CHITRADURGA NEWS | 24 JULY 2026
ಚಿತ್ರದುರ್ಗ: ನಗರದ ಜಿಲ್ಲಾಧಿಕಾರಿಗಳ ಕಚೇರಿ ಬಳಿಯ ಒನಕೆ ಓಬವ್ವ ವೃತ್ತದಲ್ಲಿ ಶುಕ್ರವಾರ ಕಾಂಗ್ರೆಸ್ ಕಚೇರಿ ಮುಂದೆ ಜಿಲ್ಲಾ ಬಿಜೆಪಿ ನಗರ ಮಂಡಲ ವತಿಯಿಂದ ಕಾಂಗ್ರೆಸ್ ಸರ್ಕಾರದ ಗೂಂಡಾ ವರ್ತನೆಯ ವಿರುದ್ಧ ಪ್ರತಿಭಟನೆ ನಡೆಸಿದರು.
ಇದನ್ನೂ ಓದಿ: ಹೊಳಲ್ಕೆರೆಗೆ ನೀರೆತ್ತುವ ವಿವಿ ಸಾಗರ ಜಾಕ್ ವೆಲ್ ವೀಕ್ಷಿಸಿದ ಶಾಸಕ ಎಂ.ಚಂದ್ರಪ್ಪ
ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಭಾಗವಹಿಸಿ ಮಾತನಾಡಿ, ದೇಶದಲ್ಲಿ ಕಾಂಗ್ರೆಸ್ ಆಡಳಿತದಲ್ಲಿರುವುದು ಕೇವಲ ಮೂರು ರಾಜ್ಯಗಳಲ್ಲಿ ಮಾತ್ರ, ಆದರೆ ಬಿಜೆಪಿ ಹಾಗೂ ಎನ್ಡಿಎ ಮೈತ್ರಿಕೂಟ 22 ರಾಜ್ಯಗಳಲ್ಲಿ ಆಡಳಿತ ನಡೆಸುತ್ತಿದೆ. ಕರ್ನಾಟಕದಲ್ಲಿ ವಿರೋಧ ಪಕ್ಷದ ಶಾಸಕರಿಗೆ ಅವಮಾನ ಮಾಡಿದರೆ, ಬಿಜೆಪಿಗೂ 22 ರಾಜ್ಯಗಳಲ್ಲಿ ತಕ್ಕ ಉತ್ತರ ನೀಡುವ ಶಕ್ತಿಯಿದೆ ಎಂಬುದನ್ನು ಕಾಂಗ್ರೆಸ್ ನಾಯಕರು ಮರೆಯಬಾರದು ಎಂದು ಎಚ್ಚರಿಕೆ ನೀಡಿದರು.
ಬಿಜೆಪಿ ನಾಯಕರ ಮೇಲೆ ಹಲ್ಲೆ :
ಕಳೆದ ಎರಡು ದಿನಗಳ ಹಿಂದೆ ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ವಿರೋಧ ಪಕ್ಷದ ನಾಯಕರ ನೇತೃತ್ವದಲ್ಲಿ ಕಾಂಗ್ರೆಸ್ ಕಚೇರಿಯ ಎದುರು ಪ್ರತಿಭಟನೆ ನಡೆಸುತ್ತಿದ್ದಾಗ, ಕಾಂಗ್ರೆಸ್ ನಾಯಕರ ಕುಮ್ಮಕ್ಕಿನಿಂದ ಕಾರ್ಯಕರ್ತರು ಕದ್ದುಮುಚ್ಚಿ ಬಂದು ದಾಳಿ ನಡೆಸಿದ್ದಾರೆ. ಶಾಸಕ ಬಿ.ಪಿ. ಹರೀಶ್, ಕೆ.ಸಿ. ರಾಮಮೂರ್ತಿ ಹಾಗೂ ಮಾಜಿ ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ ಅವರ ಮೇಲೆ ಮೊಟ್ಟೆ ಎಸೆಯುವ ಮೂಲಕ ಹಲ್ಲೆ ನಡೆಸಲಾಗಿದೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರದ ವಿರುದ್ಧ ಹೋರಾಟ ಮಾಡುವುದು ವಿರೋಧ ಪಕ್ಷದ ಹಕ್ಕಾಗಿದೆ. ಈ ಪ್ರತಿಭಟನಾ ಹಕ್ಕನ್ನು ತಡೆಯಲು ಅಥವಾ ಬೆದರಿಸಲು ಯಾರಿಗೂ ಅಧಿಕಾರವಿಲ್ಲ ಎಂದರು.
ಇದನ್ನೂ ಓದಿ: ನಾಳೆ, ನಾಡಿದ್ದು ಚಿತ್ರದುರ್ಗಕ್ಕೆ ಸಿಎಂ ಡಿಕೆಶಿ | ಎಲ್ಲೆಲ್ಲಿ ಯಾವ ಕಾರ್ಯಕ್ರಮದಲ್ಲಿ ಭಾಗೀ ಆಗ್ತಾರೆ ಪೂರ್ಣ ಮಾಹಿತಿ…
ರಾಜ್ಯ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿಗಳನ್ನು “ಕೊತ್ವಾಲ್ ಶಿಷ್ಯಂದಿರು” ಎಂದು ಲೇವಡಿ ಮಾಡಿದ ಶಾಸಕರು, ಇವತ್ತು ರಾಜ್ಯದಲ್ಲಿ ಶಾಂತಿ ಕದಡಿ ರೌಡಿ ರಾಜ್ಯವನ್ನಾಗಿ ಪರಿವರ್ತಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದೆಹಲಿಯಲ್ಲಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಹೋರಾಟಕ್ಕೆ ತಿಂಗಳುಗಟ್ಟಲೆ ತಲೆಮರೆಸಿಕೊಂಡಿದ್ದ ರಾಹುಲ್ ಗಾಂಧಿ ಏಕಾಏಕಿ ಆಗಮಿಸಿ, ತಾನೇ ಹೋರಾಟದ ರೂವಾರಿ ಎಂಬಂತೆ ಪ್ರದರ್ಶಿಸಿಕೊಂಡಿದ್ದಾರೆ. ಪ್ರಧಾನಮಂತ್ರಿಗಳ ನಿವಾಸದ ಮುಂದೆಯೂ ಧರಣಿ ನಡೆಸಿ, ಆಡಳಿತದ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿದ್ದಾರೆ ಎಂದರು.
