CHITRADURGA NEWS | 29 AUGUST 2025
ಚಿತ್ರದುರ್ಗ: ಕರ್ನಾಟಕದಲ್ಲಿನ 59 ಅಲೆಮಾರಿ ಸಮುದಾಯಗಳಿಗೆ ಒಳಮೀಸಲಾತಿಯಲ್ಲಿ ಪ್ರತ್ಯೇಕವಾಗಿ ಗುರುತಿಸಿ, ಶೇ.1%ರಷ್ಟು ಮೀಸಲು ನೀಡದಿದ್ದರೆ, ವಿಧಾನಸೌಧ ಮತ್ತು ಮುಖ್ಯಮಂತ್ರಿಗಳ ಮನೆ ಮುತ್ತಿಗೆ ಹಾಕಲಾಗುವುದು ಎಂದು ಅಲೆಮಾರಿ ಸಮುದಾಯಗಳ ಒಳ ಮೀಸಲಾತಿ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರತಾಪ್ ಜೋಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಇದನ್ನೂ ಓದಿ: 3 ಅಂಗಡಿಗಳಲ್ಲಿ ಸರಣಿ ಕಳ್ಳತನ | ರೂ.1 ಲಕ್ಷ 52 ಸಾವಿರ ಕಳವು
ಅಲೆಮಾರಿಗಳಿಗೆ ಶೇ.1 ರಷ್ಟು ಒಳ ಮೀಸಲಾತಿ ಜಾರಿ ಮಾಡಬೇಕೆಂದು ಸರ್ಕಾರವನ್ನು ಆಗ್ರಹಿಸುವ ಸಲುವಾಗಿ ನಗರದ ಓನಕೆ ಒಬವ್ವ ವೃತ್ತದಲ್ಲಿ ಹಮ್ಮಿಕೊಂಡಿದ್ದ ಆಹೋರಾತ್ರಿ ಪ್ರತಿಭಟನೆ ಮತ್ತು ಧರಣಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು,
ಇಲ್ಲಿನ ಗಾಂಧಿವೃತ್ತದಿಂದ ಜಿಲ್ಲಾಧಿಕಾರಿಯವರ ಕಛೇರಿಯವರೆಗೆ ಅಲೆಮಾರಿ ಬಂಧುಗಳು ಭಿಕ್ಷೆ ಬೇಡಿ ಹಣ ಸಂಗ್ರಹಿಸಿ, ಪ್ರತಿ ಜಿಲ್ಲೆಗಳಲ್ಲಿಯೂ ಸಹ ಇದೇ ರೀತಿಯಲ್ಲಿ ಸಂಗ್ರಹಿಸಿ ನ್ಯಾಯಾಲಯದ ಮೊರೆ ಹೋಗುತ್ತೇವೆ, ಅಲ್ಲಿಯವರೆಗೂ ಸಹ ಮುಖ್ಯಮಂತ್ರಿಗಳು ಹೋಗದೇ ನಮಗೆ ನ್ಯಾಯ ದೊರಕಿಸಿಕೊಡಬೇಕು ಆಗ್ರಹಿಸಿದರು.
ಕರ್ನಾಟಕ ಸರಕಾರವು ಈಗಾಗಲೇ ಮೀಸಲಾತಿಯ ಒಳವರ್ಗೀಕರಣಕ್ಕೆ ಸಂಬಂಧಿಸಿದಂತೆ ಆದೇಶವನ್ನು ಹೊರಡಿಸಿದೆ. ಆದರೆ ಕರ್ನಾಟಕದ ಸರಕಾರದ ಈ ಆದೇಶವು ಸರ್ವೋಚ್ಚ ನ್ಯಾಯಾಲಯವು ಮೀಸಲಾತಿಯ ಒಳವರ್ಗೀಕರಣದ ಕುರಿತು ನೀಡಿದ ಮಹತ್ವದ ತೀರ್ಪಿಗೆ ವಿರುದ್ಧವಾಗಿ ನಡೆದುಕೊಂಡಿದೆ.
