CHITRADURGA NEWS | 24 OCTOBER 2025
ಚಿತ್ರದುರ್ಗ: ನಗರಸಭೆ ಸದಸ್ಯರುಗಳ ಅಧಿಕಾರವಧಿ ಅ.31ಕ್ಕೆ ಪೂರ್ಣಗೊಳ್ಳುತ್ತಿರುವ ಸಂದರ್ಭದಲ್ಲಿ ಸದಸ್ಯರುಗಳು ಸಾರ್ವಜನಿಕರ ತೆರಿಗೆ ಹಣದಲ್ಲಿ ಪ್ರವಾಸ ಹೊರಟಿರುವುದನ್ನು ವಿರೋಧಿಸಿ ಕರುನಾಡ ವಿಜಯಸೇನೆ ಕಾರ್ಯಕರ್ತರು ನಗರಸಭೆ ಎದುರು ಪ್ರತಿಭಟನೆ ನಡೆಸಿ ಮ್ಯಾನೇಜರ್ ಮೂಲಕ ಪೌರಾಯುಕ್ತರಿಗೆ ಮನವಿ ಸಲ್ಲಿಸಿದರು.
ಇದನ್ನೂ ಓದಿ: ನಗರಸಭೆ ಸದಸ್ಯರ ಪ್ರವಾಸ | ಅಕ್ರಮ ಮತ್ತು ಮೋಜು ಮಸ್ತಿಗಾಗಿ | ಮಹೇಶ್ ಸಿ ನಗರಂಗೆರೆ
ನಗರದ 35 ವಾರ್ಡ್ಗಳಲ್ಲಿ ಸಾರ್ವಜನಿಕರು ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಕುಡಿಯುವ ನೀರು, ರಸ್ತೆ, ಬೀದಿ, ದೀಪ ಚರಂಡಿ ವ್ಯವಸ್ಥೆಗಳಿಲ್ಲ. ನಗರದ ಪ್ರವಾಸಿ ಮಂದಿರದಿಂದ ಹಿಡಿದು ಗಾಂಧಿ ವೃತ್ತ, ಹೊಳಲ್ಕೆರೆ ರಸ್ತೆ, ದಾವಣಗೆರೆ ರಸ್ತೆ ಹಾಗೂ ಮೆದೆಹಳ್ಳಿ ರಸ್ತೆ ಕಿಷ್ಕಿಂದೆಯಿಂದ ಕೂಡಿದ್ದು, ವಾಹನಗಳ ದಟ್ಟಣೆ ಜಾಸ್ತಿಯಾಗಿದೆ.
ಘನತ್ಯಾಜ್ಯ ನಿರ್ವಹಣೆ ಅಧ್ಯಯನದ ಹೆಸರಿನಲ್ಲಿ ಅಹಮದಾಬಾದ್, ಚಂಢೀಗಡ ನಗರಗಳಿಗೆ ನಗರಸಭೆ ಸದಸ್ಯರುಗಳು ಪ್ರವಾಸ ಹೊರಟಿರುವುದು ಯಾವ ಪುರುಷಾರ್ಥಕ್ಕೆ ಎಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಪ್ರಶ್ನಿಸಿದರು?
ಇದನ್ನೂ ಓದಿ: ವಿವಿಧ ಯೋಜನೆ | ಕ್ರಿಶ್ಚಿಯನ್ ಸಮುದಾಯದಿಂದ ಅರ್ಜಿ ಅಹ್ವಾನ
ಕರುನಾಡ ವಿಜಯಸೇನೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವೀಣಗೌರಣ್ಣ, ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ಕಾರ್ಯದರ್ಶಿ ಜಗದೀಶ್, ಅಣ್ಣಪ್ಪ, ಯುವ ಘಟಕದ ಅಧ್ಯಕ್ಷ ನಾಗರಾಜ್ಮುತ್ತು, ತಿಪ್ಪೇಸ್ವಾಮಿ, ವಿಜಯಬಾಬು, ಅವಿನಾಶ್, ಅಖಿಲೇಶ್, ಶಶಿ, ನಾಗೇಶ್, ಸಿ.ಚಂದನ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
