
CHITRADURGA NEWS | 18 DECEMBER 2024
ಚಿತ್ರದುರ್ಗ: ಚಳ್ಳಕೆರೆಯಿಂದ ಚಿತ್ರದುರ್ಗಕ್ಕೆ ಬರುತ್ತಿದ್ದ ಖಾಸಗಿ ಬಸ್ ಇಂದು ಬೆಳಗ್ಗೆ ಮರಕ್ಕೆ ಡಿಕ್ಕಿಯಾಗಿದ್ದು, 7 ಜನ ಗಾಯಗೊಂಡಿದ್ದಾರೆ.
ಚಳ್ಳಕೆರೆಯಿಂದ ಚಿತ್ರದುರ್ಗದ ಕಡೆಗೆ ಬರುತ್ತಿದ್ದ ಮಹಾದೇವಿ ಬಸ್ ಚಾಲಕನ ನಿಯಂತ್ರಣ ತಪ್ಪಿ ದಂಡಿನಕುರುಬರಹಟ್ಟಿ ಗೇಟ್ ಬಳಿ ಮರಕ್ಕೆ ಡಿಕ್ಕಿಯಾಗಿದೆ.
ಇದನ್ನೂ ಓದಿ: ಲಂಚ ಸ್ವೀಕರಿಸುತ್ತಿದ್ದ ಖಜಾನೆ ಇಲಾಖೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ
ಈ ವೇಳೆ ಬಸ್ಸಿನಲ್ಲಿದ್ದ ಚಿತ್ರದುರ್ಗದ ಕೋಳಿಬುರುಜನಹಟ್ಟಿ ವಾಸಿ ರಮೇಶ್, ಸೈಯರ್ ತಾಹೀರ್, ದಿನೇಶ್, ಇಸ್ಮಾಯಿಲ್, ಫರೀದಾಬಾನು, ಕದುರಮ್ಮ ಮತ್ತಿತರರು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಅಂಬ್ಯುಲೆನ್ಸ್ ಮೂಲಕ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಈ ಬಗ್ಗೆ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