ಕಳೆದ 75 ವರ್ಷಗಳಲ್ಲಿ ಮೀಸಲಾತಿಯ ಮೂಲಕ ಸೂಕ್ತ ಪ್ರಾತಿನಿಧ್ಯ ಪಡೆಯದ ಅಲೆಮಾರಿ ಸಮುದಾಯಗಳಲ್ಲಿ ಈ ತೀರ್ಪು ಹೊಸ ಭರವಸೆಯನ್ನು ಮೂಡಿಸಿತ್ತು. ಸದರಿ ತೀರ್ಪನ್ನು ಆಧರಿಸಿ ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೆ ತರುವ ಸಲುವಾಗಿ ಕರ್ನಾಟಕದ ಘನ ಸರ್ಕಾರವು ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದಲ್ಲಿ ಆಯೋಗ ನೇಮಿಸಲಾಗಿತ್ತು.
ಇದನ್ನೂ ಓದಿ: ಚಳ್ಳಕೆರೆ ಪೊಲೀಸರ ಕಾರ್ಯಾಚರಣೆ | 97 ಲಕ್ಷ ಎಗರಿಸಿದ್ದ ಕಾರು ಚಾಲಕನ ಬಂಧನ
ಈ ಆಯೋಗವು 59 ಅಲೆಮಾರಿ ಸಮುದಾಯಗಳನ್ನು ಪ್ರತ್ಯೇಕವಾಗಿ ಗುರುತಿಸಿ, ಇವುಗಳ ಜೊತೆಗೆ ಇನ್ನೂ ಹತ್ತು ಸಮುದಾಯಗಳನ್ನು ಸೇರ್ಪಡೆ ಮಾಡಿ ಶೇ.1% ರಷ್ಟು ಪ್ರಮಾಣದ ಮೀಸಲಾತಿಯನ್ನು ನಿಗದಿ ಮಾಡಿತ್ತು. ಆದರೆ ಅವಿಜ್ಞಾನಿಕ ಕ್ಯಾಬಿನೆಟ್ ನಿರ್ಣಯವು ಅಲೆಮಾರಿ ಸಮುದಾಯಗಳನ್ನು ಪ್ರಭಾವಿ ಜಾತಿ ಸಮುದಾಯಗಳ ಗುಂಪಿಗೆ ಸೇರಿಸಿಬಿಟ್ಟಿದೆ.
ಈಗ ಅಲೆಮಾರಿಗಳು ಪ್ರಬಲ ಜಾತಿಗಳ ವಿರುದ್ಧ ಮತ ಲಪಾಟಿಸಲು ನಮ್ಮ ವಿರುದ್ಧ ವೈಶಮ್ಯ ಹುಟ್ಟಿಸುವಂತಹ ತಂತ್ರ ಮುಖ್ಯಮಂತ್ರಿಗಳಾಗಿದೆ. ರಾಜ್ಯ ಸರ್ಕಾರವು ಸಾಮಾಜಿಕ ನ್ಯಾಯ ನೀಡುತ್ತೇವೆಂದು ಮತ್ತು ಸಮಾಜವಾದಿ ಆಶಯಗಳನ್ನು ಸದಾ ಪ್ರತಿಪಾದಿಸುತ್ತೇವೆ ಎಂಬುವಂತಹ ನಮ್ಮ ಅಲೆಮಾರಿ ಬಂಧುಗಳಿಗೆ ಹೆಗಲಿಗೆ ಹೆಗಲಾಗಿರುವ ಸಮುದಾಯಗಳ ಮಧ್ಯೆ ವೈಶಮ್ಯ ಹುಟ್ಟಿಸುವ ಜೊತೆ ಜೊತೆಯಲ್ಲಿಯೇ ನಮ್ಮ ಅಲೆಮಾರಿ ಸಮುದಾಯವನ್ನು ಕೈಬಿಡುವಂತಹ ನಿಟ್ಟಿನಲ್ಲಿ ರಾಜಕೀಯ ತಂತ್ರ ಮಾಡಿರುತ್ತಾರೆ.
