Connect with us

ಏಕನಾಥೇಶ್ವರಿ ಜಾತ್ರಾ ಮಹೋತ್ಸವದ ಅಂಗವಾಗಿ ಪೂರ್ವಭಾವಿ ಸಭೆ 

ಮುಖ್ಯ ಸುದ್ದಿ

ಏಕನಾಥೇಶ್ವರಿ ಜಾತ್ರಾ ಮಹೋತ್ಸವದ ಅಂಗವಾಗಿ ಪೂರ್ವಭಾವಿ ಸಭೆ 

CHITRADURGA NEWS | 22 MARCH 2025

ಚಿತ್ರದುರ್ಗ: ನಗರದ ಏಕನಾಥೇಶ್ವರಿ ಅಮ್ಮನ ಜಾತ್ರಾ ಮಹೋತ್ಸವ ಏಪ್ರಿಲ್ 1 ರಿಂದ 13 ರವರೆಗೆ ನಡೆಯಲಿದ್ದು, ಇದರ ಅಂಗವಾಗಿ ಕೋಟೆ ರಸ್ತೆಯಲ್ಲಿರುವ ಏಕನಾಥೇಶ್ವರಿ ಪಾದಗುಡಿಯಲ್ಲಿ ಪೂರ್ವಭಾವಿ ಸಭೆ ಜರುಗಿತು.

Also Read: SSLC ಪರೀಕ್ಷೆಗೆ 943 ವಿದ್ಯಾರ್ಥಿಗಳು ಗೈರು | ಗುಲಾಬಿ ಹೂ ಕೊಟ್ಟು ಸ್ವಾಗತಿಸಿದ ಡಿಸಿ

ಸಭೆಯಲ್ಲಿ ತಹಶೀಲ್ದಾರ್ ಗೋವಿಂದರಾಜ್ ಮಾತನಾಡಿ, ಪ್ರತಿ ವರ್ಷ ಹೇಗೆ ಜಾತ್ರೆ ನಡೆಸಿಕೊಂಡು ಹೋಗುತ್ತೀರೋ ಅದೇ ಪದ್ದತಿಯಂತೆ ಆಚರಿಸಿ. ಅದಕ್ಕೆ ನಮ್ಮ ಸಂಪೂರ್ಣ ಸಹಕಾರವಿರುತ್ತದೆ. ಹದಿಮೂರು ದಿನಗಳ ಕಾಲ ಜಾತ್ರೆ ಶಾಂತಿಯುತವಾಗಿ ನಡೆಯಬೇಕು. ಅದಕ್ಕೆ ಬೇಕಾದ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳಿ, ನಿಮ್ಮ ಜೊತೆ ತಾಲ್ಲೂಕು ಆಡಳಿತವಿರುತ್ತದೆ ಎಂದು ಭರವಸೆ ನೀಡಿದರು.

ಏಕನಾಥೇಶ್ವರಿ ಜೀರ್ಣೋದ್ದಾರ ಸಮಿತಿ ನಿರ್ದೇಶಕ ಬಿ.ರಾಮಜ್ಜ ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವೂ ಏಕನಾಥೇಶ್ವರಿ ಅಮ್ಮನವರ ಜಾತ್ರಾ ಮಹೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ನಡೆಸಲಾಗುವುದು. ಏ.1 ರಂದು ಜಾತ್ರೆಯ ಸಾರು ಹಾಕಲಾಗುತ್ತದೆ. ಏ.13ಕ್ಕೆ ಹೋಕಳಿಯೊಂದಿಗೆ ಜಾತ್ರೆ ಸಂಪನ್ನಗೊಳ್ಳಲಿದೆ.

ಎಲ್ಲರೂ ಸೇರಿ ಏಕನಾಥೇಶ್ವರಿ ಅಮ್ಮನ ಜಾತ್ರೆಯನ್ನು ಶಾಂತಿಯಿಂದ ಆಚರಿಸೋಣ. ಇದಕ್ಕೆ ನಿಮ್ಮ ಸಹಕಾರವಿರಲಿ ಎಂದರು.

Also Read: ಅಡಿಕೆ ಧಾರಣೆ | ಚನ್ನಗಿರಿಯಲ್ಲಿ ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ

ಕೋಮಲ ನರ್ಸಿಂಗ್ ಹೋಂನ ಡಾ.ಕೋಮಲ ಮರಿಗುದ್ದಿರವರು ಹತ್ತು ಲಕ್ಷ ರೂ. ವೆಚ್ಚ ಮಾಡಿ ಏಕನಾಥೇಶ್ವರಿ ಪಾದಗುಡಿಯ ಮುಂಭಾಗ ಧ್ವಾರಬಾಗಿಲು ನಿರ್ಮಿಸಿದ್ದಾರೆ. ಅದಕ್ಕಾಗಿ ಜಾತ್ರೆಯಲ್ಲಿ ಅವರನ್ನು ಗೌರವಿಸುವಂತೆ ಸಲಹೆ ನೀಡಿದರು.

