Connect with us

    ಚಿತ್ರದುರ್ಗದಲ್ಲಿ ಅಜ್ಜಿ ಇಂದಿರಾ ನೆನೆದ ಪ್ರಿಯಾಂಕಾ ಗಾಂಧಿ

    ಇಂದಿರಾ ಗಾಂಧಿ - ಪ್ರಿಯಾಂಕಾ ಗಾಂಧಿ

    ಲೋಕಸಮರ 2024

    ಚಿತ್ರದುರ್ಗದಲ್ಲಿ ಅಜ್ಜಿ ಇಂದಿರಾ ನೆನೆದ ಪ್ರಿಯಾಂಕಾ ಗಾಂಧಿ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 24 APRIL 2024

    ಚಿತ್ರದುರ್ಗ: ರಾಜ್ಯದಲ್ಲಿ ರಂಗೇರಿರುವ ಲೋಕಸಭಾ ಚುನಾವಣಾ ಅಖಾಡಕ್ಕೆ ಚಿತ್ರದುರ್ಗದಿಂದ ಕಾಲಿಟ್ಟ ಪ್ರಿಯಾಂಕಾ ಗಾಂಧಿ ಭಾಷಣದ ಆರಂಭದಲ್ಲೇ ತನ್ನ ಅಜ್ಜಿ, ಮಾಜಿ ಪ್ರಧಾನಿ ಇಂದಿರಾ ಗಾಂಧಿಯನ್ನು ಸ್ಮರಿಸಿದರು.

    ಕರ್ನಾಟಕದಲ್ಲಿ ಪ್ರಿಯಾಂಕಾ ಗಾಂಧಿ ನಡೆಸಿದ ಮೊದಲ ಚುನಾವಣಾ ಪ್ರಚಾರ ಇದಾಗಿದ್ದು, ಕೋಟೆನಾಡು ಚಿತ್ರದುರ್ಗದಿಂದ ಕಾಂಗ್ರೆಸ್ ಪಾಳೆಯದಲ್ಲಿ ಉತ್ಸಾಹ ತುಂಬಿದ್ದಾರೆ.

    ಇದನ್ನೂ ಓದಿ: ಏಪ್ರಿಲ್ 23ರ ಅಡಿಕೆ ಧಾರಣೆ | ಭೀಮಸಮುದ್ರದಲ್ಲಿ ರಾಶಿ ಅಡಿಕೆ ಬೆಲೆ 1500 ಜಿಗಿತ

    ಚಿತ್ರದುರ್ಗದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ನ್ಯಾಯ ಸಂಕಲ್ಪ ಸಮಾವೇಶ ಉದ್ಘಾಟಿಸಿ ಮಾತನಾಡುತ್ತಾ, ದಶಕಗಳ ಹಿಂದೆ ಇದೇ ವೇದಿಕೆಯಲ್ಲಿ ನನ್ನ ಅಜ್ಜಿ ಇಂದಿರಾ ಗಾಂಧಿ ಮಾತನಾಡಿದ್ದರು ಎಂದರು.

    ನನ್ನ ಅಜ್ಜಿ ಮಾತನಾಡಿದ್ದ ವೇದಿಕೆಯಲ್ಲಿ ನಾನು ಮಾತನಾಡುತ್ತಿರುವುದು ಸಂತಸ ತಂದಿದೆ ಎಂಬ ಭಾವನೆಯನ್ನು ಪ್ರಿಯಾಂಕಾ ಗಾಂಧಿ ಹಂಚಿಕೊಂಡರು.

    ಇದನ್ನೂ ಓದಿ: ಪ್ರಿಯಾಂಕ ಗಾಂಧಿ ಹೆಲಿಕ್ಯಾಪ್ಟರ್‌ನತ್ತ ಚುನಾವಣಾಧಿಕಾರಿಗಳ ದೌಡು

    ಪ್ರಿಯಾಂಕಾ ಗಾಂಧಿ ಅವರಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿಯನ್ನು ಕಾಣುತ್ತಿರುವ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಅನೇಕ ಸಲ ಇಂದಿರಾ ಪ್ರತಿರೂಪ ಎಂದು ಬಣ್ಣಿಸಿದ್ದಾರೆ. ಭವಿಷ್ಯದ ನಾಯಕಿ ಎಂದೇ ಬಿಂಬಿತವಾಗುತ್ತಿರುವ ಪ್ರಿಯಾಂಕಾ ಗಾಂಧಿ ಚಿತ್ರದುರ್ಗಕ್ಕೆ ಭೇಟಿ ನೀಡಿದ ಮೊದಲ ಭೇಟಿಯೂ ಇದಾಗಿರುವುದು ವಿಶೇಷವಾಗಿದೆ.