ಪ್ರಭಾವಿ ರಾಜಕಾರಣಿಗಳು ಕಾಲಾವಧಿಯಲ್ಲಿ ಅಲೆಮಾರಿಗಳಂತಹ ತಬ್ಬಲಿ ಸಮುದಾಯಗಳಿಗೆ ನ್ಯಾಯ ಸಿಗುವ ಭರವಸೆ ಇತ್ತು. ಆದರೆ ದಿ:25.08.2025ರಂದು ಹೊರಡಿಸಿದ ಸರಕಾರದ ಆದೇಶವು ಈ 59 ಅಲೆಮಾರಿ ಸಮುದಾಯಗಳನ್ನು ಶಾಶ್ವತವಾಗಿ ಮೂಲೆಗುಂಪಾಗಿಸಲಿದೆ ಎಂದು ದೂರಿದರು.
ಇದನ್ನೂ ಓದಿ: ಮದುವೆಗೆ ಒತ್ತಾಯಿಸಿದ್ದಕ್ಕೆ ಕೊಂದನಾ ಪಾಪಿ | SP ರಂಜಿತ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದೇನು ?
ಒಳಮೀಸಲಾತಿ ಜಾರಿ ಮಾಡುವ ಒತ್ತಡದಲ್ಲಿರುವ ಸರಕಾರವು 101 ಪರಿಶಿಷ್ಟ ಜಾತಿಗಳಿಗೆ ಸೂಕ್ತ ಪ್ರಾತಿನಿಧ್ಯ ಕಲ್ಪಿಸುವ ನಿಟ್ಟಿನಲ್ಲಿ ಮೀಸಲು ಪ್ರಮಾಣವನ್ನು ಎಚ್ಚರಿಕೆಯಿಂದ ನಿಗದಿಪಡಿಸಬೇಕಿತ್ತು. ಅದರಲ್ಲೂ ಅಲೆಮಾರಿಗಳಂತಹ ಮುಖ್ಯವಾಹಿನಿಗೆ ಬಾರದ ಮತ್ತು ಧ್ವನಿ ಇಲ್ಲದ ಸಮುದಾಯಗಳ ವಿಷಯದಲ್ಲಿ ಸರಕಾರವು ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳಬೇಕಿತ್ತು.
ಆದರೆ, ಸರಕಾರದ ಈ ನಿರ್ಣಯವು ಅಲೆಮಾರಿ ಸಮುದಾಯಗಳಿಗೆ ಮರಣ ಶಾಸನವನ್ನು ಬರೆದುಬಿಟ್ಟಿದೆ. ಸಾವಿರಾರು ವರ್ಷಗಳ ಅಸ್ಪೃಶ್ಯರಲ್ಲಿ ಅಸ್ಪೃಶ್ಯರಾಗಿಯೇ ಬದುಕಿ ಮನೆ ವಸತಿ ಮತ್ತು ಶಿಕ್ಷಣ ಮೂಲಭೂತ ಸೌಕರ್ಯಗಳಿಂದ ಅನಾಥರಾಗಿರುವ ಸಮುದಾಯಕ್ಕೆ ಮಾನ್ಯ ಮುಖ್ಯಮಂತ್ರಿಗಳು ಸಂಜೀವಿನಿ ಆಗಬೇಕೆ ಹೊರೆತು ಅವರಿಗೆ ಸಿಗುವ ಅನ್ನವನ್ನು ಕಸಿದು ಇನ್ನೊಬ್ಬರಿಗೆ ನೀಡುತ್ತಿರುವುದು ಬಹಳ ನೋವಿನ ಸಂಗತಿಯಾಗಿದೆ ಎಂದರು.
ನಮ್ಮ ಈ ಬೇಡಿಕೆಗಳನ್ನು ಸಹಾನುಭೂತಿಯಿಂದ ಪರಿಶೀಲಿಸಿ 59 ಅಲೆಮಾರಿ ಸಮುದಾಯಗಳನ್ನು ಒಂದು ಪ್ರತ್ಯೇಕ ಗುಂಪನ್ನಾಗಿ ಪರಿಗಣಿಸಿ, ಶೇ1% ರಷ್ಟು ಮೀಸಲಾತಿ ಪ್ರಮಾಣವನ್ನು ನೀಡಬೇಕೆಂದು ಸರ್ಕಾರವನ್ನು ಆಗ್ರಹಿಸಿದ್ದಾರೆ.
