By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ರಾಹುಲ್‌ ಗಾಂಧಿಗೆ ನೈತಿಕತೆಯಿಲ್ಲ | ವಿಧಾನ ಪರಿಷತ್‌ ಸದಸ್ಯ ಎನ್‌.ರವಿ ಕುಮಾರ್‌
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ರಾಹುಲ್‌ ಗಾಂಧಿಗೆ ನೈತಿಕತೆಯಿಲ್ಲ | ವಿಧಾನ ಪರಿಷತ್‌ ಸದಸ್ಯ ಎನ್‌.ರವಿ ಕುಮಾರ್‌

ಲೋಕಸಮರ 2024

ರಾಹುಲ್‌ ಗಾಂಧಿಗೆ ನೈತಿಕತೆಯಿಲ್ಲ | ವಿಧಾನ ಪರಿಷತ್‌ ಸದಸ್ಯ ಎನ್‌.ರವಿ ಕುಮಾರ್‌

News Desk Chitradurga News
Last updated: 18 April 2024 06:56
News Desk Chitradurga News
1 year ago
Share
ಎನ್.ರವಿಕುಮಾರ್
ಎನ್.ರವಿಕುಮಾರ್
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 18 APRIL 2024
ಚಿತ್ರದುರ್ಗ: ವಿಶ್ವ ನಾಯಕ ಪ್ರಧಾನಿ ನರೇಂದ್ರ ಮೋದಿಯ ಪ್ರಾಮಾಣಿಕತೆ ಬಗ್ಗೆ ಮಾತನಾಡುವ ನೈತಿಕತೆ ರಾಹುಲ್ ಗಾಂಧಿಗೆ ಇಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಎನ್‌.ರವಿ ಕುಮಾರ್‌ ತಿಳಿಸಿದರು.

ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಪ್ರಚಾರಕ್ಕಾಗಿ ರಾಜ್ಯದಲ್ಲಿ ಪ್ರವಾಸ ಮಾಡುತ್ತಿರುವ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರಮೋದಿ ಆಡಳಿತದ ಪಾರದರ್ಶಕತೆಯನ್ನು ಪ್ರಶ್ನಿಸಿದ್ದಾರೆ. ಇದಕ್ಕೆ ಮೊದಲು ಕಾಂಗ್ರೆಸ್‌ನಲ್ಲಿ ನಡೆದಿರುವ ಹಗರಣಗಳ ಬಗ್ಗೆ ಉತ್ತರ ನೀಡಲಿ ಎಂದರು.

ಮನಮೋಹನ್‌ ಸಿಂಗ್‌ ದೇಶದ ಪ್ರಧಾನಿಯಾಗಿದ್ದಾಗ ಹದಿಮೂರು ಲಕ್ಷ ಕೋಟಿ ರೂ. ಹಗರಣವಾಗಿದೆ. ಈ ಎಲ್ಲದಕ್ಕೂ ಯಾರು ಹೊಣೆ? ಚುನಾವಣಾ ಬಾಂಡ್‍ಗಳ ಮೂಲಕ ಬಿಜೆಪಿ ಕೋಟಿಗಟ್ಟಲೆ ಹಣ ಸಂಗ್ರಹಿಸುತ್ತಿದೆ ಎಂದು ಆಪಾದನೆ ಮಾಡುತ್ತಿರುವ ರಾಹುಲ್‌ ಗಾಂಧಿಗೆ ಮೋದಿರವರ ಪ್ರಾಮಾಣಿಕ ಆಡಳಿತವನ್ನು ಪ್ರಶ್ನಿಸುವ ಅಧಿಕಾರವಿಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ತಿರುಗೇಟು ನೀಡಿದರು.

ಕ್ಲಿಕ್ ಮಾಡಿ ಓದಿ: ಪ್ರಭು ಶ್ರೀರಾಮನ ಗುಣದ ಹಾದಿಯಲ್ಲಿ ಸಾಗೋಣ | ರಾಮ ಮಂದಿರದಲ್ಲಿ ರಾಮನವಮಿ ಸಂಭ್ರಮ

