CHITRADURGA NEWS | 08 SEPTEMBER 2026
ಚಿತ್ರದುರ್ಗ: ಜಿಲ್ಲೆಯಲ್ಲಿ ನೈಸರ್ಗಿಕ ಕೃಷಿಯನ್ನು ವ್ಯಾಪಕವಾಗಿ ಉತ್ತೇಜಿಸಲು ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನದಡಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ರೈತರ ಅನುಕೂಲಕ್ಕಾಗಿ ಜೀವಾಮೃತ ತಯಾರಿಸುವ ಬಯೋಡೈಜೆಸ್ಟರ್ ಘಟಕಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕ ಡಾ.ಬಿ.ಮಂಜುನಾಥ ತಿಳಿಸಿದರು.
ಇದನ್ನೂ ಓದಿ: ಎಲ್ಲೀವರೆಗೆ ಹರಿದು ಬಂದಳು ಗೊತ್ತಾ ಭದ್ರೆ | ಬಯಲು ಸೀಮೆಯಲ್ಲಿ ಸಂಭ್ರಮ
ನಗರದ ಕೃಷಿ ತಂತ್ರಜ್ಞರ ಸಂಸ್ಥೆಯಲ್ಲಿ ಕೃಷಿ ಇಲಾಖೆ ಹಾಗೂ ದಾವಣಗೆರೆಯ ಟೆಕ್ನೋಸರ್ವ್ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ನೈಸರ್ಗಿಕ ಕೃಷಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಈಗಾಗಲೇ ಗುಚ್ಛ ಗ್ರಾಮಗಳನ್ನು ಆಯ್ಕೆ ಮಾಡಿ ರೈತರಿಗೆ ವಿವಿಧ ತರಬೇತಿಗಳನ್ನು ನೀಡುವ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಬಬ್ಬೂರು ಫಾರಣ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ರಜನಿಕಾಂತ ಆರ್. ಮಾತನಾಡಿ, ‘ಕೇಂದ್ರದಲ್ಲಿ ಈಗಾಗಲೇ ಸಾವಯವ ಹಾಗೂ ನೈಸರ್ಗಿಕ ಕೃಷಿ ಕುರಿತು ತರಬೇತಿ ನೀಡಲಾಗಿದೆ. ಕೃಷಿ ಸಖಿಯರು ಈ ಮಾಹಿತಿಯನ್ನು ರೈತರಿಗೆ ತಲುಪಿಸಬೇಕು ಎಂದು ಸಲಹೆ ನೀಡಿದರು.
ಇದನ್ನೂ ಓದಿ: ಭದ್ರೆಗೆ ಸಾಣೇಹಳ್ಳಿ ಬಳಿ ಬಾಗೀನ ಅರ್ಪಿಸಿದ ಪಂಡಿತಾರಾಧ್ಯ ಶ್ರೀ
ಟೆಕ್ನೋಸರ್ವ್ ಸಂಸ್ಥೆಯ ಹಿರಿಯ ಯೋಜನಾಧಿಕಾರಿ ಶ್ರೀಕಾಂತ ಭಟ್ ಸಂಸ್ಥೆಯ ಚಟುವಟಿಕೆ ವಿವರಿಸಿದರು. ಸಂಸ್ಥೆಯ ಜಿಲ್ಲಾ ಉಸ್ತುವಾರಿ ಅಧಿಕಾರಿ ಮುರುಗೇಶ್ ಮಾತನಾಡಿ, ‘ಸೃಷ್ಟಿ’ ಯೋಜನೆಯಡಿ 2,000 ರೈತರೊಂದಿಗೆ ಪುನರುತ್ಪಾದಕ ನೈಸರ್ಗಿಕ ಕೃಷಿ ಪದ್ಧತಿಗಳ ಮೇಲೆ ಕೆಲಸ ಮಾಡಲಾಗುತ್ತಿದ್ದು, ಶ್ರೀ ಮಂಜುನಾಥಸ್ವಾಮಿ ರೈತ ಉತ್ಪಾದಕ ಕಂಪನಿ ಜೊತೆ ಕೈಜೋಡಿಸಲಾಗಿದೆ ಎಂದರು.
ಇದೇ ಸಂಸ್ಥೆಯ ಅವಿನಾಶ್ ಮಾತನಾಡಿ, ‘ಸೆಲ್ಕೋ ಫೌಂಡೇಶನ್ ಸಹಯೋಗದಲ್ಲಿ ಕಡಿಮೆ ವೆಚ್ಚದ ಬಯೋಡೈಜೆಸ್ಟರ್ ಆಧಾರಿತ ಜೀವಾಮೃತ ಘಟಕಗಳನ್ನು ಜಮೀನುಗಳಲ್ಲಿ ಅಳವಡಿಸಲಾಗುತ್ತಿದೆ. ಜಿಲ್ಲೆಯಲ್ಲಿ ಈಗಾಗಲೇ 80ಕ್ಕೂ ಹೆಚ್ಚು ಘಟಕಗಳನ್ನು ನಿರ್ಮಿಸಲಾಗಿದ್ದು, ಮುಂದಿನ ದಿನಗಳಲ್ಲಿ 500 ಘಟಕ ಸ್ಥಾಪಿಸುವ ಗುರಿ ಇದೆ’ ಎಂದರು.
ಕಾರ್ಯಾಗಾರದಲ್ಲಿ ಬಯೋಡೈಜೆಸ್ಟರ್ ಘಟಕಗಳನ್ನು ಯಶಸ್ವಿಯಾಗಿ ಅಳವಡಿಸಿಕೊಂಡ ತುರುವನೂರಿನ ರಾಜಪ್ಪ, ಕೂನುಬೇವಿನ ತಿಪ್ಪೇಸ್ವಾಮಿ ಹಾಗೂ ಬೆಳಗಟ್ಟದ ಮೈನಾವತಿ ಅವರನ್ನು ಸನ್ಮಾನಿಸಲಾಯಿತು.
ಇದನ್ನೂ ಓದಿ: ರಾಜ್ಯ, ರಾಷ್ಟ್ರಮಟ್ಟದ ಪ್ರಖ್ಯಾತರು, ರಾಷ್ಟ್ರಕವಿಗಳು ಎಸ್ಜೆಎಂ ಸಂಸ್ಥೆಯಲ್ಲಿ ಅಧ್ಯಯನ ಮಾಡಿದ್ದಾರೆ
ಕಾರ್ಯಕ್ರಮದಲ್ಲಿ ಕೃಷಿ ಇಲಾಖೆ ಅಧಿಕಾರಿಗಳು, ‘ಆತ್ಮ’ ಸಿಬ್ಬಂದಿ, ಕೃಷಿ ಸಖಿಯರು ಹಾಗೂ ರೈತರು ಭಾಗವಹಿಸಿದ್ದರು. ಜೀವಿತಾ ಕಾರ್ಯಕ್ರಮ ನಿರೂಪಿಸಿದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