ಡಾ.ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ದಾಸ್ ರವರ ವರದಿಯಲ್ಲಿ ಎ.ಬಿ.ಸಿ.ಡಿ ಎಂದು 4 ವರ್ಗಗಳನ್ನಾಗಿ ಮಾಡಿ ಅದರಲ್ಲಿ ಅಲೆಮಾರಿ ಬಂಧುಗಳಿಗೆ ಪ್ರತ್ಯೇಕವಾಗಿ ಮೀಸಲಾತಿ ನೀಡಬೇಕಾಗಿ ತಿಳಿಸಿದ್ದು, ಅದರನ್ನು ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘನೆ ಮಾಡಿದ್ದು, ಅಯೋಗದ ವರದಿ ದಿಕ್ಕರಿಸಿ, ಈ ಮೂರು ವಿಭಾಗಗಳಾಗಿ ಮಾಡಿ ಅತೀ ಹಿಂದುಳಿದ ಅಲೆಮಾರಿ ವರ್ಗಗಳನ್ನು ಸಿ ವರ್ಗಕ್ಕೆ ಸೇರಿಸಿರುವುದರಿಂದ ಕರ್ನಾಟಕ ಉಚ್ಛನ್ಯಾಯಾಲಯಕ್ಕೆ ಅಲೆಮಾರಿ ಬಂಧುಗಳು ಪ್ರಕರಣವನ್ನು ದಾಖಲೆ ಮಾಡುತ್ತೇವೆಂದು ಎಚ್ಚರಿಸಲಾಯಿತು.
ಇದನ್ನೂ ಓದಿ: ಕಾಲೇಜು ವಿದ್ಯಾರ್ಥಿನಿಯ ಕೊಲೆ | ಅರೆಬರೆ ಸುಟ್ಟ ಸ್ಥಿತಿಯಲ್ಲಿ ಪತ್ತೆ
ಸುಡುಗಾಡು ಸಿದ್ದರ ಜಿಲ್ಲಾಧ್ಯಕ್ಷ ಜಿ.ಕೃಷ್ಣಪ್ಪ, ಹಂಡಿಜೋಗಿ ಸಮಾಜದ ಜಿಲ್ಲಾಧ್ಯಕ್ಷ ಎನ್.ಸಿದ್ದೇಶ್, ಶಿಳ್ಯಾಕ್ಯಾತ ಸಮಾಜ ಜಿಲ್ಲಾಧ್ಯಕ್ಷ ಕೃಣ್ಣಪ್ಪ, ಧಕ್ಕಲಿಗ ಸಮಾಜ ಜಿಲ್ಲಾಧ್ಯಕ್ಷ ರಾಜಣ್ಣ, ಚನ್ನದಾಸರು ಸಮಾಜದ ಜಿಲ್ಲಾಧ್ಯಕ್ಷ, ಕಮಲಾಸನ್, ಜಗ್ಲಿ ಸಮಾಜ ಜಿಲ್ಲಾಧ್ಯಕ್ಷ ರಾಮಾಂಜನಪ್ಪ, ಅಲೆಮಾರಿ ಸಮಾಜ ಜಿಲ್ಲಾಧ್ಯಕ್ಷ ನಾಗರಾಜ್, ಅಲೆಮಾರಿ ಸಮಾಜದ ಮುಖಂಡ ಟಿ.ಬಾಬು, ಬುಡುಗ ಜಂಗಮ ಸಮಾಜದ ಜಿಲ್ಲಾಧ್ಯಕ್ಷ ಸುಧಾಕರ್, ಸಮಾಜ ಚಿಂತಕರಾದ ಯಾದವರೆಡ್ಡಿ, ರಾಮು ಗೋಸಾಯಿ, ವೆಂಕಟೇಶ್ವರ ಭಾಗವಹಿಸಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
