CHITRADURGA NEWS | 27 MAY 2026
ಚಿತ್ರದುರ್ಗ: ಜೈಲುಗಳು ಮಾನಸಿಕವಾಗಿ ಮನುಷ್ಯನನ್ನು ಬದಲಾವಣೆ ಮಾಡುವ ಸ್ಥಳಗಳಾಗಿವೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ ಹೇಳಿದರು.
ಇದನ್ನೂ ಓದಿ: ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಖಾಸಗಿ ಬಸ್ ಮಾಲಿಕರ ತೀರ್ಮಾನ
ಕನ್ನಡ ಮತ್ತು ಸಂಸ್ಕøತಿ ನಿರ್ದೇಶನಾಲಯ, ಪ್ರಜಾ ಸೇವಾ ಸಾಂಸ್ಕøತಿಕ ಮತ್ತು ಕ್ರೀಡಾ ಸಂಘ ಮಳಲಿ, ಚಿತ್ರದುರ್ಗ ಇವುಗಳ ಸಂಯುಕ್ತಾಶ್ರಯದಲ್ಲಿ ಕಾರಾಗೃಹದಲ್ಲಿ ಸೋಮವಾರ ನಡೆದ ಸಾಂಸ್ಕøತಿಕ ಸೊಬಗು-2026 ಉದ್ಘಾಟಿಸಿ ಮಾತನಾಡಿದರು.
ಸಂಗೀತಕ್ಕೆ ಮನಸ್ಸಿಗೆ ಮುದ ನೀಡುವ ಶಕ್ತಿಯಿದೆ. ವಿಚಾರಣಾಧೀನ ಖೈದಿಗಳು ನಾನಾ ಕಾರಣಗಳಿಂದ ಜೈಲು ಸೇರಿರಬಹುದು. ನೀವುಗಳು ಇಲ್ಲಿ ಏಕಾಂತದಲ್ಲಿರುವುದರಿಂದ ಮನಸ್ಸು ಬದಲಾವಣೆಗೆ ಅವಕಾಶವಿದೆ. ಸಿಟ್ಟಿನ ಕೈಗೆ ಬುದ್ದಿಯನ್ನು ಕೊಡಬೇಡಿ.
ಸ್ವಾತಂತ್ರ ಸಮರದಲ್ಲಿ ಪಾಲ್ಗೊಂಡು ಜೈಲು ವಾಸ ಅನುಭವಿಸಿರುವವರು ತಮ್ಮ ಅನಿಸಿಕೆ ಅಭಿಪ್ರಾಯಗಳನ್ನು ಪುಸ್ತಕ ರೂಪದಲ್ಲಿ ಬರೆದಿದ್ದಾರೆ. ಜೈಲಿನಲ್ಲಿರುವ ಗೊಂದಲದ ಮನಸ್ಸುಗಳಿಗೆ ಸಂಗೀತ ಸಂತೋಷ, ಉಲ್ಲಾಸವನ್ನುಂಟು ಮಾಡುತ್ತದೆ ಎಂದರು.
ಇದನ್ನೂ ಓದಿ: ಬೈಕ್ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್ ಮಾತನಾಡಿ, ಪ್ರತಿಯೊಬ್ಬರಲ್ಲಿಯೂ ಒಂದಲ್ಲ ಒಂದು ರೀತಿಯ ಕಲೆಯಿರುತ್ತದೆ. ಹೊರ ಹಾಕಲು ಅವಕಾಶ ಸಿಗುವುದಿಲ್ಲ. ಗೀತಗಾಯನ, ತತ್ವಪದ, ಜಾನಪದ ಹಾಡುಗಳು ಮನಸ್ಸನ್ನು ಅರಳಿಸುತ್ತವೆ. ಬದುಕನ್ನು ಹಸನು ಮಾಡಿಕೊಳ್ಳುವ ಸಂದರ್ಭದಲ್ಲಿ ತತ್ವವಿರಬೇಕು. ಆಗ ಮಾತ್ರ ಆಚಾರವಂತ, ವಿಚಾರವಂತನಾಗಲು ಸಾಧ್ಯ ಎಂದು ತಿಳಿಸಿದರು.
