
CHITRADURGA NEWS | 03 JUNE 2026
ಚಿತ್ರದುರ್ಗ: ಪ್ರತಿ ತಾಲ್ಲೂಕು ವ್ಯಾಪ್ತಿಯಲ್ಲಿ ಕಡಿಮೆ ಇಳುವರಿ ಇರುವ ಕೊಳವೆಬಾವಿಗಳ ಪೈಕಿ, ಶೇ.10 ರಷ್ಟು ಕೊಳವೆ ಬಾವಿಗಳ ರೀ ಬೋರಿಂಗ್ ಮಾಡಲು ಆದ್ಯತೆ ನೀಡಿ ಕ್ರಿಯಾ ಯೋಜನೆ ರೂಪಿಸುವಂತೆ ಜಿ.ಪಂ.ಸಿಇಓ ಡಾ.ಆಕಾಶ್ ಅಧಿಕಾರಿಗಳಿಗೆ ಸೂಚಿಸಿದರು.
ಇದನ್ನೂ ಓದಿ: ಸಣ್ಣ ಜಿರಳೆಗಳಿಂದ ತೊಂದರೆಯಾಗುತ್ತಿದೆಯೇ? ಹಾಗಾದ್ರೆ ರಾತ್ರಿ ಈ ಸರಳ ಮನೆಮದ್ದನ್ನು ಬಳಸಿ
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹೊಸ ಬೋರ್ವೆಲ್ಗಳ ಬದಲು ರೀ ಬೋರಿಂಗ್ ಮಾಡಲು ಅಧಿಕಾರಿಗಳು ಪ್ರಯತ್ನಿಸಬೇಕು. ಹೊಸ ಬೋರ್ವೆಲ್ ಕೊರೆದರೆ, ವಿದ್ಯುತ್ ಸಂಪರ್ಕ, ಪೈಪ್ ಲೈನ್ ಅಳವಡಿಕೆ ಸೇರಿದಂತೆ ಅನಗತ್ಯವಾಗಿ ಕಾಮಗಾರಿ ವೆಚ್ಚ ಹೆಚ್ಚಾಗುತ್ತದೆ. ಅಂರ್ತಜಲ ಸಹ ಅತ್ಯಂತ್ಯ ಜಾಗರೂಕವಾಗಿ ಬಳಸಬೇಕಾದ ಸಂಪನ್ಮೂಲವಾಗಿದೆ.
ಜಲ ಮರುಪೂರಣ, ಮಳೆ ಕೊಯ್ಲು ಅಂತಹ ಯೋಜನೆಗಳನ್ನು ರೂಪಿಸುವ ಮೂಲಕ ಅಂರ್ತಜಲ ಹೆಚ್ಚಳಕ್ಕೆ ಪ್ರಯತ್ನಿಸಬೇಕು. ಮುಂದಿನ ಬಾರಿಗೆ ಶೇ.10 ರಷ್ಟು ಕೊಳವೆ ಬಾವಿಗಳ ರೀ ಬೋರಿಂಗ್ ಯೋಜನೆ ರೂಪಿಸದಿದ್ದರೆ, ಯಾವುದೇ ಕಾಮಗಾರಿಗಳಿಗೆ ಅನುಮೋದನೆ ನೀಡುವುದಿಲ್ಲ. ಈ ಬಗ್ಗೆ ಜನಪ್ರತಿನಿಧಿಗಳಿಗೆ ಅಧಿಕಾರಿಗಳು ಮನವರಿಕೆ ಮಾಡಿಕೊಡಬೇಕು ಎಂದು ಸಿಇಓ ಡಾ.ಆಕಾಶ್ ನಿರ್ದೇಶನ ನೀಡಿದರು.
ಇದನ್ನೂ ಓದಿ: ದಿನ ಭವಿಷ್ಯ | ಜೂನ್ 03 | ಮಾನಸಿಕ ಒತ್ತಡ, ಅರೋಗ್ಯದಲ್ಲಿ ಜಾಗೃತಿ ವಹಿಸಿ
ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಆರು ತಾಲ್ಲೂಕುಗಳಿಗೆ ರೂ. 2 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಕ್ರಿಯಾ ಯೋಜನೆಗಳಿಗೆ ತಪ್ಪದೇ ಆಯಾ ಸ್ಥಳೀಯ ಶಾಸಕರುಗಳ ಅನುಮೋದನೆ ಪಡೆಯಬೇಕು ಎಂದು ಸಿಇಓ ಡಾ.ಆಕಾಶ್ ಹೇಳಿದರು.
