ಚಿತ್ರದುರ್ಗ ನ್ಯೂಸ್.ಕಾಂ: ಬಿಜೆಪಿಗೆ ನೂತನ ರಾಜ್ಯಾಧ್ಯಕ್ಷರ ನೇಮಕವಾದ ನಂತರ ಬಿಜೆಪಿ ಪಾಳೆಯದಲ್ಲಿ ಉತ್ಸಾಹ ಕಾಣಿಸುತ್ತಿದೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರಿಗೆ ಪಕ್ಷದ ಸಾರಥ್ಯ ನೀಡಿರುವುದು, ಈ ಉತ್ಸಾಹದ ಮಟ್ಟವನ್ನು ಮತ್ತಷ್ಟು ಹೆಚ್ಚಿಸಿದೆ.
ರಾಜ್ಯಾಧ್ಯಕ್ಷ ಜವಾಬ್ದಾರಿ ವಹಿಸಿಕೊಂಡ ನಂತರ ಬಿ.ವೈ.ವಿಜಯೇಂದ್ರ ಪ್ರವಾಸ ಪ್ರಾರಂಭಿಸಿದ್ದು, ಭಾನುವಾರ ನಾಡಿನ ಪ್ರಸಿದ್ಧ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿ, ಶ್ರೀ ಸಿದ್ಧಲಿಂಗ ಸ್ವಾಮೀಜಿ ಆಶೀರ್ವಾದ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಜೀವನ ಶೈಲಿ ಬದಲಾಗದಿದ್ದರೆ ಬದುಕು ಕಷ್ಟ
ಇದೇ ವೇಳೆ ಚಿತ್ರದುರ್ಗದ ಯುವ ಮುಖಂಡರು, ದೇವರಾಜ ಅರಸು ಶಿಕ್ಷಣ ಸಂಸ್ಥೆ ಸಿಇಓ ಆಗಿರುವ ಎಂ.ಸಿ.ರಘುಚಂದನ್ ಹಾಗೂ ಭೀಮಸಮುದ್ರದ ಯುವ ಉದ್ಯಮಿ ಜಿ.ಎಸ್.ಅನಿತ್ಕುಮಾರ್ ಸೇರಿದಂತೆ ಹಲವು ಮುಖಂಡರು, ಕಾರ್ಯಕರ್ತರು, ಚಿತ್ರದುರ್ಗದಿಂದ ತುಮಕೂರಿಗೆ ತೆರಳಿ ವಿಜಯೇಂದ್ರ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.
ಈ ವೇಳೆ ತುಮಕೂರು ಲೋಕಸಭಾ ಸದಸ್ಯರಾದ ಬಸವರಾಜು ಸೇರಿದಂತೆ ಎರಡೂ ಜಿಲ್ಲೆಗಳ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
