
CHITRADURGA NEWS | 17 JULY 2024
ಚಿತ್ರದುರ್ಗ: ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ, ಶ್ರೀ ಸಂಪಿಗೆ ಸಿದ್ದೇಶ್ವರ ಪ್ರೌಢಶಾಲೆ ವತಿಯಿಂದ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಸಹಕಾರದ ಬಗ್ಗೆ ಪ್ರಬಂಧ ಸ್ಪರ್ಧೆ ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಚರ್ಚಾ ಸ್ಪರ್ಧೆಯನ್ನು ನಗರದ ಶ್ರೀ ಸಂಪಿಗೆ ಸಿದ್ದೇಶ್ವರ ಪ್ರೌಢಶಾಲೆಯ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.
ಇದನ್ನೂ ಓದಿ: BANGALORE; ಚಿತ್ರದುರ್ಗದ ಅಭಿವೃದ್ಧಿ ಕುರಿತು ಬೆಂಗಳೂರಿನಲ್ಲಿ ಸಚಿವರು, ಸಂಸದರ ಸಭೆ

ಈ ಪ್ರಬಂಧ, ಚರ್ಚಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ, ಬಹುಮಾನ ವಿತರಣೆ ಮಾಡಲಾಯಿತು.
ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಪ್ರೌಢಶಾಲೆ ವಿದ್ಯಾರ್ಥಿಗಳು : ಹೊಳಲ್ಕೆರೆಯ ಟಿಪಿಸಿಕೆ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಸೈದಾ ಅರ್ಫ-ಪ್ರಥಮ ಸ್ಥಾನ, ಶ್ರೀ ಸಂಪಿಗೆ ಸಿದ್ದೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿ ಹೆಚ್.ಕೀರ್ತನಾ ದ್ವಿತೀಯ ಸ್ಥಾನ, ಕುರುಬರಹಳ್ಳಿಯ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿ ಅಲಿಯಾ ಪರ್ವಿಸ್ ತೃತೀಯ ಸ್ಥಾನ ಪಡೆದಿದ್ದಾರೆ.
ಚರ್ಚಾ ಸ್ಪರ್ಧೆಯಲ್ಲಿ ವಿಜೇತರಾದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು: ಕುಂಚಿಗನಾಳ್ ಮುರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜಿನ ರುಹಯ್ಯ್ ತಾಜ್, ಪ್ರಥಮ (ಪರವಾಗಿ), ಹೊಸದುರ್ಗ ತಾಲೂಕಿನ ನಿಜಲಿಂಗಪ್ಪ ಪದವಿ ಪೂರ್ವ ಕಾಲೇಜಿನ ರಮ್ಯ ಪ್ರಥಮ (ವಿರೋಧವಾಗಿ), ಎಸ್.ಆರ್.ಎಸ್.ಪದವಿ ಪೂರ್ವ ಕಾಲೇಜಿನ ವರ್ಷ ಎಸ್. ರೆಡ್ಡಿ ದ್ವಿತೀಯ (ಪರವಾಗಿ), ಎಸ್.ಜೆ.ಎಂ. ಪದವಿ ಪೂರ್ವ ಕಾಲೇಜಿನ ಅನುಷ ದ್ವಿತೀಯ (ವಿರೋಧವಾಗಿ) ಸ್ಥಾನ ಪಡೆದಿದ್ದಾರೆ.
ಇದನ್ನೂ ಓದಿ: HeavyRain; ದುರ್ಗದಲ್ಲಿ ಉತ್ತಮ ಮಳೆ | ಸಂಚಾರ ಅಸ್ತವ್ಯಸ್ತ | ನಗರದಲ್ಲಿ ಸುರಿದ ಮಳೆಯ ದೃಶ್ಯ ಇಲ್ಲಿವೆ
ಈ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ನಾಗಭೂಷಣ್ ಮಾತನಾಡಿ, ಒಂದು ಕುಟುಂಬದಲ್ಲಿ ಅಣ್ಣ, ತಮ್ಮ, ಅಕ್ಕ, ತಂಗಿ ನೀಡುವ ಸಹಕಾರ ಪ್ರಕ್ರಿಯೆ ನಡೆಯುತ್ತದೆ ಅದೇ ರೀತಿ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ಸಾಂಸ್ಕೃತಿಕವಾಗಿ ಎಲ್ಲಾ ಕ್ಷೇತ್ರಗಳಲ್ಲಿ ಸಹಕಾರ ತತ್ವ ಬಹಳ ಪ್ರಮುಖವಾಗಿದೆ.
