By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಜನಿವಾರ ವಿವಾದ | ಬ್ರಾಹ್ಮಣ ಮಹಾಸಭಾ ಚಿತ್ರದುರ್ಗ ಜಿಲ್ಲಾ ಘಟಕ ಖಂಡನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಜನಿವಾರ ವಿವಾದ | ಬ್ರಾಹ್ಮಣ ಮಹಾಸಭಾ ಚಿತ್ರದುರ್ಗ ಜಿಲ್ಲಾ ಘಟಕ ಖಂಡನೆ

ಮುಖ್ಯ ಸುದ್ದಿ

ಜನಿವಾರ ವಿವಾದ | ಬ್ರಾಹ್ಮಣ ಮಹಾಸಭಾ ಚಿತ್ರದುರ್ಗ ಜಿಲ್ಲಾ ಘಟಕ ಖಂಡನೆ

News Desk Chitradurga News
Last updated: 19 April 2025 20:22
News Desk Chitradurga News
2 months ago
Share
ಬ್ರಾಹ್ಮಣ ಮಹಾಸಭಾದಿಂದ ಪ್ರತಿಭಟನೆ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 19 APRIL 2025

ಚಿತ್ರದುರ್ಗ: ಸಿಇಟಿ ಪರೀಕ್ಷೆ ಬರೆಯಲು ತೆರಳಿದ್ದ ಬ್ರಾಹ್ಮಣ ವಿದ್ಯಾರ್ಥಿಗಳಿಂದ ಜನಿವಾರ ತೆಗೆಸಿರುವ ನಡೆಯನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಚಿತ್ರದುರ್ಗ ಜಿಲ್ಲಾ ಘಟಕ ಖಂಡಿಸಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.

Also Read: ಪ್ರತಿಷ್ಠಿತ ಶಾಲೆ ಪ್ರವೇಶ | ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಂದ ಅರ್ಜಿ ಅಹ್ವಾನ

ಶನಿವಾರ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಬ್ರಾಹ್ಮಣ ಸಮುದಾಯದ ಮುಖಂಡರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಬೀದರ್‌ನಲ್ಲಿ ವಿದ್ಯಾರ್ಥಿಯೊಬ್ಬ ಜನಿವಾರ ಧರಿಸಿದ್ದ ಕಾರಣಕ್ಕೆ, ಸಿಇಟಿ ಪರೀಕ್ಷೆಗೆ ಅವಕಾಶ ಕಲ್ಪಿಸದ ಕಾರಣ ವಿದ್ಯಾರ್ಥಿಯ ಭವಿಷ್ಯಕ್ಕೆ ತೊಂದರೆಯಾಗಿದೆ. ಇದನ್ನು ಬ್ರಾಹ್ಮಣ ಮಹಾಸಭಾ ಗಂಭಿರವಾಗಿ ಪರಿಗಣಿಸುತ್ತದೆ ಎಂದು ಎಚ್ಚರಿಸಿದರು.

ಸಿಇಟಿ ಪರೀಕ್ಷೆ ಸಂದರ್ಭದಲ್ಲಿ ರಾಜ್ಯದಲ್ಲಿ ನಡೆದ ಈ ಕೃತ್ಯಗಳು ಸಮುದಾಯದ ಮೇಲೆ ನಡೆದ ಪ್ರಹಾರವಾಗಿವೆ. ನಮ್ಮ ಸಂಸ್ಕೃತಿ, ಧರ್ಮಾಚರಣೆಗೆ ನಿರ್ಬಂಧ ಹೇರಿದಂತಾಗುತ್ತದೆ. ಇದನ್ನು ಸರ್ವತಾ ಒಪ್ಪುವುದಿಲ್ಲ. ಇದನ್ನು ಪ್ರತಿಭಟಿಸುತ್ತೇವೆ ಎಂದರು.

Also Read: ಉಗುರಿನ ಮೇಲೆ ಕಪ್ಪು ಗೆರೆ ಕಾಣಿಸಿಕೊಳ್ಳಲು ಕಾರಣವೇನು?

ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸಿ ರಾಜ್ಯ ಸರ್ಕಾರ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಜರುಗಿಸಬೇಕು. ಮುಂದೆ ಇಂತಹ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

ಜಾತಿ ಗಣತಿ ವರದಿ ಪರಿಗಣಿಸಬಾರದು:

2015ರಲ್ಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜ್‌ ಆಯೋಗದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಗಣತಿಯಲ್ಲಿ ರಾಜ್ಯದಲ್ಲಿ ಬ್ರಾಹ್ಮಣ ಸಮುದಾಯದ ಸಂಖ್ಯೆಯನ್ನು 15 ಲಕ್ಷ ಎಂದು ನಮೂದಿಸಲಾಗಿದೆ.

