CHITRADURGA NEWS | 21 AUGUST 2024
ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ನಗರಕ್ಕೆ ವರುಣಾಘಾತವಾಗಿದ್ದು, ಜನರು ತಲ್ಲಣಿಸಿದ್ದಾರೆ. ನೀರಿನಲ್ಲೇ ನಿಂತು ರಾತ್ರಿ ಕಳೆದಿದ್ದಾರೆ.
ಚಳ್ಳಕೆರೆ ನಗರದ ತಗ್ಗು ಪ್ರದೇಶದ ನಿವಾಸಿಗಳ ಗೋಳು ಕೇಳುವವರು ಇಲ್ಲವಾಗಿದೆ. ರಾಜಕಾಲುವೆ ಅಕ್ಕ ಪಕ್ಕದ ನಿವಾಸಿಗಳು ಅಂಗೈಯಲ್ಲಿ ಜೀವ ಹಿಡಿದುಕೊಂಡು ಇಡೀ ರಾತ್ರಿ ನಿದ್ದೆಯಿಲ್ಲದೆ ಕಾಲ ದೂಡಿದ್ದಾರೆ. ರಹೀಂ ನಗರ, ಸೂಜಿಮಲ್ಲೇಶ್ವರ ನಗರ, ಹಳೆ ನಗರ, ಕಾಟಪನಹಟ್ಟಿ, ಅಂಬೇಡ್ಕರ್ ನಗರ, ಪಾವಗಡ ರಸ್ತೆ ಹೀಗೆ ಅನೇಕ ಕಡೆ ನಿವಾಸಿಗಳ ಪಾಡು ಹೇಳತೀರದಾಗಿದೆ.
ಕ್ಲಿಕ್ ಮಾಡಿ ಓದಿ: ಚಿತ್ರದುರ್ಗದ ಈ ಗ್ರಾಮಕ್ಕೆ ರಾಜ್ಯದಲ್ಲೇ ಅತಿ ಹೆಚ್ಚು ಮಳೆ | ತುಂಬಿ ಹರಿದ ಹಳ್ಳಕೊಳ್ಳ

ರಾಜಕಾಲುವೆಯಲ್ಲಿ ಸ್ವಚ್ಚತೆ ಇಲ್ಲದೆ ಗಿಡಗಂಟೆ ಬೆಳೆದು ಮಳೆಯ ನೀರು ಮುಂದಕ್ಕೆ ಸಾಗದೆ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ. ಮನೆಯಲ್ಲಿರುವ ದವಸ ಧಾನ್ಯ ಸಂಪೂರ್ಣವಾಗಿ ನೀರಿನಲ್ಲಿ ಕೊಚ್ಚಿ ಹೋಗಿವೆ.
ನಗರ ಸಂಪರ್ಕ ಕಲ್ಪಿಸುವ ಎಲ್ಲಾ ರಸ್ತೆಗಳು ಜಲಾವೃತಗೊಂಡಿವೆ. ಇದರಿಂದ ವಾಹನ ಸಾವರರು ಪರದಾಡುವಂತಾಯಿತು. ಪಾವಗಡರಸ್ತೆಯ ನೀಲಕಂಠೇಶ್ವರ ದೇವಸ್ಥಾನ ಸಮೀಪ ರಸ್ತೆ ಮೇಲೆ ನೀರು ಹರಿದ ಕಾರಣ ರಸ್ತೆ ಬಂದ್ ಆಗಿದೆ. ಕಾಟಪನಹಟ್ಟಿಗೆ ಹೋಗುವ ಪಾದಗಟ್ಟೆ ಸಮೀಪದ ಹಳ್ಳ ತುಂಬಿ ಹರಿದ ಪರಿಣಾಮ ರಸ್ತೆಯನ್ನು ತಾತ್ಕಾಲಿಕ ಬಂದ್ ಮಾಡಲಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