ತಾಲ್ಲೂಕುವಾರು ಕಾಮಗಾರಿಗಳ ವಿವರ:
ಚಳ್ಳಕೆರೆ ತಾಲ್ಲೂಕಿಗೆ ಒಟ್ಟು ರೂ. 30 ಲಕ್ಷ ಅನುದಾನ ಲಭಿಸಿದ್ದು, 18 ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಇದರಲ್ಲಿ ಮುಖ್ಯವಾಗಿ 9 ಹೊಸ ಕೊಳವೆಬಾವಿಗಳನ್ನು ಕೊರೆಯುವ ಕೆಲಸ ಹಾಗೂ 1 ರೀಬೋರ್ ಕಾಮಗಾರಿ ಸೇರಿದೆ. ಸಾರ್ವಜನಿಕರಿಗೆ ನೀರು ತಲುಪಿಸಲು 7 ಕಡೆ ಪೈಪ್ ಲೈನ್ ಹಾಗೂ 1 ಪಂಪ್ ಮೋಟರ್ ಅಳವಡಿಸಲಾಗುತ್ತಿದೆ.
ಚಿತ್ರದುರ್ಗ ತಾಲ್ಲೂಕಿಗೆ ರೂ.30 ಲಕ್ಷ ಅನುದಾನ ನೀಡಲಾಗಿದ್ದು, ಒಟ್ಟು 19 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಇದರಲ್ಲಿ 8 ಹೊಸ ಕೊಳವೆಬಾವಿ ಹಾಗೂ 3 ರೀಬೋರ್ ಮಾಡಲಾಗುತ್ತಿದೆ. 3 ಖಾಸಗಿ ಕೊಳವೆಬಾವಿ ಬಾಡಿಗೆಗೆ ಪಡೆಯಲು ಮತ್ತು 2 ಟ್ಯಾಂಕರ್ಗಳ ಮೂಲಕ ನೀರು ಸರಬರಾಜು ಮಾಡಲು ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಉಳಿದಂತೆ 2 ಪೈಪ್ ಲೈನ್ ಮತ್ತು 1 ಪಂಪ್ ಮೋಟರ್ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ.
ಇದನ್ನೂ ಓದಿ: ಪಿತ್ತಗಲ್ಲುಗಳಿಗೆ ಚಿಕಿತ್ಸೆ ನೀಡದಿದ್ದರೆ ಈ ಗಂಭೀರ ಸಮಸ್ಯೆಗಳಿಗೆ ಕಾರಣವಾಗಬಹುದು ಎಚ್ಚರ
ಹಿರಿಯೂರು ತಾಲ್ಲೂಕಿಗೆ ರೂ.40 ಲಕ್ಷ ಅನುದಾನ ಹಂಚಿಕೆಯಾಗಿದೆ. ಹೊಸದಾಗಿ 6 ಕೊಳವೆಬಾವಿ, 19 ರೀಬೋರ್ ಹಾಗೂ 5 ಫ್ಲಷಿಂಗ್ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಜೊತೆಗೆ 4 ಪೈಪ್ ಲೈನ್ ಕೆಲಸಗಳೂ ಸೇರಿ ಒಟ್ಟು 34 ಕಾಮಗಾರಿಗಳು ಪ್ರಗತಿಯಲ್ಲಿವೆ.
ಹೊಸದುರ್ಗ ತಾಲ್ಲೂಕಿಗೆ ರೂ. 30 ಲಕ್ಷ ಬಿಡುಗಡೆಯಾಗಿದ್ದು, 19 ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಒಟ್ಟು 18 ಹೊಸ ಕೊಳವೆಬಾವಿಗಳನ್ನು ಕೊರೆಯಲಾಗುತ್ತಿದೆ ಮತ್ತು 1 ಪೈಪ್ ಲೈನ್ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ.
ಹೊಳಲ್ಕೆರೆ ತಾಲ್ಲೂಕಿಗೆ ರೂ. 40 ಲಕ್ಷ ಅನುದಾನ ಸಂದಿದೆ. 25 ಹೊಸ ಕೊಳವೆಬಾವಿಗಳನ್ನು ಕೊರೆಯಲಾಗುತ್ತಿದೆ. ಮೊಳಕಾಲ್ಮುರು ತಾಲ್ಲೂಕಿಗೆ ರೂ.30 ಲಕ್ಷ ಅನುದಾನದಲ್ಲಿ 2 ಪೈಪ್ ಲೈನ್ ಹಾಗೂ 7 ಪಂಪು ಮೋಟಾರ್ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಸಭೆಯಲ್ಲಿ ಈ ಎಲ್ಲಾ ಕಾಮಗಾರಿಗಳ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಯಿತು.
ಇದನ್ನೂ ಓದಿ: ಅಡಿಕೆ ಧಾರಣೆ | 2 ಜೂನ್ | ಯಾವ ಅಡಿಕೆಗೆ ಎಷ್ಟು ರೇಟ್ ?
ಜಿ.ಪಂ.ಉಪಕಾರ್ಯದರ್ಶಿ ಬಾಬು, ಯೋಜನಾ ನಿರ್ದೇಶಕಿ ಜಯಲಕ್ಷ್ಮಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಅಮರನಾಥ್ ಜೈನ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಬಿ.ಮಂಜುನಾಥ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಕಾರ್ ಸೇರಿದಂತೆ ಇತರೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