ಚುನಾವಣಾ ಬಾಂಡ್‌ಗಳ ಮೂಲಕ ನಮ್ಮ ಪಕ್ಷಕ್ಕೆ ಶೇ.37 ರಷ್ಟು ಹಣ ಬಂದಿದ್ದರೆ. ಬೇರೆ ಪಕ್ಷಗಳಿಗೆ ಶೇ.67 ರಷ್ಟು ಹಣ ಸಂಗ್ರಹವಾಗಿದೆ. ಮೋದಿ ಆಡಳಿತವನ್ನು ವಿಶ್ವ ಮೆಚ್ಚಿಕೊಂಡಿದೆ. ರಾಹುಲ್‌ ಗಾಂಧಿಗೆ ಟೀಕಿಸುವ ನೈತಿಕತೆಯಿಲ್ಲ ಎಂದು ಸವಾಲೆಸೆದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್‌ ಎಂದು ಕೂಗುವವರ ವಿರುದ್ಧ ಇದುವರೆವಿಗೂ ಕ್ರಮ ಕೈಗೊಳ್ಳಲು ಆಗದ ಕಾಂಗ್ರೆಸ್‌ಗೆ ನಿಜವಾಗಿಯೂ ನಾಚಿಕೆಯಾಗಬೇಕು. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಕಾಂಗ್ರೆಸ್‌ ಅರವತ್ತು ಪರ್ಸೆಂಟ್ ಕಮೀಷನ್ ಸರ್ಕಾರ ಎನ್ನುವುದನ್ನು ಬಹಿರಂಗಪಡಿಸಿದ್ದಾರೆ.

ಕ್ಲಿಕ್ ಮಾಡಿ ಓದಿ: ವದ್ದೀಕೆರೆ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ | 22ರಂದು ಬ್ರಹ್ಮ ರಥೋತ್ಸವ

ಕಾಂಗ್ರೆಸ್ ಸರ್ಕಾರದಲ್ಲಿ ಒಂದು ಕಿ.ಮೀ. ರಸ್ತೆಯೂ ಆಗಿಲ್ಲ. ಗುಂಡಿ ಬಿದ್ದ ರಸ್ತೆಗೆ ಮುಣ್ಣು ಹಾಕಿ ಮುಚ್ಚಿಲ್ಲ. ಭ್ರಷ್ಠಾಚಾರ, ಗೂಂಡಾಗಿರಿ ಮಿತಿ ಮೀರಿದೆ. ಕುಡಿಯುವ ನೀರಿಗೆ ಹಾಹಾಕಾರವಿದೆ. ಜನವಿರೋಧಿ ಕಾಂಗ್ರೆಸ್‌ ಸರ್ಕಾರದ ಬಗ್ಗೆ ರಾಹುಲ್ ಗಾಂಧಿ ಏಕೆ ಮಾತನಾಡುತ್ತಿಲ್ಲ. ಪ್ರಧಾನಿ ನರೇಂದ್ರಮೋದಿರವರು ಪ್ರತಿ ಮನೆಗಳ ಮೇಲೆ ಸೋಲಾರ್ ಪ್ಲಾಂಟ್‍ಗಳನ್ನು ಅಳವಡಿಸುವ ಚಿಂತನೆಯಲ್ಲಿದ್ದಾರೆ. ಸಾವಯವ ಕೃಷಿಗೆ ಒತ್ತು ನೀಡಲಾಗುವುದು ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ, ನಗರಾಧ್ಯಕ್ಷ ನವೀನ್‌ ಚಾಲುಕ್ಯ, ಮಾಧ್ಯಮ ವಕ್ತಾರ ದಗ್ಗೆ ಶಿವಪ್ರಕಾಶ್‌, ವಕ್ತಾರ ನಾಗರಾಜ್‌ ಬೇದ್ರೆ, ಯಶವಂತ್, ನಗರ ಕಾರ್ಯದರ್ಶಿ ಶಂಭು, ತಿಪ್ಪೇಸ್ವಾಮಿ ಛಲವಾದಿ ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:EthicsLegislative CouncilModiN. Ravi KumarRahul Gandhiಎನ್‌.ರವಿ ಕುಮಾರ್‌ನೈತಿಕತೆಮೋದಿರಾಹುಲ್ ಗಾಂಧಿವಿಧಾನ ಪರಿಷತ್‌
Share This Article
Facebook Email Print
Previous Article ಮಠಾಧೀಶರ ಆಶೀರ್ವಾದ ಪಡೆದ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಮಠಾಧೀಶರ ಆಶೀರ್ವಾದ ಪಡೆದ ಸಚಿವ ಎಸ್.ಎಸ್.ಮಲ್ಲಿಕಾರ್ಜುನ
Next Article ಎನ್.ವೈ.ಗೋಪಾಲಕೃಷ್ಣ ಈ ಚುನಾವಣೆಲಿ ಲೀಡ್ ಕೊಟ್ಟವರಿಗೆ ಸಚಿವ ಸ್ಥಾನ ಪಕ್ಕಾನಾ | ಕೌತುಕ ಮೂಡಿಸಿದ ಎನ್.ವೈ.ಗೋಪಾಲಕೃಷ್ಣ ಹೇಳಿಕೆ
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up