By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Pushpa-2: ತಗ್ಗೋದೆ ಇಲ್ಲ ಎನ್ನುವ ತೆಲುಗಿನ ಪುಷ್ಪನಿಗೆ ವಿರೋಧ | ಕನ್ನಡ ಧೀರಭಗತ್‍ರಾಯನಿಗಾಗಿ ಪ್ರತಿಭಟನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Pushpa-2: ತಗ್ಗೋದೆ ಇಲ್ಲ ಎನ್ನುವ ತೆಲುಗಿನ ಪುಷ್ಪನಿಗೆ ವಿರೋಧ | ಕನ್ನಡ ಧೀರಭಗತ್‍ರಾಯನಿಗಾಗಿ ಪ್ರತಿಭಟನೆ

ಮುಖ್ಯ ಸುದ್ದಿ

Pushpa-2: ತಗ್ಗೋದೆ ಇಲ್ಲ ಎನ್ನುವ ತೆಲುಗಿನ ಪುಷ್ಪನಿಗೆ ವಿರೋಧ | ಕನ್ನಡ ಧೀರಭಗತ್‍ರಾಯನಿಗಾಗಿ ಪ್ರತಿಭಟನೆ

chitradurganews.com
Last updated: 5 December 2024 21:45
chitradurganews.com
7 months ago
Share
Protest aganist pushpa-2
ತಗ್ಗೋದೆ ಇಲ್ಲ ಎನ್ನುವ ತೆಲುಗಿನ ಪುಷ್ಪನಿಗೆ ವಿರೋಧ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 05 DECEMBER 2024

ಚಿತ್ರದುರ್ಗ: ರಾಜ್ಯದಲ್ಲಿ ಏಕಕಾಲಕ್ಕೆ ಹಲವು ಸಿನಿಮಾ ಬಿಡುಗಡೆ ಆಗಿವೆ. ಇದರಲ್ಲಿ ಪ್ರಮುಖವಾಗಿ ತೆಲುಗಿನ ಖ್ಯಾತನಟ ಅಲ್ಲು ಅರ್ಜುನ್ ಕನ್ನಡತಿ ರಶ್ಮಿಕಾ ಮಂದಣ್ಣ ನಟನೆಯ ಪುಷ್ಪ-2 ಸಿನಿಮಾ ತೆರೆಗೆ ಬಂದಿದೆ.

ಪ್ಯಾನ್ ಇಂಡಿಯಾ ಸಿನಿಮಾ ಆಗಿ ಚಿತ್ರ ಕನ್ನಡದಲ್ಲೂ ತೆರೆ ಕಂಡಿದೆ. ಇದೇ ವೇಳೆ, ಕನ್ನಡದ ಧೀರ ಭಗತ್‍ರಾಯ್ ಚಿತ್ರ ಬಿಡುಗಡೆಯಾಗಿದೆ.

ಇದನ್ನೂ ಓದಿ: ಒನಕೆ ಓಬವ್ವ ಸ್ಟೇಡಿಯಂನಲ್ಲಿ ಕೋಟಿ ವೆಚ್ಚದಲ್ಲಿ ವಾಲ್ ಕ್ಲೈಂಬಿಂಗ್ | ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ

ಚಿತ್ರದುರ್ಗದಲ್ಲಿ ಪುಷ್ಪ-2 ಪ್ರಸನ್ನ ಹಾಗೂ ವೆಂಕಟೇಶ್ವರ ಎರಡು ಚಿತ್ರಮಂದಿರಗಳಲ್ಲಿ ತೆರೆ ಕಂಡಿದೆ. ಇದರಿಂದಾಗಿ ಧೀರ ಭಗತ್‍ರಾಯ್ ಸಿನಿಮಾಗೆ ಸ್ಥಾನ ಕಲ್ಪಿಸಿಲ್ಲ ಎಂದು ಕನ್ನಡಾಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರುನಾಡ ವಿಜಯಸೇನೆಯಿಂದ ಚಿತ್ರದುರ್ಗದಲ್ಲಿ ಪ್ರಸನ್ನ ಹಾಗೂ ವೆಂಕಟೇಶ್ವರ ಚಿತ್ರಮಂದಿರಗಳ ಬಳಿ ಪ್ರತಿಭಟಿಸಿ ಪುಷ್ಪ-2 ಸಿನಿಮಾ ಪೋಸ್ಟರ್‍ಗೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಅಡಿಕೆ ಧಾರಣೆ | ಯಾವ ಅಡಿಕೆಗೆ ಎಷ್ಟು ರೇಟ್ | ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್

ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಮಾತನಾಡಿ, ರಾಜ್ಯದಲ್ಲಿ 69ನೇ ಕನ್ನಡ ರಾಜ್ಯೋತ್ಸವ ಆಚರಿಸಿದ್ದೇವೆ. 50ನೇ ಸುವರ್ಣ ಕರ್ನಾಟಕ ಮಹೋತ್ಸವ ಆಚರಿಸಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ರಾಜ್ಯದಲ್ಲಿ ಕನ್ನಡ ಸಿನಿಮಾಗಳಿಗೆ ಅವಕಾಶ ಕಲ್ಪಿಸದೆ ತೆಲುಗು ಚಿತ್ರಗಳನ್ನು ಪ್ರದರ್ಶಿಸುತ್ತಿರುವುದು ಒಳ್ಳೆಯ ಬೆಳವಣಿಗೆ ಅಲ್ಲ ಎಂದರು.

ಚಿತ್ರಮಂದಿರಗಳ ಮಾಲಿಕರು ಹಣ ಮಾಡುವ ಉದ್ದೇಶದಿಂದ ಕನ್ನಡ ಭಾಷೆಯ ಸಿನಿಮಾಗಳ ಬಗ್ಗೆ ಅನಾಧಾರಾ ತೋರಿಸುತ್ತಿದ್ದಾರೆ. ಕನ್ನಡ ಸಿನಿಮಾ ಬಿಡುಗಡೆ ಆಗಿದ್ದರೂ, ತೆಲುಗು ಚಿತ್ರ ಪ್ರದರ್ಶನ ಮಾಡುವ ಮೂಲಕ ಕನ್ನಡ ಭಾಷೆಗೆ ಅವಮಾನ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಚಿತ್ರದುರ್ಗದ ಖ್ಯಾತ ಪತ್ರಕರ್ತ ಡಿ.ಉಮಾಪತಿ ಪ್ರಶಸ್ತಿಗೆ ಆಯ್ಕೆ | ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ

ಕೂಡಲೇ, ಚಿತ್ರದುರ್ಗದಲ್ಲಿ ಧೀರ ಭಗತ್‍ರಾಯ್ ಚಿತ್ರ ಪ್ರದರ್ಶನ ಮಾಡಬೇಕು ಎಂದು ಜಿಲ್ಲಾಡಳಿತಕ್ಕೂ ಒತ್ತಾಯಿಸುತ್ತಿದ್ದೇವೆ ಎಂದು ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Allu ArjunChitradurga newsCinemaDheera BhagatraiKannada CinemaKannada NewsKarunada vijayaseneKT ShivakumarPrasanna TalkiesprotestPushpa-2Rashmika MandannaTelugu CinemaVenkateswara Talkiesಅಲ್ಲು ಅರ್ಜುನ್ಕನ್ನಡ ಸಿನಿಮಾಕನ್ನಡ ಸುದ್ದಿಕರುನಾಡ ವಿಜಯಸೇನೆಕೆ.ಟಿ.ಶಿವಕುಮಾರ್ಚಿತ್ರದುರ್ಗ ನ್ಯೂಸ್ಚಿತ್ರರಂಗತೆಲುಗು ಸಿನಿಮಾಧೀರ ಭಗತ್‍ರಾಯ್ಪ್ರತಿಭಟನೆಪ್ರಸನ್ನ ಟಾಕೀಸ್ರಶ್ಮಿಕಾ ಮಂದಣ್ಣವೆಂಕಟೇಶ್ವರ ಟಾಕೀಸ್
Share This Article
Facebook Email Print
Previous Article arecanut price list ಅಡಿಕೆ ಧಾರಣೆ | ಯಾವ ಅಡಿಕೆಗೆ ಎಷ್ಟು ರೇಟ್ | ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್
Next Article today bhavishya Horoscope: ದಿನ ಭವಿಷ್ಯ | 06 ಡಿಸೆಂಬರ್ | ಈ ದಿನ ಹೇಗಿದೆ ನಿಮ್ಮ ರಾಶಿ ಫಲ…
Leave a Comment

Leave a Reply Cancel reply

Your email address will not be published. Required fields are marked *

Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up