
CHITRADURGA NEWS | 19 APRIL 2024
ಚಿತ್ರದುರ್ಗ: ಕಳೆದೊಂದು ವರ್ಷದಿಂದ ಸರಿಯಾದ ಮಳೆಯೇ ಆಗದೆ ಭೀಕರ ಬರಗಾಲಕ್ಕೆ ತುತ್ತಾಗಿದ್ದ ರೈತರ ಮೊಗದಲ್ಲಿ ಮಂದಹಾಸ ಮೂಡಿಸುವ ಮಳೆ ಅಂತೂ ಬಲಗಾಲಿಟ್ಟು ಬಂದಿದೆ.
ಭಾರತೀಯ ಹವಾಮಾನ ಇಲಾಖೆ ಏಪ್ರಿಲ್ 18 ಮತ್ತು 19 ರಂದು ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿತ್ತು. ಏ.18 ರಂದು ಮಳೆಯ ವಾತಾವರಣ ನಿರ್ಮಾಣವಾಗಿದ್ದರೂ ಮಳೆ ಸುರಿಯಲಿಲ್ಲ.

ಇದನ್ನೂ ಓದಿ: ಶಿವಮೊಗ್ಗದಲ್ಲಿ ರಾಶಿ ಅಡಿಕೆ ಬೆಲೆಯಲ್ಲಿ ಭರ್ಜರಿ ಜಿಗಿತ | ಒಂದೇ ದಿನ 1500 ರೂ. ಹೆಚ್ಚಳ
ಆದರೆ, ಏ.19 ಶುಕ್ರವಾರ ಮಧ್ಯಾಹ್ನ 3.30ರ ಹೊತ್ತಿಗೆ ಜಿಲ್ಲೆಯ ವಿವಿಧೆಡೆ ಮಳೆಯ ಆರ್ಭಟ ಶುರುವಾಗಿದೆ.
ಹೊಳಲ್ಕೆರೆ ತಾಲೂಕಿನ ತಾಳ್ಯ, ಮದ್ದೇರು ಭಾಗದಲ್ಲಿ ಭಾರೀ ಗಾಳಿ ಹಾಗೂ ಗುಡುಗಿನ ಶಬ್ದಕ್ಕೆ ರೈತರು ಬೆಚ್ಚಿ ಬಿದ್ದಿದ್ದಾರೆ.
ಚಿತ್ರದುರ್ಗ ನಗರದಲ್ಲೂ ಮೋಡ ಕವಿದ ವಾತಾವರಣ ನಿರ್ಮಾಣವಾಗಿ ನಿಧಾನವಾಗಿ ಮಳೆ ಆರಂಭವಾಗಿದೆ. ಹೊಸದುರ್ಗ ತಾಲೂಕಿನಲ್ಲೂ ಮಳೆಯ ವಾತಾವರಣ ಮನೆ ಮಾಡಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