    ಕಾಂಗ್ರೆಸ್ ನ್ಯಾಯ ಸಂಕಲ್ಪ ಸಮಾವೇಶ ಉದ್ಘಾಟಿಸಿದ ಪ್ರಿಯಾಂಕಾ ಗಾಂಧಿ

    ಕಾಂಗ್ರೆಸ್ ನ್ಯಾಯ ಸಂಕಲ್ಪ ಸಮಾವೇಶ ಉದ್ಘಾಟಿಸಿದ ಪ್ರಿಯಾಂಕಾ ಗಾಂಧಿ

    ನರೇಂದ್ರ ಮೋದಿ ವಿರುದ್ಧ ಪ್ರಿಯಾಂಕಾ ವಾಗ್ದಾಳಿ:

    ಪ್ರಧಾನಿ ನರೇಂದ್ರ ಮೋದಿ ವಿಶ್ವ ಮಟ್ಟದ ನಾಯಕ, ಅವರಿಗೆ ಜಗತ್ತಿನ ನಾನಾ ರಾಷ್ಟ್ರಗಳು ಗೌರವ ಕೊಡುತ್ತವೆ ಎಂದು ಭಾರತದಲ್ಲಿ ಬಿಜೆಪಿ ಪ್ರಚಾರ ಮಾಡುತ್ತಿದೆ. ಮೋದಿ ಚಿಟಿಕೆ ಹೊಡೆದರೆ ಯುದ್ಧವೇ ನಿಲ್ಲುತ್ತದೆ ಎಂದು ಬಿಂಬಿಸಲಾಗಿದೆ. ಆದರೆ, ಇಷ್ಟು ದೊಡ್ಡ ನಾಯಕನಿದ್ದು, ಭಾರತದಲ್ಲಿ ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆ ಏಕೆ ಕಾಡುತ್ತಿದೆ. ಯಾಕೆ ಪರಿಹರಿಸಲು ಸಾಧ್ಯವಾಗಿಲ್ಲ ಎಂದು ಟಾಂಗ್ ನೀಡಿದರು.

    ಇದನ್ನೂ ಓದಿ: ಮುರುಘಾ ಶರಣರಿಗೆ ಮತ್ತೆ ಸಂಕಷ್ಟ | ಶ್ರೀಗಳ ಜಾಮೀನಿಗೆ ತಡೆಯಾಜ್ಞೆ ನೀಡಿದ ಸುಪ್ರೀಂ ಕೋರ್ಟ್

    ದೇಶದಲ್ಲಿ ನಿರುದ್ಯೋಗ ಪ್ರಮಾಣ ಕಳೆದ 45 ವರ್ಷಗಳಲ್ಲೇ ಗರಿಷ್ಠವಾಗಿದೆ. 70 ಕೋಟಿ ನಿರುದ್ಯೋಗಿಗಳು ದೇಶದಲ್ಲಿದ್ದಾರೆ. ಕೇಂದ್ರ ಸರ್ಕಾರದಲ್ಲೇ 30 ಲಕ್ಷ ಹುದ್ದೆಗಳು ಖಾಲಿಯಿವೆ ಎಂದು ಕುಟುಕಿದರು.

    ದೇಶದಲ್ಲಿ ಜನಜೀವನ ಸಂಘರ್ಷಕ್ಕೆ ಸಿಲುಕುತ್ತಲೇ ಇದೆ. ಶ್ರಮಜೀವಿಗಳು ಎಷ್ಟೇ ಕಷ್ಟಪಟ್ಟರೂ ಅವರ ಬದುಕಿನ ಸುಧಾರಣೆ ಆಗುತ್ತಿಲ್ಲ. ಆದರೆ, ಮೋದಿ ಅವರ ಇಬ್ಬರು ಗೆಳೆಯರು ಮಾತ್ರ ದಿನೇ ದಿನೇ ಬೆಳೆಯುತ್ತಿದ್ದಾರೆ.

    ಇದನ್ನೂ ಓದಿ: ಘಟಾನುಘಟಿಗಳ ನಡುವೆ ಜಿದ್ದಾಜಿದ್ದಿಗೆ ಸಾಕ್ಷಿ ಕೋಟೆನಾಡು | ಚಿತ್ರದುರ್ಗ ಲೋಕಸಭೆಯ ಸಮಗ್ರ ಮಾಹಿತಿ

    ಕೋವಿಡ್ ಪರಿಸ್ಥಿತಿಯಲ್ಲೂ ಅವರ ಆದಾಯ ಏರಿಕೆಯಾಗಿದೆ. ಉದ್ಯಮಿಗಳ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಲಾಗಿದೆ. ಆದರೆ, ರೈತರ ಬೆಳೆಗಳಿಗೆ ಬೆಂಬಲ ಬೆಲೆ ಸಿಗುತ್ತಿಲ್ಲ ಎಂದರು.

