
CHITRADURGA NEWS | 30 SEPTEMBER 2025
ಚಿತ್ರದುರ್ಗ: ರಾಜ್ಯ ಸರ್ಕಾರದ ಎಲ್ಲಾ ನಾಗರಿಕ ಸೇವಾ ಹುದ್ದೆಗಳ ನೇಮಕಾತಿಯಲ್ಲಿ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 30 | ಹತ್ತಿ ರೇಟ್ ಎಷ್ಟಿದೆ?
ಹಲವಾರು ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳು ಸಲ್ಲಿಸಿದ ಮನವಿ ಪರಿಗಣಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಅನುಮೋದನೆಯೊಂದಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಪ್ರಕಟಿಸಿದೆ.
ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿಯಾಗುವವರೆಗೆ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಅಥವಾ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ಮುಂದಿನ ಆದೇಶದವರೆವಿಗೂ ಹೊರಡಿಸಬಾರದೆಂದು ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಗೆ ಸೂಚಿಸಲಾಗಿತ್ತು.
ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಅಗತ್ಯ ಮಾರ್ಪಾಡುಗಳೊಂದಿಗೆ ಅಂಗೀಕರಿಸಿ, ಪರಿಶಿಷ್ಟ ಜಾತಿಯಲ್ಲಿರುವ 101 ಜಾತಿಗಳನ್ನು 5 ಪ್ರವರ್ಗಗಳ ಬದಲಾಗಿ ಪ್ರವರ್ಗ-ಎ, ಪ್ರವರ್ಗ-ಬಿ ಮತ್ತು ಪ್ರವರ್ಗ-ಸಿ ಎಂದು 3 ಪ್ರವರ್ಗಗಳಾಗಿ ವರ್ಗೀಕರಿಸಿ, ಶಿಕ್ಷಣ ಮತ್ತು ಉದ್ಯೋಗದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಶೇಕಡ 17 ರಷ್ಟು ಮೀಸಲಾತಿಯನ್ನು ಪ್ರವರ್ಗ- ಎರಲ್ಲಿನ ಸಮುದಾಯಗಳಿಗೆ ಶೇಕಡ 6 ರಷ್ಟು, ಪ್ರವರ್ಗ-ಬಿ ರಲ್ಲಿನ ಸಮುದಾಯಗಳಿಗೆ ಶೇಕಡ 6 ರಷ್ಟು ಮತ್ತು ಪ್ರವರ್ಗ – ಸಿ ರಲ್ಲಿನ ಸಮುದಾಯಗಳಿಗೆ ಶೇಕಡ 5 ರಷ್ಟು ನಿಗದಿಪಡಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿರುತ್ತದೆ.
ಇದನ್ನೂ ಓದಿ: ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ದೊಡ್ಡಕೆರೆ ಎಚ್.ಜಿ.ಮಂಜಪ್ಪ ಅಧಿಕಾರ ಸ್ವೀಕಾರ
ಈ ಹಿಂದೆ ನೇರ ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆ ಬಯಸಿ ಅರ್ಜಿಗಳನ್ನು ಸಲ್ಲಿಸಿ ಭಾಗವಹಿಸುವ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಗೆ ಕ್ರಮವಾಗಿ 2 ವರ್ಷಗಳ ಸಡಿಲಿಕೆ ನೀಡಲು ತೀರ್ಮಾನಿಸಲಾಗಿರುತ್ತು.
ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿ ಹೊರಡಿಸುವ ಅಧಿಸೂಚನೆಗಳನ್ವಯ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ (as a one-time measure) 2 ವರ್ಷಗಳ ಸಡಿಲಿಕೆ ನೀಡಿ ಆದೇಶಿಸಲಾಗಿತ್ತು.
ಆದರೆ ಹಲವಾರು ಜನಪ್ರತಿನಿದಿಗಳು ಮತ್ತು ಸಂಘ ಸಂಸ್ಥೆಗಳು ಮನವಿ ಸಲ್ಲಿಸಿ ರಾಜ್ಯ ಸಿವಿಲ್ ಸೇವೆಗಳಿಗೆ ಮಾಡುವ ನೇರ ನೇಮಕಾತಿಯಲ್ಲಿ ಗರಿಷ್ಠ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆಯನ್ನು ನೀಡುವಂತೆ ಕೋರಿದ್ದರು.
ಇದನ್ನೂ ಓದಿ: ಒಳಮೀಸಲಾತಿ ವರ್ಗೀಕರಣದಲ್ಲಿ ವಂಚನೆ | ಕೊರಚ, ಕೊರಮ, ಭೋವಿ, ಲಂಬಾಣಿ ಸಮುದಾಯಗಳಿಂದ ಬೃಹತ್ ಪ್ರತಿಭಟನೆ
ಸದರಿ ಮನವಿಗಳನ್ನು ಸರ್ಕಾರವು ಪರಿಶೀಲಿಸಿ ಒಂದು ಬಾರಿಗೆ ಮಾತ್ರ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆ ನೀಡಲು* ತೀರ್ಮಾನಿಸಿ, ದಿನಾಂಕ: 06.09.2025ರ ಆದೇಶದ ಹಿಂಪಡೆದು, ಈ ಆದೇಶ ಹೊರಡಿಸಿದ ದಿನಾಂಕದ ನಂತರ ಮುಂದಿನ ದಿನಾಂಕ 31-12-2027 ರವರೆಗೆ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಗಳನ್ನು ಆಹ್ವಾನಿಸಿ ಹೊರಡಿಸುವ ಅಧಿಸೂಚನೆಗಳನ್ವಯ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ (as a one-time measure) 3 ವರ್ಷಗಳ ಸಡಿಲಿಕೆ ನೀಡಿ ಆದೇಶಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, (ಸೇವಾ ನಿಯಮಗಳು) ಆದೇಶ ಹೊರಡಿಸಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
