SRS PU ಕಾಲೇಜಿಗೆ ದಾಖಲೆಯ ಫಲಿತಾಂಶ

CHITRADURGA NEWS | 10 APRIL 2024

ಚಿತ್ರದುರ್ಗ: ನಗರದ SRS ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು 100% ಫಲಿತಾಂಶ ದಾಖಲಿಸಿದ್ದಾರೆ.

ಮಾರ್ಚ್ 01 ರಿಂದ 22 ರವರೆಗೆ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಏಪ್ರೀಲ್ 10 ರಂದು ಪ್ರಕಟವಾಗಿದೆ.

ಇದನ್ನೂ ಓದಿ: ಲಾರಿಗೆ ಖಾಸಗಿ ಬಸ್ ಡಿಕ್ಕಿ | 28 ಜನ ಜಿಲ್ಲಾಸ್ಪತ್ರೆಗೆ ದಾಖಲು

ನಗರದ ಎಸ್‍ಆರ್‍ಎಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ನೂರಕ್ಕೆ ನೂರರಷ್ಟು ಫಲಿತಾಂಶ ದಾಖಲಿಸುವ ಮೂಲಕ ದಾಖಲೆ ಬರೆದಿದ್ದಾರೆ.

ಎಸ್.ನೇಹಾ – ಚಂದ್ರಿಕಾ ಜಿ ಕಲ್ಯಾಣಿ

ಸತತ ದಾಖಲೆಯ ಫಲಿತಾಂಶ ತರುತ್ತಿದ್ದು, ಈ ವರ್ಷ ಕೂಡಾ ಈ ಪರಂಪರೆ ಮುಂದುವರೆದಿದೆ.

ಇದನ್ನೂ ಓದಿ: ಮನೆಯಿಂದಲೇ ಮತದಾನಕ್ಕೆ ಡೇಟ್ ಫಿಕ್ಸ್ | ಕೇವಲ ಮೂರು ದಿನ ಅವಕಾಶ

ಈ ಹಿಂದಿನ ಎಲ್ಲಾ ದಾಖಲೆಗಳನ್ನು ಮೀರಿ, ಒಟ್ಟು 448 ವಿದ್ಯಾರ್ಥಿಗಳಿಗೆ 343 ವಿದ್ಯಾರ್ಥಿಗಳು ಅತ್ಯುತ್ತನ್ನತ ಶ್ರೇಣಿ (ಡಿಸ್ಟಿಂಕ್ಷನ್) ಪಡೆದರೆ, ವಿವಿಧ ವಿಷಯಗಳಲ್ಲಿ ಓಟ್ಟು 51 ವಿದ್ಯಾರ್ಥಿಗಳು 100 ಕ್ಕೆ 100 ಅಂಕಗಳನ್ನು ಪಡೆದು ಜಿಲ್ಲೆಗೆ ಕೀರ್ತೀ ತಂದಿದ್ದಾರೆ.

ಕಾಲೇಜಿನ ವಿದ್ಯಾರ್ಥಿಗಳಾದ ಎಸ್.ನೇಹಾ 600 ಕ್ಕೆ 586 ಅಂಕಗಳನ್ನು ಪಡೆದಿದ್ದಾರೆ.

ಇದನ್ನೂ ಓದಿ: ಕೋಟೆನಾಡಿನ ದ್ವಿತೀಯ ಪಿಯುಸಿ ಫಲಿತಾಂಶ | ಚಿತ್ರದುರ್ಗಕ್ಕೆ ಈ ಬಾರಿ ಎಷ್ಟನೇ ಸ್ಥಾನ ಗೊತ್ತಾ ?

ಚಂದ್ರಿಕಾ ಜಿ ಕಲ್ಯಾಣಿ, ಎಸ್.ಪ್ರಖ್ಯಾತ್ ಕ್ರಮವಾಗಿ 585, 584 ಅಂಕ ಗಳಿಸುವ ಮೂಲಕ ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದಿದ್ದಾರೆ.

ಎಸ್.ಪ್ರಖ್ಯಾತ್

SRS ಪಿಯು ಕಾಲೇಜು ಈ ವರ್ಷವೂ ಅತ್ಯುತ್ತಮ ಫಲಿತಾಂಶ ದಾಖಲಿಸಿ, ಕನ್ನಡ, ಹಿಂದಿ, ರಸಾಯನಶಾಸ್ತ್ರ, ಗಣಿತಶಾಸ್ತ್ರ, ಜೀವಶಾಸ್ತ್ರ, ಅರ್ಥಶಾಸ್ತ್ರ, ವ್ಯವಹಾರ ಅಧ್ಯಯನ, ಸಂಖ್ಯಾಶಾಸ್ತ್ರ ಹಾಗೂ ಗಣಕ ವಿಜ್ಞಾನ ವಿಷಯಗಳಲ್ಲಿ ಶೇ. ನೂರಕ್ಕೆ ನೂರು ಅಂಕಗಳನ್ನು ಪಡೆದು ಇತಿಹಾಸವನ್ನು ಮುಂದುವರೆಸಿದೆ.

ಇದನ್ನೂ ಓದಿ: ಬಾಯಲ್ಲಿ ಸವೆದ ಪೆಪ್ಪರ್ ಮೆಂಟಿನಾಕಾರದ ಒಂದು ಚಂದ್ರ ಕಂಡರೆ | ಶ್ರೀ ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಗಳ ವಿಶೇಷ ಲೇಖನ

ಕಾಲೇಜಿನ ಉತ್ತಮ ಫಲಿತಾಂಶಕ್ಕೆ ಕೈಗೊಂಡ ಕ್ರಮಗಳು ಅತ್ಯುತ್ತಮ ಯಶಸ್ಸು ಗಳಿಸಿ ಎಸ್ ಆರ್ ಎಸ್ ಪಿಯು ಕಾಲೇಜು ಗುಣಮಟ್ಟದ ತರಬೇತಿಯಲ್ಲಿ ತನ್ನ ನಾಗಲೋಟವನ್ನು ಮುಂದುವರೆಸಿದೆ ಎಂದು ಸಂಸ್ಥೆಯ ಅಧ್ಯಕ್ಷ ಬಿ.ಎ.ಲಿಂಗಾರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ.

ಕಾಲೇಜು ಹಾಗೂ ಜಿಲ್ಲೆಗೆ ಕೀರ್ತಿ ತಂದಿರುವ ಸಾಧಕ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಬಿ.ಎ.ಲಿಂಗಾರೆಡ್ಡಿ, ಕಾರ್ಯದರ್ಶಿಗಳಾದ ಸುಜಾತ ಲಿಂಗಾರೆಡ್ಡಿ, ಉಪಾಧ್ಯಕ್ಷ ಬಿ.ಎಲ್.ಅಮೋಘ್, ಆಡಳಿತಾಧಿಕಾರಿಗಳಾದ ಡಾ.ಟಿ.ಎಸ್.ರವಿ, ಪ್ರಾಚಾರ್ಯರಾದ ಈ.ಗಂಗಾಧರ್, ಉಪ ಪ್ರಾಂಶುಪಾಲರಾದ ಬಿ.ಮನೋಹರ ಸೇರಿದಂತೆ ಎಲ್ಲ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version