    ದೇಶದಲ್ಲಿ ಎರಡು ರೀತಿಯ ಸತ್ಯಗಳಿವೆ. ಒಂದು ನಿತ್ಯದ ಜಂಜಾಟದ ಬದುಕು, ಬೆಲೆ ಏರಿಕೆ. ಇನ್ನೊಂದು ಮಾಧ್ಯಮಗಳಲ್ಲಿ ತೋರಿಸುವ ದೇಶದ ವೈಭವ. ಆದರೆ, ವಾಸ್ತವದ ಬದುಕು ದುಸ್ತರವಾಗಿದೆ. ಪೆಟ್ರೋಲ್, ಡೀಸೆಲ್, ಗ್ಯಾಸ್, ದಿನಸಿ, ಬಂಗಾರ, ಬೆಳ್ಳಿ ಬೆಲೆಗಳ ಏರಿಕೆಯಿಂದ ಜನ ತತ್ತರಿಸಿದ್ದಾರೆ ಎಂದರು.

    ಪ್ರಿಯಾಂಕಾ ಗಾಂಧಿ

    ಪ್ರಿಯಾಂಕಾ ಗಾಂಧಿ

    ಎಲೆಕ್ಟ್ರೋಲ್ ಬಾಂಡ್ ಹೆಸರಿನಲ್ಲಿ ಸಾವಿರಾರು ಕೋಟಿ ಚಂದಾ ಎತ್ತಲಾಗಿದೆ. ಇದರಲ್ಲಿ ಆಗುತ್ತಿರುವ ವ್ಯತ್ಯಾಸ ಗಮನಿಸಿದ ಸುಪ್ರೀಂ ಕೋರ್ಟ್ ಎಲ್ಲ ವರದಿಗಳನ್ನು ತರಿಸಿಕೊಂಡು ಬಹಿರಂಗಪಡಿಸಿದಾಗ ಅನೇಕ ಸತ್ಯಗಳು ಬಯಲಿಗೆ ಬಂದಿವೆ. ಐಟಿ, ಇಡಿ ದಾಳಿ ನಡೆದ ಕಂಪನಿಗಳು ಚಂದಾ ಕೊಟ್ಟಿವೆ. ಆನಂತರ ಅವರ ಮೇಲಿನ ಪ್ರಕರಣಗಳು ಮುಚ್ಚಿ ಹೋಗಿವೆ. ಲಾಭವೇ ಇಲ್ಲದ ಕಂಪನಿಗಳು ಸಾವಿರ ಕೋಟಿ ದೇಣಿಗೆ ನೀಡಿವೆ. ಇದನ್ನು ಪ್ರಶ್ನೆ ಮಾಡಿದವರ ಮೇಲೆ ದೂರು ದಾಖಲಿಸಿ ಧ್ವನಿ ಅಡಗಿಸುವ ಕೆಲಸ ಮಾಡುತ್ತಿದ್ದಾರೆ. ಇಬ್ಬರು ಮುಖ್ಯಮಂತ್ರಿಗಳನ್ನು ಜೈಲಿಗೆ ಹಾಕಿದ್ದಾರೆ ಎಂದು ಹೇಳಿದರು.

    ಇದನ್ನೂ ಓದಿ: ಗೋವಿಂದ ಕಾರಜೋಳ ಗೆದ್ದರೆ ಕೇಂದ್ರದಲ್ಲಿ ಮಂತ್ರಿ ಆಗ್ತಾರೆ | ಗೂಳಿಹಟ್ಟಿ ಶೇಖರ್

    ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್, ಸಚಿವ ಡಿ.ಸುಧಾಕರ್, ಶಾಸಕರಾದ ಟಿ.ಬಿ.ಜಯಚಂದ್ರ, ಎನ್.ವೈ.ಗೋಪಾಲಕೃಷ್ಣ, ಟಿ.ರಘುಮೂರ್ತಿ, ಬಿ.ಜಿ.ಗೋವಿಂದಪ್ಪ, ಕೆ.ಸಿ.ವೀರೇಂದ್ರ ಪಪ್ಪಿ, ಬಸವಂತಪ್ಪ, ವೆಂಕಟೇಶ್, ಮಾಜಿ ಸಚಿವ ಎಚ್.ಆಂಜನೇಯ, ಮಾಜಿ ಶಾಸಕಿ ಪೂರ್ಣಿಮಾ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದರು.

    Click to comment

    Leave a Reply

    Your email address will not be published. Required fields are marked *

    More in ಲೋಕಸಮರ 2024

    To Top