CHITRADURGA NEWS | 05 JUNE 2025
ಚಿತ್ರದುರ್ಗ: ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ 2024ನೇ ವರ್ಷದಲ್ಲಿ ಮುದ್ರಣವಾಗಿರುವ ಸಾಹಿತ್ಯ ಕೃತಿಗಳ ಬಹುಮಾನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
Also Read: ದ್ವಿತೀಯ PUC ಪರೀಕ್ಷೆ-3 ಜೂನ್ 9 ರಿಂದ 20ರವರೆಗೆ | ಜಿಲ್ಲೆಯ 06 ಪರೀಕ್ಷಾ ಕೇಂದ್ರಗಳಲ್ಲಿ 8658 ವಿದ್ಯಾರ್ಥಿಗಳು

ಕಾವ್ಯ ಹಸ್ತಪ್ರತಿ, ಕಾದಂಬರಿ, ಸಣ್ಣಕತೆ, ನಾಟಕ, ಲಲಿತ ಪ್ರಬಂಧ, ಪ್ರವಾಸ ಸಾಹಿತ್ಯ, ಜೀವನ ಚರಿತ್ರೆ, ಆತ್ಮಕತೆ, ಸಾಹಿತ್ಯ ವಿಮರ್ಶೆ, ಗ್ರಂಥ ಸಂಪಾದನೆ (ಪ್ರಾಚೀನ ಕೃತಿಗಳ ಸಂಪಾದನೆ), ಮಕ್ಕಳ ಸಾಹಿತ್ಯ, ವಿಜ್ಞಾನ ಸಾಹಿತ್ಯ, ಮಾನವಿಕ ವಿಷಯಗಳು, ಸಂಶೋಧನೆ, ಅನುವಾದ, ಸಂಕೀರ್ಣ ಸೇರಿದಂತೆ 22 ವಿಭಾಗಗಳಲ್ಲಿ ಕೃತಿಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಿದ್ದು, ಪ್ರತಿ ಪ್ರಕಾರದಲ್ಲಿ ವಿಮರ್ಶಕರು ಆಯ್ಕೆ ಮಾಡಿದ ಒಂದು ಕೃತಿಗೆ ಪ್ರಶಸ್ತಿ ನೀಡಲಾಗುತ್ತದೆ.
ಮರು ಮದ್ರಣಗೊಂಡ, ಪಿ.ಹೆಚ್.ಡಿ ಪದವಿಗೆ ಸಿದ್ದಪಡಿಸಿದ ಸಂಶೋಧನೆ ಗ್ರಂಥ, ಜನಪದ ಪ್ರಕಾರ, ಪಠ್ಯ ಪುಸ್ತಕಗಳು, ಅಕಾಡೆಮಿಯ ಗೌರವ ಪ್ರಶಸ್ತಿ ಪುರಸ್ಕೃತ ಸಾಹಿತಿಗಳ ಕೃತಿಗಳು, ಈಗಾಗಲೇ ಒಂದು ಪ್ರಕಾರದಲ್ಲಿ ಬಹುಮಾನ ಪಡೆದವರ ಕೃತಿ, ಒಟ್ಟಾರೆ ವಿವಿಧ ಮೂರು ಪ್ರಕಾರಗಳಲ್ಲಿ ಬಹುಮಾನ ಪಡೆದವರ ಕೃತಿಗಳನ್ನು ಬಹುಮಾನಕ್ಕಾಗಿ ಆಯ್ಕೆ ಮಾಡುವುದಿಲ್ಲ.
ಒಬ್ಬ ಲೇಖಕ ಮೂರು ಬಾರಿ ಬೇರೆ ಬೇರೆ ಪ್ರಕಾರದಲ್ಲಿ ಬಹುಮಾನ ಪಡೆಯಲು ಅವಕಾಶವಿದೆ. ಕೃತಿಗಳು 2024ರ ಜನವರಿ 1 ರಿಂದ ಡಿಸೆಂಬರ್ 31 ರೊಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರಬೇಕು.
Also Read: ವಿದ್ಯಾರ್ಥಿ ಬಸ್ ಪಾಸ್ ವಿತರಣೆ | ಎಲ್ಲೆಲ್ಲಿ ಅರ್ಜಿ ಸಲ್ಲಿಸಬಹುದು, ಇಲ್ಲಿದೆ ಮಾಹಿತಿ…
ಕೃತಿಯ ನಾಲ್ಕು ಪ್ರತಿಗಳನ್ನು ಜುಲೈ 15 ರೊಳಗೆ ರಿಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, 2 ನೇ ಮಹಡಿ, ಜೆ.ಸಿ.ರಸ್ತೆ, 560002 ಈ ವಿಳಾಸಕ್ಕೆ ರಿಜಿಸ್ಟರ್ ಅಂಚೆ ಅಥವಾ ಖುದ್ದಾಗಿ ಕಳುಹಿಸುವಂತೆ ಅಕಾಡೆಮಿಯು ಪ್ರಕಟಣೆಯಲ್ಲಿ ತಿಳಿಸಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