ಕಾಂಗ್ರೆಸ್ ನಾಯಕರು ದೇಶ ವಿಭಜನೆ ಮಾಡುವ ಶಕ್ತಿಗಳು, ಉಮರ್ ಖಾಲಿದ್ ಅವರಂತಹ ವ್ಯಕ್ತಿಗಳು, ಖಾಲಿಸ್ತಾನಿ ಬೆಂಬಲಿತರು ಹಾಗೂ “ತುಕಡೆ ತುಕಡೆ ಗ್ಯಾಂಗ್” ಸದಸ್ಯರನ್ನು ಜಂತರ್ ಮಂತರ್ನಂತಹ ವೇದಿಕೆಗಳಲ್ಲಿ ಮುನ್ನೆಲೆಗೆ ತಂದು ರಾಜಕಾರಣ ಮಾಡುತ್ತಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ | ಪರಸ್ಪರ ಧಿಕ್ಕಾರ ಕೂಗಿ ಆಕ್ರೋಶ
ನೀಟ್ ಪರೀಕ್ಷೆಯ ಹೆಸರಿನಲ್ಲಿ ದೇಶದಲ್ಲಿ ಅರಾಜಕತೆ ಸೃಷ್ಟಿಸಿ ಯುವಜನರನ್ನು ದಾರಿ ತಪ್ಪಿಸುವ ಕೆಲಸ ನಡೆಯುತ್ತಿದೆ. ಕೇಂದ್ರದಲ್ಲಿ ಬಿಜೆಪಿ ಆಡಳಿತಕ್ಕೆ ಬಂದು ಕಳೆದ 13 ವರ್ಷಗಳಲ್ಲಿ ಯಾವುದೇ ವಿರೋಧ ಪಕ್ಷದ ಹೋರಾಟವನ್ನು ಹತ್ತಿಕ್ಕುವ ಅಥವಾ ಅವರ ಸಂಸದರು-ಶಾಸಕರನ್ನು ತುಳಿಯುವ ಕೆಲಸ ಮಾಡಿಲ್ಲ.
ಹೋರಾಟಕ್ಕೆ ಗೌರವ ನೀಡಿ ಸಹನೆಯಿಂದ ಆಲಿಸುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಿಕೊಂಡು ಬಂದಿದೆ. ಬಿಜೆಪಿ ಕಾರ್ಯಕರ್ತರು ಲಕ್ಷಾಂತರ ಸಂಖ್ಯೆಯಲ್ಲಿದ್ದು, ಇಂತಹ ದೇಶವಿರೋಧಿ ಚಿಂತನೆಗಳನ್ನು ಸಹಿಸುವುದಿಲ್ಲ. ಕಾಂಗ್ರೆಸ್ ನಾಯಕರು ಪ್ರಚೋದನಕಾರಿ ನಡವಳಿಕೆಯನ್ನು ನಿಲ್ಲಿಸದಿದ್ದರೆ ಪರಿಣಾಮ ಎದುರಿಸಬೇಕಾಗುತ್ತದೆ.
ಕಾಂಗ್ರೆಸ್ ಪಕ್ಷವು ದೇಶವಿರೋಧಿ ಶಕ್ತಿಗಳ ಜೊತೆಗೂಡಿ ಅರಾಜಕತೆ ಸೃಷ್ಟಿಸುತ್ತಿರುವುದನ್ನು ಹಾಗೂ ಬಿಜೆಪಿ ನಾಯಕರ ಮೇಲೆ ನಡೆಸಿದ ಹಲ್ಲೆಯನ್ನು ತೀವ್ರವಾಗಿ ಖಂಡಿಸಿದ ರಾಜ್ಯದಲ್ಲಿ ಪ್ರಜಾಸತ್ತಾತ್ಮಕ ಹೋರಾಟಕ್ಕೆ ತಡೆ ನೀಡಿದರೆ ಬೀದಿಗಿಳಿದು ಸೂಕ್ತ ಉತ್ತರ ನೀಡುವುದಾಗಿ ಎಚ್ಚರಿಕೆ ನೀಡಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜುಲೈ 24 | ಮೆಕ್ಕೆಜೋಳ, ರಾಗಿ ರೇಟ್….
ಈ ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರಾದ ವೆಂಕಟೇಶ್ ಯಾದವ್, ಡಾ,ಮಂಜುನಾಥ್, ಶೈಲಜಾ ರೆಡ್ಡಿ, ಕಾರ್ಯದರ್ಶಿ ರೇಖಾ, ಗ್ರಾಮಾಂತರ ಅಧ್ಯಕ್ಷ ನಾಗರಾಜ್, ದಗ್ಗೆ ಶಿವಪ್ರಕಾಶ್, ಭಾರ್ಗವಿ ದ್ರಾವಿಡ್, ಯಶವಂತ ನಗರಮಂಡಲ ಪದಾಧಿಕಾರಿಗಳು, ಮೋರ್ಚ ಅಧ್ಯಕ್ಷರು , ಪ್ರಧಾನ ಕಾರ್ಯದರ್ಶಿಗಳು , ಮೋರ್ಚ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

