CHITRADURGA NEWS | 30 JULY 2024
ಚಿತ್ರದುರ್ಗ: ಪಡಿತರ ಅಕ್ಕಿ(Ration rice seized)ಯನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ನಾಲ್ವರ ವಿರುದ್ಧ ದೂರು ದಾಖಲಿಸಿರುವ ಪೊಲೀಸರು ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.
ಮೊಳಕಾಲ್ಮುರು ತಾಲ್ಲೂಕಿನ ಬಿ.ಜಿ.ಕೆರೆ ಸಮೀಪದ ವೇ ಬ್ರಿಡ್ಜ್ ಪಕ್ಕದಲ್ಲಿ ಪಡಿತರ ಅಕ್ಕಿಯನ್ನು ಲಾರಿಗೆ ಲೋಡ್ ಮಾಡುತ್ತಿರುವುದು ಕಂಡುಬಂದಿದೆ. ಕೂಡಲೇ ಕಾರ್ಯಪ್ರವೃತ್ತರಾದ ಪಿಎಸ್ಐ ಈರೇಶ್ ನೇತೃತ್ವದ ತಂಡ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಪಡಿತರ ಯೋಜನೆಯ ಅಂದಾಜು 13 ಟನ್ನಷ್ಟು ಅಕ್ಕಿಯನ್ನು ವಶಕ್ಕೆ ಪಡೆದಿದೆ. ಅಕ್ಕಿಗೆ ಸಂಬಂಧಪಟ್ಟಂತೆ ಯಾವುದೇ ದಾಖಲೆಗಳು ಇಲ್ಲದಿರುವುದು ತಿಳಿದು ಬಂದಿದೆ.
ಇದನ್ನೂ ಓದಿ: ಭದ್ರಾ ಮೇಲ್ದಂಡೆ ಬಗ್ಗೆ ಧ್ವನಿ ಎತ್ತಿದೆ ಎಚ್.ಡಿ.ದೇವೇಗೌಡ

ಲಾರಿಯನ್ನು ವಶಕ್ಕೆ ಪಡೆಯಲಾಗಿದ್ದು, ಮೊಳಕಾಲ್ಮುರು ತಾಲ್ಲೂಕಿನ ಬೊಮ್ಮದೇವರಹಳ್ಳಿಯ ಹೇಳರಪ್ಪ, ಸಂಡೂರು ತಾಲ್ಲೂಕಿನ ಎನ್.ಬಸಾಪುರ ಗ್ರಾಮದ ರಾಮಣ್ಣ, ಚಳ್ಳಕೆರೆ ನಗರದ ಬಾಬಣ್ಣ, ಓಬಳೇಶ್ ವಿರುದ್ಧ ತಾಲ್ಲೂಕು ಆಹಾರ ನಿರೀಕ್ಷಕ ಗೀತಾಂಜನೇಯ ಅವರು ದೂರು ದಾಖಲಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
