
CHITRADURGA NEWS | 20 JULY 2025
ಚಿತ್ರದುರ್ಗ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ ಭೂ ಒಡೆತನ ಯೋಜನೆಯಡಿ ಭೂಮಿ ಖರೀದಿಸಲು ತಕರಾರು ಇದ್ದಲ್ಲಿ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಇದನ್ನೂ ಓದಿ: ಮದುವೆಗೆ ಹೆಣ್ಣು ಸಿಗಲಿಲ್ಲವೆಂದು ಹೋಮ್ ಗಾರ್ಡ್ ಆತ್ಮ*ಹತ್ಯೆ

ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮ ಬೆಂಗಳೂರು ಅವರ ಮಂಜೂರಾತಿ ಆದೇಶ ಸಂಖ್ಯೆ:ಪಜಾಪಪಂ/ಅಅನಿ/ ಭೂಒಯೋ/ಚಿತ್ರದುರ್ಗ/2025-26 ದಿನಾಂಕ:02.06.2025ರ ಆದೇಶದಲ್ಲಿ ಕೆ.ಹೆಚ್. ಹೊನ್ನೂರು ಸ್ವಾಮಿ ಬಿನ್ ಲೇ|| ಸಣ್ಣ ಹೊನ್ನೂರಪ್ಪ, ಬೊಮ್ಮಕ್ಕನಹಳ್ಳಿ ಗ್ರಾಮ, ಮೊಳಕಾಲ್ಮೂರು ತಾಲ್ಲೂಕು, ಕುರುಬ ಜನಾಂಗಕ್ಕೆ ಸೇರಿರುವ ಇವರ ಹೆಸರಿನಲ್ಲಿ ಮೊಳಕಾಲ್ಮೂರು ತಾಲ್ಲೂಕು ಸ್ವಾಮಿಕೆರೆ ಗ್ರಾಮದಲ್ಲಿ ಸರ್ವೇ ನಂ:19/02 ರಲ್ಲಿ 2 ಎಕರೆ ಖುಷ್ಕಿ ಭೂಮಿಯನ್ನು ಸಣ್ಣ ರಂಗಮ್ಮ ಕೋಂ ಜೆ.ಮಹಾಂತೇಶ್, ರಾಂಪುರ ಗ್ರಾಮ, ಮೊಳಕಾಲ್ಮೂರು ತಾಲ್ಲೂಕು, ಪರಿಶಿಷ್ಟ ಜಾತಿ (ಬುಡ್ಗ ಜಂಗಮ) ಜನಾಂಗದವರಿಗೆ ಭೂ ಒಡೆತನ ಯೋಜನೆಯಡಿ ಭೂಮಿ ಖರೀದಿಸಿ ನೀಡಲು ಆದೇಶ ಹೊರಡಿಸಲಾಗಿದ್ದು, ಅದರಂತೆ, ಈ ಸರ್ವೇ ನಂಬರ್ ಭೂಮಿಗೆ ಸಂಬಂಧಿಸಿದಂತೆ ಯಾವುದಾದರು ತಂಟೆ ತಕರಾರು ಇದ್ದಲ್ಲಿ 7 ದಿನಗಳೊಳಗಾಗಿ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗರವರ ಕಾರ್ಯಾಲಯಕ್ಕೆ ಆಕ್ಷೇಪಣೆ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಬ್ಲ್ಯಾಕ್ ಕಾಫಿಗೆ ಉಪ್ಪು ಬೆರೆಸಿ ಕುಡಿದರೆ ಈ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದಂತೆ
ನಿಗಧಿಪಡಿಸಲಾದ ದಿನಾಂಕದೊಳಗೆ ಆಕ್ಷೇಪಣೆಯನ್ನು ಸಲ್ಲಿಸದಿದ್ದಲ್ಲಿ, ಯಾವುದೇ ಆಕ್ಷೇಪಣೆ ಇಲ್ಲವೆಂದು ಭಾವಿಸಿ ಭೂಮಿಯನ್ನು ಖರೀದಿಸಿ ಫಲಾನುಭವಿಗೆ ನೊಂದಣಿ ಮಾಡಿಸಲು ಕ್ರಮ ವಹಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