ಆದರೆ, ರಾಜ್ಯದಲ್ಲಿ ಬ್ರಾಹ್ಮಣರ ಸಂಖ್ಯೆ 45 ಲಕ್ಷಕ್ಕೂ ಹೆಚ್ಚಾಗಿದೆ. ಇಷ್ಟು ದೊಡ್ಡ ಸಂಖ್ಯೆ ಇದ್ದರೂ ಕಡಿಮೆ ತೋರಿಸುವ ಮೂಲಕ ಸಮುದಾಯಕ್ಕೆ ಅವಮಾನ ಮಾಡಲಾಗುತ್ತಿದೆ. ಇದನ್ನು ಮಹಾಸಭಾ ಸಹಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಈ ಜಾತಿ ಸಮೀಕ್ಷೆಯನ್ನು ಸರ್ಕಾರ ಪರಿಗಣನೆಗೆ ತೆಗೆದುಕೊಳ್ಳಬಾರದು. ಸಮುದಾಯದ ಮೇಲೆ ಈ ರೀತಿಯ ನಿರ್ಣಯಗಳನ್ನು ತೆಗೆದುಕೊಳ್ಳಬಾರದು. ಮುಂದಿನ ದಿನಗಳಲ್ಲಿ ಸರ್ಕಾರ ಎಚ್ಚೆತ್ತುಕೊಂಡು ಜಾಗರೂಕತೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

Also Read: ರಾಷ್ಟ್ರೀಯ ಹೆದ್ದಾರಿಯಲ್ಲಿ ಗೂಡಂಗಡಿಗಳ ತೆರವುಗೊಳಿಸಲು ಸೂಚನೆ

ಈ ವೇಳೆ ಬ್ರಾಹ್ಮಣ ಮಹಾಸಭಾ ಜಿಲ್ಲಾ ಪ್ರತಿನಿಧಿ ಟಿ.ಕೆ.ನಾಗರಾಜ್‌ರಾವ್‌, ಬ್ರಾಹ್ಮಣ ಸಂಘದ ನಿರ್ದೇಶಕರಾದ ಮೋಹನ್‌ ಭಟ್‌, ಫಣೀಂದ್ರ ಮುಖಂಡರಾದ ಮಾರುತಿ ಮೋಹನ್‌. ಡಾ.ಕೆ.ರಾಜೀವಲೋಚನ್‌, ಎಂ.ಎಸ್‌.ಕುಮಾರ್‌, ಲಕ್ಷ್ಮೀ, ನವೀನ್‌, ಹಿರಿಯೂರಿನ ವೆಂಕಟೇಶ್‌ ದೀಕ್ಷಿತ್‌ ಇತರರಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Brahmin MahasabhaCET ExamChitradurgaChitradurga newsChitradurga UpdatesJanuaryKannada Latest NewsKannada Newsprotestಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಜನಿವಾರಪ್ರತಿಭಟನೆಬ್ರಾಹ್ಮಣ ಮಹಾಸಭಾಸಿಇಟಿ ಪರೀಕ್ಷೆ
Share This Article
Facebook Email Print
Previous Article ಏಪ್ರಿಲ್ ಕೊನೆಯ ವಾರದಿಂದ ಜಾನುವಾರುಗಳಿಗೆ ಕಾಲುಬಾಯಿ ರೋಗ ಲಸಿಕೆ | ADC ಕುಮಾರಸ್ವಾಮಿ
Next Article arecanut price list ಅಡಿಕೆ ಧಾರಣೆ | ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್‌
Leave a Comment

Leave a Reply Cancel reply

Your email address will not be published. Required fields are marked *

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ | ಕುರಿ, ಕೋಳಿ ಮತ್ತು ಹಸು ಸಾಕಾಣಿಕೆ ತರಬೇತಿಗೆ ನೇರ ಅಹ್ವಾನ
ಮುಖ್ಯ ಸುದ್ದಿ
arecanut price list
ಅಡಿಕೆ ಧಾರಣೆ | ಜೂನ್‌ 17 | ಇಂದಿನ ಮಾರುಕಟ್ಟೆ ಪೂರ್ಣ ವಿವರ
ಅಡಕೆ ಧಾರಣೆ
ಜೇನು ಕೃಷಿಯನ್ನು ಸಮಗ್ರ ಕೃಷಿಯನ್ನಾಗಿ ಅಳವಡಿಸಿಕೊಳ್ಳಿ | ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ
ಮುಖ್ಯ ಸುದ್ದಿ
ಎಬಿವಿಪಿ ಹಿರಿಯೂರು ಪದಾಧಿಕಾರಿಗಳ ಆಯ್ಕೆ | ಅಧ್ಯಕ್ಷರಾಗಿ ಪ್ರಾಧ್ಯಾಪಕ ರಂಗಸ್ವಾಮಿ
ಹಿರಿಯೂರು
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up