ನಗರಸಭೆ ಮಾಜಿ ಅಧ್ಯಕ್ಷ ಹೆಚ್.ಮಂಜಪ್ಪ ಮಾತನಾಡಿ, ದಾವಣಗೆರೆಯಲ್ಲಿ ದುರ್ಗಮ್ಮನ ಜಾತ್ರೆ ಹೇಗೆ ವೈಭವೋಪೇತವಾಗಿ ನಡೆಯುತ್ತದೋ ಅದೇ ರೀತಿ ಚಿತ್ರದುರ್ಗದ ಪ್ರಮುಖ ಬೀದಿಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಿ ಏಕನಾಥೇಶ್ವರಿ ಅಮ್ಮನವರ ಜಾತ್ರೆಯನ್ನು ಅದ್ದೂರಿಯಾಗಿ ಆಚರಿಸೋಣ.

ತಾಲ್ಲೂಕು ಕಚೇರಿ, ನಗರಸಭೆ ಹಾಗೂ ವಿದ್ಯುತ್ ಇಲಾಖೆಯವರು ಹದಿಮೂರು ದಿನಗಳ ಕಾಲ ನಡೆಯುವ ಜಾತ್ರೆಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸಹಕರಿಸಬೇಕು ಎಂದು ಮನವಿ ಮಾಡಿದರು.

Also Read: ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ಖಂಡಿಸಿ ಬಿಜೆಪಿ ಪ್ರತಿಭಟನೆ

ನಗರಸಭೆ ಮಾಜಿ ಉಪಾಧ್ಯಕ್ಷ ಎಸ್.ಬಿ.ಎಲ್.ಮಲ್ಲಿಕಾರ್ಜುನ್ ಮಾತನಾಡಿ, ನಗರ ದೇವತೆ ತಿಪ್ಪಿನಘಟ್ಟಮ್ಮ-ಬರಗೇರಮ್ಮನವರ ಭೇಟಿ ಮಹೋತ್ಸವ ಹಿಂದಿನ ಕಾಲದಿಂದಲೂ ರಾಜಬೀದಿ ದೊಡ್ಡಪೇಟೆಯಲ್ಲಿ ನಡೆಯುತ್ತಿದೆ.

ಭೇಟಿ ಮಹೋತ್ಸವವನ್ನು ಕಣ್ತುಂಬಿಕೊಳ್ಳಲು ಕಿಷ್ಕಿಂದೆಯಾಗಿರುವ ದೊಡ್ಡಪೇಟೆ ರಸ್ತೆಯಲ್ಲಿ ಸಾವಿರಾರು ಭಕ್ತರು ಜಮಾಯಿಸುತ್ತಾರೆ. ಅದಕ್ಕಾಗಿ ಅಪ್ಪಣೆ ಕೇಳಿ ಭೇಟಿ ಮಹೋತ್ಸವವನ್ನು ನಗರದ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ನಡೆಸಿದರೆ ಇಡಿ ದುರ್ಗದ ಜನತೆಯೇ ನೋಡಿ ಸಂಭ್ರಮಿಸುತ್ತಾರೆಂದು ಸಲಹೆ ನೀಡಿದರು.

ಸಭೆಯಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಸಿ.ಟಿ.ಕೃಷ್ಣಮೂರ್ತಿ, ಮಾಜಿ ಸದಸ್ಯರುಗಳಾದ ಗಾಡಿ ಮಂಜುನಾಥ್, ಸಿ.ಟಿ.ರಾಜೇಶ್, ತಾಲ್ಲೂಕು ಕಚೇರಿಯ ರಾಜಸ್ವ ನಿರೀಕ್ಷಕ ಪ್ರಾಣೇಶ್, ಗ್ರಾಮ ಆಡಳಿತಾಧಿಕಾರಿ ಶ್ರೀನಿವಾಸ್, ನಗರಸಭೆ ನಾಮ ನಿರ್ದೇಶಿತ ಮಾಜಿ ಸದಸ್ಯ ಓಂಕಾರ್, ಗುತ್ತಿಗೆದಾರ ಕುಮಾರ್, ಮದಕರಿನಾಯಕ ಸಾಂಸ್ಕøತಿಕ ಕೇಂದ್ರದ ಅಧ್ಯಕ್ಷ ಡಿ.ಗೋಪಾಲಸ್ವಾಮಿನಾಯಕ, ಶಾರದ ಬ್ರಾಸ್ ಬ್ಯಾಂಡ್‍ನ ಗುರುಮೂರ್ತಿ ಸೇರಿದಂತೆ ಭಕ್ತರು ಭಾಗವಹಿಸಿದ್ದರು.

Click to comment

Leave a Reply

Your email address will not be published. Required fields are marked *

More in ಮುಖ್ಯ ಸುದ್ದಿ

To Top
Exit mobile version