪರಿಶೀಲಿಸಿ ಮಾತನಾಡಿದ ಅವರು,
ನಿರಂತರ ಅಭ್ಯಾಸದಿಂದ ಕಲಿಕೆ ಪರಿಣಾಮಕಾರಿಯಾಗುತ್ತದೆ. ಪೂರ್ವ ಸಿದ್ದತಾ ಪರೀಕ್ಷೆಗಳಿಂದ ಮಕ್ಕಳ ಕಲಿಕಾ ಸಾಧನೆ ತಿಳಿದುಕೊಂಡು ನಿಧಾನಗತಿ ಕಲಿಕೆ ಹೊಂದಿರುವ ಮಕ್ಕಳ ಕಲಿಕಾ ಬಲವರ್ಧನೆ ಮಾಡಲು ಅನುಕೂಲವಾಗುತ್ತದೆ.
ಶಿಕ್ಷಕರು 3 ಪೂರ್ವ ಸಿದ್ಧತಾ ಪರೀಕ್ಷೆಗಳಲ್ಲಿ ಮಕ್ಕಳ ಪ್ರಗತಿಯನ್ನು ವಿಶ್ಲೇಷಣೆ ಮಾಡಿಕೊಂಡು ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಾರ್ಗದರ್ಶನ ಮಾಡಬೇಕು ಶೇ.100 ರ ಫಲಿತಾಂಶದ ಗುರಿಯೊಂದಿಗೆ ಮಕ್ಕಳಿಗೆ ಎಲ್ಲ ವಿಷಯಗಳಲ್ಲಿ ಪುನರ್ ಮನನ ಮಾಡಿಸಬೇಕು ಎಂದು ತಿಳಿಸಿದರು.
ಇದನ್ನೂ ಓದಿ: ಕ್ಯಾನ್ಸರ್ ಚಿಕಿತ್ಸೆಗೆ ಕೇಂದ್ರ ಕೈಗೊಂಡ ಕ್ರಮಗಳ ಬಗ್ಗೆ ಲೋಕಸಭೆ ಅಧಿವೇಶನದಲ್ಲಿ ಜೆ.ಪಿ.ನಡ್ಡಾ ಮಾಹಿತಿ
ಮುಖ್ಯ ಶಿಕ್ಷಕ ಕರಿಯಪ್ಪ ಮಾತನಾಡಿ, ಪೂರ್ವ ಸಿದ್ದತಾ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳ ಅಂಕಗಳನ್ನು ವಿಶ್ಲೇಷಣೆ ಮಾಡಿಕೊಂಡಿದ್ದು ಕಲಿಕೆಯಲ್ಲಿ ಕಡಿಮೆ ಸಾಧನೆ ಮಾಡಿರುವ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ಮೂಲಕ ವಾರ್ಷಿಕ ಪರೀಕ್ಷೆಗೆ ಸಿದ್ಧತೆ ಮಾಡಲಾಗುತ್ತದೆ. ಪ್ರತಿ ವಿಷಯದಲ್ಲಿ ಘಟಕ ಪರೀಕ್ಷೆ ನಡೆಸಿದ್ದು ಮಾದರಿ ಪ್ರಶ್ನೆಪತ್ರಿಕೆಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿದ್ದು ಮಾರ್ಗದರ್ಶನ ನೀಡುತ್ತಿದ್ದೇವೆ ಎಂದರು.
ಶಿಕ್ಷಕರಾದ ಅನಿಲ್ ಕುಮಾರ್, ರಾಜಪ್ಪ, ಹೇಮಲತ, ಶೈಲಾ, ಗುರುಶಾಂತಮ್ಮ, ಲೀಲಾವತಿ, ಶ್ವೇತಾ, ಇಂಪನ, ಮಂಜುಶ್ರೀ ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
