
CHITRADURGA NEWS | 31 MAY 2024
ಚಿತ್ರದುರ್ಗ: ನಗರದ ಕವಾಡಿಗರಹಟ್ಟಿಯಲ್ಲಿ ಹಾಗೂ ದಾವಣಗೆರೆ ರಸ್ತೆಯಲ್ಲಿರುವ ಯೂನಿಯನ್ ಪಾರ್ಕ್ ಕಾರ್ನರ್ನಲ್ಲಿರುವ ರಾಜಕಾಲುವೆಯನ್ನು ಒತ್ತುವರಿ ತೆರವುಯನ್ನು ಮಾಡಲಾಯಿತು.
ಇದನ್ನೂ ಓದಿ: ಮದ್ಯಪ್ರಿಯರೇ ಗಮನಿಸಿ…ನಾಳೆಯಿಂದ ಮದ್ಯ ಮಾರಾಟ ಬಂದ್
ರಾಜಕಾಲುವೆಯಲ್ಲಿ ತುಂಬಿದ್ದ ಹೂಳು ತೆಗೆಸಿ ನೀರು ಸರಾಗವಾಗಿ ಹರಿಯುವಂತೆ ಮಾಡಲಾಯಿತು.
ಈ ವೇಳೆ ನಗರಸಭೆ ಪೌರಾಯುಕ್ತೆ ರೇಣುಕಾ ಮಾತನಾಡಿ, ಮಳೆಗಾಲದಲ್ಲಿ ರಾಜಕಾಲುವೆ ತುಂಬಿ ಮನೆಗಳಿಗೆಲ್ಲಾ ನೀರು ನುಗ್ಗಿ ಅಪಾಯ ಸಂಭವಿಸಬಾರದೆಂದು ಹೂಳು ತೆಗೆಸಲಾಗುತ್ತಿದೆ. ಸಾರ್ವಜನಿಕರು ಪ್ಲಾಸ್ಟಿಕ್ ಮತ್ತು ಕಸವನ್ನು ಚರಂಡಿ, ರಾಜಕಾಲುವೆಗಳಲ್ಲಿ ಎಸೆಯುವ ಬದಲು ದಿನ ಬೆಳಿಗ್ಗೆ ಮನೆ ಬಾಗಿಲಿಗೆ ಬರುವ ನಗರಸಭೆ ವಾಹನಗಳಿಗೆ ಹಸಿ ಕಸ ಒಣ ಕಸವನ್ನು ಬೇರ್ಪಡಿಸಿ ಹಾಕುವ ಮೂಲಕ ಸ್ವಚ್ಚತೆಗೆ ನಗರಸಭೆಯೊಂದಿಗೆ ಕೈಜೋಡಿಸಿ ಎಂದು ಮನವಿ ಮಾಡಿದರು.
ಇದನ್ನೂ ಓದಿ: ಜಿಲ್ಲಾಸ್ಪತ್ರೆಗೆ ನ್ಯಾಯಾಧೀಶರ ಭೇಟಿ | ಸ್ವಚ್ಛತೆ ಕಾಪಾಡಲು ಸೂಚನೆ
ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಜಯಪ್ಪ, ಹೆಲ್ತ್ ಇನ್ಸ್ಪೆಕ್ಟರ್ಗಳಾದ ಸರಳ, ಭಾರತಿ, ನಾಗರಾಜ್ ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
