
CHITRADURGA NEWS | 13 SEPTEMBER 2024
ಚಿತ್ರದುರ್ಗ: ಮಂಡ್ಯ ಜಿಲ್ಲೆ ನಾಗಮಂಗಲದ(Nagamangala) ಬದರಿಕೊಪ್ಪಲಿನಲ್ಲಿ ಗಣಪತಿ ವಿಸರ್ಜನೆ ವೇಳೆ ಅನ್ಯ ಕೋಮಿನ ಯುವಕರು ಕಲ್ಲು ತೂರಾಟ ನಡೆಸಿರುವುದನ್ನು ಖಂಡಿಸಿ ಚಿತ್ರದುರ್ಗ ನಾಗರಿಕರ ಸಮಿತಿ ಮತ್ತು ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳ ಒಕ್ಕೂಟದಿಂದ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಮನವಿ ಸಲ್ಲಿಸಲಾಯಿತು.
ಕ್ಲಿಕ್ ಮಾಡಿ ಓದಿ: FIR: ಬಸ್ಸಿನ ಟಾಪ್ನಲ್ಲಿ ಜನರ ಪ್ರಯಾಣ, ಚಾಲಕ, ಮಾಲಿಕರ ವಿರುದ್ಧ ದೂರು ದಾಖಲು

ಮಂಡ್ಯ ಜಿಲ್ಲೆಯ ನಾಗಮಂಗಲದ ಬದರಿಕೊಪ್ಪಲಿನಲ್ಲಿ ಗಣಪತಿ ವಿಸರ್ಜನೆ ವೇಳೆ ಕಲ್ಲು ತೂರಾಟ, ಪೆಟ್ರೋಲ್ ಬಾಂಬ್ ದಾಳಿ ಮತ್ತು ಮಾರಕಸ್ತ್ರ ಝಳಪಿಸಿ ಹಲ್ಲೆ ನಡೆಸಿರುವುದನ್ನು ಉನ್ನತ ಮಟ್ಟದ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸಲು ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳದಿಂದ ಆಗ್ರಹ ಮಾಡಲಾಯಿತು.
ಮೆರವಣಿಗೆ ವೇಳೆ ದರ್ಗಾ ಮುಂಭಾಗ ಗಣೇಶನ ಮೆರವಣ ಗೆ ನಡೆಸದಂತೆ ತಡೆಯಲು ಈ ರೀತಿಯ ಕೃತ್ಯ ಎಸಗಿ ಭಯದ ವಾತಾವರಣ ಸೃಷ್ಟಿಸಿದ್ದಾರೆ ಎಂದು ದೂರಿದರು.
ತಕ್ಷಣ ಜಿಹಾದಿ ಮನಸ್ಥಿತಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮಕೈಗೊಳ್ಳಬೇಕು.
ಈ ಕೃತ್ಯ ಉದ್ದೇಶಪೂರ್ವಕ ಹಾಗೂ ಪೂರ್ವ ಯೋಜಿತವಾಗಿದೆ. ಇದರಲ್ಲಿ ನಿಷೇಧಿತ ಸಂಘಟನೆಗಳ ಕೈವಾಡ ಇರುವ ಶಂಕೆಯಿದೆ. ಹಾಗಾಗಿ ಈ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಒಪ್ಪಿಸಲು ಪ್ರತಿಭಟನಾಕಾರರು ಆಗ್ರಹಿಸಿದರು.
ಕ್ಲಿಕ್ ಮಾಡಿ ಓದಿ: DINA RASHI BHAVISHYA: ದಿನ ಭವಿಷ್ಯ | ಸೆಪ್ಟೆಂಬರ್ 13 | ಮೌಲ್ಯದ ವಸ್ತು ಖರೀದಿ, ವ್ಯವಹಾರಗಳಲ್ಲಿ ಈಡೇರುವ ನಿರೀಕ್ಷೆ
ಪ್ರತಿಭಟನೆಯಲ್ಲಿ ಹಿಂದೂ ಮಹಾಗಣಪತಿ ಉತ್ಸವ ಸಮಿತಿ ಅಧ್ಯಕ್ಷ ಬಿ.ನಯನ್, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಟಿ.ಬದರೀನಾಥ್, ಬಿಜೆಪಿ ಮುಖಂಡ ಜಿ.ಎಂ.ಸುರೇಶ್, ವಿಎಚ್ಪಿ ಮುಖಂಡ ಕೇಶವ, ಬಜಂಗದಳ ಪ್ರಾಂತ ಸಯೋಜಕ ಪ್ರಭಂಜನ್, ಪ್ರಸನ್ನ ಗಣಪತಿ ಸಮಿತಿ ಅಧ್ಯಕ್ಷ ಗೋಪಾಲರಾವ್ ಜಾದವ್, ಪದಾಧಿಕಾರಿಗಳಾದ ನಾಗರಾಜ್ ಬೇದ್ರೆ, ಮಂಜುನಾಥ್, ಭಾನುಮೂರ್ತಿ, ಸಂದೀಪ್ ಮತ್ತಿತರರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
