ಚಿತ್ರದುರ್ಗ ನ್ಯೂಸ್.ಕಾಂ
ಮುದ್ದಾದ ಮಗುವಿನ ಆಗಮನದ ಸಂಭ್ರಮದಲ್ಲಿದ್ದ ಮನೆಯಲ್ಲಿ ಇದೀಗ ಸೂತಕದ ವಾತಾವರಣ. ಹೊರ ಜಗತ್ತಿಗೆ ಕಣ್ಣು ಬೀಡುವ ಮುನ್ನವೇ ತಾಯಿ ಗರ್ಭದಲ್ಲಿ ಉಸಿರು ನಿಲ್ಲಿಸಿದ ಕಂದಮ್ಮ. ಇದೀಗ ತಾಯಿ, ಮಗು ಇಬ್ಬರನ್ನು ಕಳೆದು ಕೊಂಡ ಕುಟುಂಬಸ್ಥರ ಆರ್ತನಾದ ಮುಗಿಲು ಮುಟ್ಟಿದೆ.
ಮೂಲತಃ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲ್ಲೂಕಿನ ಪವಿತ್ರಾ (30) ಮೊಳಕಾಲ್ಮುರು ತಾಲ್ಲೂಕಿನ ಗಡಿಭಾಗದ ಬಾಂಡ್ರಾವಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು. 6 ತಿಂಗಳ ಗರ್ಭಿಣಿಯಾಗಿದ್ದ ಪವಿತ್ರಾ ಅವರನ್ನು ಪತಿ ಶಶಿಧರ್ ಅವರು ರಕ್ತದೊತ್ತಡಕ್ಕೆ ಸಂಬಂಧಪಟ್ಟ ಚಿಕಿತ್ಸೆಗಾಗಿ ತಾಲ್ಲೂಕಿನ ರಾಂಪುರದ ಲೋಟಸ್ ಆಸ್ಪತ್ರೆಗೆ ಕರೆತಂದಿದ್ದರು. ಈ ವೇಳೆ ಚಿಕಿತ್ಸೆ ಫಲಕಾರಿಯಾಗದೇ ಗರ್ಭಿಣಿ ಮತ್ತು ಗರ್ಭದಲ್ಲಿದ್ದ ಮಗು ಮೃತಪಟ್ಟಿದೆ.

ಇದನ್ನೂ ಓದಿ: ಹತ್ತು ಲಕ್ಷ ದರೋಡೆ ಪ್ರಕರಣ ; ಒಂದೇ ತಿಂಗಳಲ್ಲಿ ಆರೋಪಿ ಬಂಧನ
ಪತಿ, ಪತ್ನಿ ಇಬ್ಬರು ಒಂದೇ ಶಾಲೆಯಲ್ಲಿ ಶಿಕ್ಷಕರಾಗಿ ಸೇವ ಸಲ್ಲಿಸುತ್ತಿದ್ದರು. ಪತ್ನಿಯನ್ನು ಚಿಕಿತ್ಸೆಗೆ ಕರೆ ತಂದಾಗ ಪರೀಕ್ಷಿಸಿದ ವೈದ್ಯರು ಹೊಟ್ಟೆಯಲ್ಲಿರುವ ಮಗುವಿನ ಹೃದಯ ಬಡಿತ ನಿಂತಿದೆ. ಕೂಡಲೇ ಸ್ಕ್ಯಾನಿಂಗ್ ಮಾಡಿಸಬೇಕು ಎಂದು ಬಳ್ಳಾರಿಯ ಖಾಸಗಿ ಆಸ್ಪತ್ರೆಗೆ ಕಳಿಸಿ ಕೊಟ್ಟಿದ್ದರು.
ಇದನ್ನೂ ಓದಿ: ಮುರುಘಾ ಶ್ರೀ ಪ್ರಕರಣ; ಎರಡನೇ ಆರೋಪಿ ವಾರ್ಡನ್ ರಶ್ಮಿ ಬಿಡುಗಡೆ
ಸ್ಕ್ಯಾನಿಂಗ್ ಮಾಡಿಸಿದ ಬಳಿಕ ರಾಂಪುರಕ್ಕೆ ಮರಳಿದ ಪವಿತ್ರಾ ಅವರನ್ನು ಶಸ್ತ್ರಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇದಕ್ಕಾಗಿ ₹28,000 ಹಣವನ್ನು ಸಹ ಆಸ್ಪತ್ರೆ ಪಾವತಿಸಿಕೊಂಡಿತ್ತು. ಮಂಗಳವಾರ ರಾತ್ರಿ 1.30ರ ಸಮಯದಲ್ಲಿ ಶಸ್ತ್ರಚಿಕಿತ್ಸೆ ಸಮಯದಲ್ಲಿ ರಕ್ತದೊತ್ತಡ ಹೆಚ್ಚಳದಿಂದ ಪವಿತ್ರಾ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದರು ಎಂದು ಪತಿ ಶಶಿಧರ್ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ಆಗಮಿಸಿದ ವಿದ್ಯಾರ್ಥಿಗಳು ಶಿಕ್ಷಕಿಯನ್ನು ನೋಡಿ ಕಣ್ಣೀರಿಟ್ಟರು. ಘಟನೆಗೆ ವೈದ್ಯರು ಹಾಗೂ ಸಿಬ್ಬಂದಿ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಆಸ್ಪತ್ರೆ ಮುಂದೆ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ನಡೆಸಿತು. ಸ್ಥಳಕ್ಕಾಗಮಿಸಿದ ಪೊಲೀಸರು ಆಸ್ಪತ್ರೆಯಲ್ಲಿದ್ದ 4 ರೋಗಿಗಳನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಿ ಆಸ್ಪತ್ರೆಗೆ ಬೀಗ ಹಾಕಿದರು. ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