ಈ ಹಿನ್ನೆಲೆಯಲ್ಲಿ ಪ್ರೌಢಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಲ್ಲಿ ಸಹಕಾರ ತತ್ವವನ್ನು ಜಾಗೃತಿ ಮೂಡಿಸುವಂತಹ ಕಾರ್ಯವನ್ನು ಪ್ರಬಂಧ ಮತ್ತು ಚರ್ಚಾ ಸ್ಪರ್ಧೆ ಮುಖಾಂತರ ಮಾಡಲಾಗಿದೆ.
ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಹೆಚ್.ಎಂ.ದ್ಯಾಮಣ್ಣ ಮಾತನಾಡಿ, ಸಹಕಾರ ಸಂಘಗಳು ಮತ್ತು ಬ್ಯಾಂಕುಗಳಲ್ಲಿ ರೈತರಿಗೆ ಸಾಲ ನೀಡುತ್ತಿರುವುದು ಮಹಾತ್ಮಗಾಂಧಿಜಿಯವರ ಕನಸು. ಪ್ರತಿ ಒಂದು ಹಳ್ಳಿಯಲ್ಲಿ ಒಂದು ಸಂಘ, ಒಂದು ಶಾಲೆ, ಒಂದು ಅಂಗನವಾಡಿ ಇರಬೇಕು ಎಂಬ ಕನಸು ಕಂಡಿದ್ದರು, ಅದೇ ರೀತಿ ಅಬಲ ವರ್ಗದವರು, ಹಿಂದುಳಿದ ಅಲ್ಪಸಂಖ್ಯಾತರು ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಬಲರಾಗಬೇಕು, ಇಂದಿನ ಮಕ್ಕಳೇ, ಮುಂದಿನ ಪ್ರಜೆಗಳು ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ಹೆಚ್ಚು ಭಾಗವಹಿಸಬೇಕು.
ಜಾತ್ಯಾತೀತವಾಗಿ ಪ್ರತಿಯೊಬ್ಬರು ಉತ್ತಮ ಪ್ರಜೆಗಳಾಗಬೇಕೆಂದರೆ ಶಿಕ್ಷಣ ಬಹಳ ಮುಖ್ಯ, ವಿದ್ಯಾರ್ಥಿ ದೆಸೆಯಲ್ಲಿಯೇ ಸಹಕಾರದ ಬಗ್ಗೆ ಅರಿವು ಮೂಡಿಸಬೇಕೆಂಬ ಉದ್ದೇಶದಿಂದ ಪ್ರತಿ ವರ್ಷದಂತೆ ಈ ವರ್ಷವು ಕೂಡ ಚರ್ಚಾ ಮತ್ತು ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಎಂದರು.
ಇದನ್ನೂ ಓದಿ: Aadhaar; ವಿದ್ಯುತ್ ಆರ್.ಆರ್.ನಂಬರಿಗೆ ಆಧಾರ್ ಸಂಖ್ಯೆ ಜೋಡಣೆ ಕಡ್ಡಾಯ
ಈ ಸಂದರ್ಭದಲ್ಲಿ ಜಿಲ್ಲಾ ಸಹಕಾರ ಯೂನಿಯನ್ ಉಪಾದ್ಯಕ್ಷ ಹೆಚ್.ವಿ.ಪ್ರತಾಪ ಸಿಂಹ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಾಗರಾಜ ಪಾಟೀಲ್, ಸಿರಿಗೆರೆ ಶ್ರೀ ತರಳಬಾಳು ಬೃಹನ್ಮಠ ವಿದ್ಯಾಸಂಸ್ಥೆಯ ಪ್ರಭಾರ ಮುಖ್ಯೋಪಾಧ್ಯಾಯಿನಿ ಎಸ್. ಭಾಗ್ಯಲಕ್ಷ್ಮಿ, ಮಹಲಿಂಗಪ್ಪ ಸೇರಿದಂತೆ ಉಪನ್ಯಾಸಕರು ಹಾಗೂ ಇತರರು ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
