By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಏಕನಾಥೇಶ್ವರಿ ಜಾತ್ರಾ ಮಹೋತ್ಸವದ ಅಂಗವಾಗಿ ಪೂರ್ವಭಾವಿ ಸಭೆ 
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಏಕನಾಥೇಶ್ವರಿ ಜಾತ್ರಾ ಮಹೋತ್ಸವದ ಅಂಗವಾಗಿ ಪೂರ್ವಭಾವಿ ಸಭೆ 

ಮುಖ್ಯ ಸುದ್ದಿ

ಏಕನಾಥೇಶ್ವರಿ ಜಾತ್ರಾ ಮಹೋತ್ಸವದ ಅಂಗವಾಗಿ ಪೂರ್ವಭಾವಿ ಸಭೆ 

News Desk Chitradurga News
Last updated: 21 March 2025 20:26
News Desk Chitradurga News
3 months ago
Share
ಏಕನಾಥೇಶ್ವರಿ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ತಹಶೀಲ್ದಾರ್ ಗೋವಿಂದರಾಜ್
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 22 MARCH 2025

ಚಿತ್ರದುರ್ಗ: ನಗರದ ಏಕನಾಥೇಶ್ವರಿ ಅಮ್ಮನ ಜಾತ್ರಾ ಮಹೋತ್ಸವ ಏಪ್ರಿಲ್ 1 ರಿಂದ 13 ರವರೆಗೆ ನಡೆಯಲಿದ್ದು, ಇದರ ಅಂಗವಾಗಿ ಕೋಟೆ ರಸ್ತೆಯಲ್ಲಿರುವ ಏಕನಾಥೇಶ್ವರಿ ಪಾದಗುಡಿಯಲ್ಲಿ ಪೂರ್ವಭಾವಿ ಸಭೆ ಜರುಗಿತು.

Also Read: SSLC ಪರೀಕ್ಷೆಗೆ 943 ವಿದ್ಯಾರ್ಥಿಗಳು ಗೈರು | ಗುಲಾಬಿ ಹೂ ಕೊಟ್ಟು ಸ್ವಾಗತಿಸಿದ ಡಿಸಿ

ಸಭೆಯಲ್ಲಿ ತಹಶೀಲ್ದಾರ್ ಗೋವಿಂದರಾಜ್ ಮಾತನಾಡಿ, ಪ್ರತಿ ವರ್ಷ ಹೇಗೆ ಜಾತ್ರೆ ನಡೆಸಿಕೊಂಡು ಹೋಗುತ್ತೀರೋ ಅದೇ ಪದ್ದತಿಯಂತೆ ಆಚರಿಸಿ. ಅದಕ್ಕೆ ನಮ್ಮ ಸಂಪೂರ್ಣ ಸಹಕಾರವಿರುತ್ತದೆ. ಹದಿಮೂರು ದಿನಗಳ ಕಾಲ ಜಾತ್ರೆ ಶಾಂತಿಯುತವಾಗಿ ನಡೆಯಬೇಕು. ಅದಕ್ಕೆ ಬೇಕಾದ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳಿ, ನಿಮ್ಮ ಜೊತೆ ತಾಲ್ಲೂಕು ಆಡಳಿತವಿರುತ್ತದೆ ಎಂದು ಭರವಸೆ ನೀಡಿದರು.

ಏಕನಾಥೇಶ್ವರಿ ಜೀರ್ಣೋದ್ದಾರ ಸಮಿತಿ ನಿರ್ದೇಶಕ ಬಿ.ರಾಮಜ್ಜ ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವೂ ಏಕನಾಥೇಶ್ವರಿ ಅಮ್ಮನವರ ಜಾತ್ರಾ ಮಹೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ನಡೆಸಲಾಗುವುದು. ಏ.1 ರಂದು ಜಾತ್ರೆಯ ಸಾರು ಹಾಕಲಾಗುತ್ತದೆ. ಏ.13ಕ್ಕೆ ಹೋಕಳಿಯೊಂದಿಗೆ ಜಾತ್ರೆ ಸಂಪನ್ನಗೊಳ್ಳಲಿದೆ.