ತಪ್ಪು ಮಾಡಿಯೋ ಇಲ್ಲ ಯಾವ ತಪ್ಪನ್ನು ಮಾಡದಿದ್ದರೂ ಕೆಲವೊಮ್ಮೆ ಜೈಲು ಸೇರುವ ಸಂದರ್ಭ ಎದುರಾಗುತ್ತದೆ. ನೀತಿ, ನೀಯತ್ತು, ಧರ್ಮ, ಮಾತಿನಲ್ಲಿ ಹಿಡಿತವಿದ್ದವರು ಆರೋಗ್ಯ ಪೂರ್ಣ ಬದುಕು ಕಟ್ಟಿಕೊಳ್ಳಬಹುದು. ದಾಸರ ಗೀತೆ, ರಂಗಗೀತೆ, ಜಾನಪದ ಗೀತೆ ಇವುಗಳು ವಿವೇಚನೆ ಮಾಡಲು ಅವಕಾಶ ನೀಡುತ್ತವೆ ಎಂದು ನುಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಬಂಧೀಖಾನೆ ಅಧೀಕ್ಷಕ ಸಿದ್ದರಾಮ ಬಿ.ಪಾಟೀಲ್ ಮಾತನಾಡುತ್ತ ಬಂಧಿಖಾನೆಯಲ್ಲಿರುವವರು ತಮ್ಮೊಳಗಿನ ಕಾವ್ಯ, ಸಂಗೀತವನ್ನು ಮುಚ್ಚಿಟ್ಟುಕೊಳ್ಳುತ್ತಾರೆ. ಇಂತಹ ಕಾರ್ಯಕ್ರಮಗಳ ಮೂಲಕ ನಿಮ್ಮಲ್ಲಿರುವ ಪ್ರತಿಭೆಯನ್ನು ಹೊರ ಸೂಸಬೇಕೆಂದು ವಿಚಾರಣಾಧೀನ ಖೈದಿಗಳಿಗೆ ತಿಳಿಸಿದರು.
ಇದನ್ನೂ ಓದಿ: ಕರ್ನಾಟಕ ಪ್ರಾಚೀನ ಹಸ್ತಪ್ರತಿಗಳ ಸಮೀಕ್ಷೆಯ ಪ್ರತಿಯನ್ನು ಜಿಲ್ಲಾಧಿಕಾರಿ ವೆಂಕಟೇಶ್ ಬಿಡುಗಡೆ
ಜೈಲರ್ ರಾಜೇಂದ್ರ ಕೊಪರ್ಡೆ, ರಾಜ್ಯ ಯುವ ಪ್ರಶಸ್ತಿ ಪುರಸ್ಕøತ ಶ್ರೀನಿವಾಸ ಮಳಲಿ, ಭಾಗ್ಯಮ್ಮ ಇದ್ದರು.
ಎಂ.ಕೆ.ಹರೀಶ್ ಮತ್ತು ತಂಡ, ಕೆ.ಗಂಗಾಧರ್ ಮತ್ತು ಸಂಗಡಿಗರು, ಚನ್ನಬಸಪ್ಪ ಮತ್ತು ಸಂಗಡಿಗರು, ಮಹಿಳಾ ಪೊಲೀಸ್ ಠಾಣೆ ಸಬ್ಇನ್ಸ್ಪೆಕ್ಟರ್ ಯಶೋಧಮ್ಮ ಇವರುಗಳು ಜಾನಪದ ಹಾಡು, ರೈತ ಗೀತೆ, ಹಳೆ ಚಿತ್ರಗೀತೆಗಳನ್ನು ಹಾಡಿ ಬಂಧಿಖಾನೆಯಲ್ಲಿರುವ ಖೈದಿಗಳನ್ನು ರಂಜಿಸಿದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
