ಚಿತ್ರದುರ್ಗ: ಜಿಲ್ಲೆಗೆ ಮತ್ತೆ ಮಳೆರಾಯ ಕರುಣೆ ತೋರಿದ್ದು, ಗುರುವಾರ ರಾತ್ರಿ ಹಾಗೂ ಶುಕ್ರವಾರ ನಸುಕಿನಲ್ಲೇ ಹದವಾದ ಮಳೆಯಾಗಿದೆ.
ಜಿಲ್ಲೆಯ ಹೊಸದುರ್ಗ, ಹೊಳಲ್ಕೆರೆ, ಚಿತ್ರದುರ್ಗ ಸೇರಿದಂತೆ ಹಲವು ಕಡೆಗಳಲ್ಲಿ ಹಸಿಯಾದ ಮಳೆಯಾಗಿದೆ. ಮಳೆಯಿಂದ ರೈತರು ಸಂತಸಗೊಂಡಿದ್ದು, ಮುಂಗಾರುಪೂರ್ವ ಮಳೆಯೇ ಬಂಪರ್ ಕೊಡುಗೆಯಾಗಿದೆ.
ಇದನ್ನೂ ಓದಿ:ನಿಮ್ಮ ಮನೆಯಲ್ಲಿ ವಾಸ್ತು ದೋಷವಿದ್ದರೆ ಈ ಚಿಹ್ನೆಗಳು ನಿಮ್ಮಲ್ಲಿ ಕಂಡುಬರುತ್ತವೆಯಂತೆ
ಈಗಾಗಲೇ ಕೊಳವೆ ಬಾವಿಗಳಲ್ಲಿ ನೀರು ಕಡಿಮೆಯಾಗುತ್ತಿದ್ದು, ರೈತರು ಆತಂಕಕ್ಕೀಡಾಗಿದ್ದರು. ಉತ್ತಮ ಮಳೆಯಾಗಿದ್ದರಿಂದ ರೈತರು ಸಂತಸಗೊಂಡಿದ್ದು, ಇನ್ನೂ ಒಂದು ವಾರ ಬೋರ್ ನೀರು ಹಾಯಿಸುವುದು ತಪ್ಪಿತು ಎಂದು ನಿಟ್ಟುಸಿರು ಬಿಟ್ಟಿದ್ದಾರೆ.
ಇನ್ನೂ ಕೆರೆ ಕಟ್ಟೆಗಳು ತುಂಬುವಷ್ಟು ಮಳೆಯಾಗಬೇಕಿದೆ. ಆಗ ಮಾತ್ರ ಬೋರ್ವೆಲ್ಗಳು ರೀಚಾರ್ಜ್ ಆಗುತ್ತವೆ.
ಇದನ್ನೂ ಓದಿ:ಬಾಲ್ಯವಿವಾಹ ಕಂಡು ಬಂದರೆ ನಿರ್ದಾಕ್ಷಿಣ್ಯ ಕಾನೂನು ಕ್ರಮ | ಜಿಲ್ಲಾಧಿಕಾರಿ ವೆಂಕಟೇಶ್
ಸದ್ಯ ಮುಂಗಾರುಪೂರ್ವ ಮಳೆ ಹದವಾಗಿ ಸುರಿದಿರುವುದರಿಂದ ಕೃಷಿ ಚಟುವಟಿಕೆಗಳು ಗರಿಗೆದರಲಿವೆ. ರೈತರು ಜಮೀನು ಹದ ಮಾಡಿಕೊಂಡು ಹತ್ತಿ, ಮೆಕ್ಕೆಜೋಳ ಮತ್ತಿತರೆ ಬೆಳೆಗಳನ್ನು ಬಿತ್ತನೆ ಮಾಡಲು ಈ ವಾರದಲ್ಲಿ ಚಟುವಟಿಕೆ ಆರಂಭಿಸಲಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