ಎಲ್ಲರೂ ಸೇರಿ ಏಕನಾಥೇಶ್ವರಿ ಅಮ್ಮನ ಜಾತ್ರೆಯನ್ನು ಶಾಂತಿಯಿಂದ ಆಚರಿಸೋಣ. ಇದಕ್ಕೆ ನಿಮ್ಮ ಸಹಕಾರವಿರಲಿ ಎಂದರು.

Also Read: ಅಡಿಕೆ ಧಾರಣೆ | ಚನ್ನಗಿರಿಯಲ್ಲಿ ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ

ಕೋಮಲ ನರ್ಸಿಂಗ್ ಹೋಂನ ಡಾ.ಕೋಮಲ ಮರಿಗುದ್ದಿರವರು ಹತ್ತು ಲಕ್ಷ ರೂ. ವೆಚ್ಚ ಮಾಡಿ ಏಕನಾಥೇಶ್ವರಿ ಪಾದಗುಡಿಯ ಮುಂಭಾಗ ಧ್ವಾರಬಾಗಿಲು ನಿರ್ಮಿಸಿದ್ದಾರೆ. ಅದಕ್ಕಾಗಿ ಜಾತ್ರೆಯಲ್ಲಿ ಅವರನ್ನು ಗೌರವಿಸುವಂತೆ ಸಲಹೆ ನೀಡಿದರು.

ನಗರಸಭೆ ಮಾಜಿ ಅಧ್ಯಕ್ಷ ಹೆಚ್.ಮಂಜಪ್ಪ ಮಾತನಾಡಿ, ದಾವಣಗೆರೆಯಲ್ಲಿ ದುರ್ಗಮ್ಮನ ಜಾತ್ರೆ ಹೇಗೆ ವೈಭವೋಪೇತವಾಗಿ ನಡೆಯುತ್ತದೋ ಅದೇ ರೀತಿ ಚಿತ್ರದುರ್ಗದ ಪ್ರಮುಖ ಬೀದಿಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಿ ಏಕನಾಥೇಶ್ವರಿ ಅಮ್ಮನವರ ಜಾತ್ರೆಯನ್ನು ಅದ್ದೂರಿಯಾಗಿ ಆಚರಿಸೋಣ.

ತಾಲ್ಲೂಕು ಕಚೇರಿ, ನಗರಸಭೆ ಹಾಗೂ ವಿದ್ಯುತ್ ಇಲಾಖೆಯವರು ಹದಿಮೂರು ದಿನಗಳ ಕಾಲ ನಡೆಯುವ ಜಾತ್ರೆಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸಹಕರಿಸಬೇಕು ಎಂದು ಮನವಿ ಮಾಡಿದರು.

Also Read: ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ಖಂಡಿಸಿ ಬಿಜೆಪಿ ಪ್ರತಿಭಟನೆ

ನಗರಸಭೆ ಮಾಜಿ ಉಪಾಧ್ಯಕ್ಷ ಎಸ್.ಬಿ.ಎಲ್.ಮಲ್ಲಿಕಾರ್ಜುನ್ ಮಾತನಾಡಿ, ನಗರ ದೇವತೆ ತಿಪ್ಪಿನಘಟ್ಟಮ್ಮ-ಬರಗೇರಮ್ಮನವರ ಭೇಟಿ ಮಹೋತ್ಸವ ಹಿಂದಿನ ಕಾಲದಿಂದಲೂ ರಾಜಬೀದಿ ದೊಡ್ಡಪೇಟೆಯಲ್ಲಿ ನಡೆಯುತ್ತಿದೆ.

ಭೇಟಿ ಮಹೋತ್ಸವವನ್ನು ಕಣ್ತುಂಬಿಕೊಳ್ಳಲು ಕಿಷ್ಕಿಂದೆಯಾಗಿರುವ ದೊಡ್ಡಪೇಟೆ ರಸ್ತೆಯಲ್ಲಿ ಸಾವಿರಾರು ಭಕ್ತರು ಜಮಾಯಿಸುತ್ತಾರೆ. ಅದಕ್ಕಾಗಿ ಅಪ್ಪಣೆ ಕೇಳಿ ಭೇಟಿ ಮಹೋತ್ಸವವನ್ನು ನಗರದ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ನಡೆಸಿದರೆ ಇಡಿ ದುರ್ಗದ ಜನತೆಯೇ ನೋಡಿ ಸಂಭ್ರಮಿಸುತ್ತಾರೆಂದು ಸಲಹೆ ನೀಡಿದರು.

ಸಭೆಯಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಸಿ.ಟಿ.ಕೃಷ್ಣಮೂರ್ತಿ, ಮಾಜಿ ಸದಸ್ಯರುಗಳಾದ ಗಾಡಿ ಮಂಜುನಾಥ್, ಸಿ.ಟಿ.ರಾಜೇಶ್, ತಾಲ್ಲೂಕು ಕಚೇರಿಯ ರಾಜಸ್ವ ನಿರೀಕ್ಷಕ ಪ್ರಾಣೇಶ್, ಗ್ರಾಮ ಆಡಳಿತಾಧಿಕಾರಿ ಶ್ರೀನಿವಾಸ್, ನಗರಸಭೆ ನಾಮ ನಿರ್ದೇಶಿತ ಮಾಜಿ ಸದಸ್ಯ ಓಂಕಾರ್, ಗುತ್ತಿಗೆದಾರ ಕುಮಾರ್, ಮದಕರಿನಾಯಕ ಸಾಂಸ್ಕøತಿಕ ಕೇಂದ್ರದ ಅಧ್ಯಕ್ಷ ಡಿ.ಗೋಪಾಲಸ್ವಾಮಿನಾಯಕ, ಶಾರದ ಬ್ರಾಸ್ ಬ್ಯಾಂಡ್‍ನ ಗುರುಮೂರ್ತಿ ಸೇರಿದಂತೆ ಭಕ್ತರು ಭಾಗವಹಿಸಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:AprilChitradurgaChitradurga newsChitradurga UpdatesEknatheshwari FairKannada Latest NewsKannada NewsPreliminary meetingTahsildar Govindarajಏಕನಾಥೇಶ್ವರಿ ಜಾತ್ರೆಏಪ್ರಿಲ್ 1 ರಿಂದ 13ಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ತಹಶೀಲ್ದಾರ್ ಗೋವಿಂದರಾಜ್ಪೂರ್ವಭಾವಿ ಸಭೆ
Share This Article
Facebook Email Print
Previous Article today bhavishya Astrology: ದಿನ ಭವಿಷ್ಯ | ಮಾರ್ಚ್ 22 | ಉದ್ಯೋಗಿಗಳಿಗೆ ಕೆಲಸದ ಒತ್ತಡ, ಹಠಾತ್ ಆರ್ಥಿಕ ಲಾಭ
Next Article APMC: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ? 
Leave a Comment

Leave a Reply Cancel reply

Your email address will not be published. Required fields are marked *

ಕಾಂಗ್ರೆಸ್ ಅವಧಿಯಲ್ಲಿ ಶೇ.60 ರಷ್ಟು ಕಮಿಷನ್ ನಡೆಯುತ್ತಿದೆ | AAP ಜಿಲ್ಲಾಧ್ಯಕ್ಷ ಜಗದೀಶ್
ಮುಖ್ಯ ಸುದ್ದಿ
ಗಾಂಧಿವೃತ್ತ, ಸಂತೆಹೊಂಡದ ಬಳಿಯ ವಾಣಿಜ್ಯ ಸಂಕೀರ್ಣಗಳ ಕಾಮಗಾರಿ ವೀಕ್ಷಿಸಿದ ಸಚಿವರು
ಮುಖ್ಯ ಸುದ್ದಿ
ಸಚಿವ ಸ್ಥಾನದಿಂದ ಜಮೀರ್ ಅಹಮದ್‍ ಖಾನ್ ವಜಾಗೊಳಿಸಿ | ಜೆಡಿಎಸ್ ಪ್ರತಿಭಟನೆ
ಮುಖ್ಯ ಸುದ್ದಿ
ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು
ಮುರುಘಾ ಶ್ರೀಗಳ ಪ್ರಕರಣ ಅಂತಿಮ ಹಂತಕ್ಕೆ | ಖುದ್ದು ಹೇಳಿಕೆ ದಾಖಲಿಸಲು ದಿನಾಂಕ ನಿಗಧಿ | ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ ಶರಣರು
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up