By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಸ್ವಾಮಿ ವಿವೇಕಾನಂದರ‌‌ ಚಿಂತನೆಗಳ ಪ್ರಸ್ತುತತೆ | ಕಾನೂನು ಕಾಲೇಜಿನಲ್ಲಿ ಸಮ್ಮೇಳನ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಸ್ವಾಮಿ ವಿವೇಕಾನಂದರ‌‌ ಚಿಂತನೆಗಳ ಪ್ರಸ್ತುತತೆ | ಕಾನೂನು ಕಾಲೇಜಿನಲ್ಲಿ ಸಮ್ಮೇಳನ

ಮುಖ್ಯ ಸುದ್ದಿ

ಸ್ವಾಮಿ ವಿವೇಕಾನಂದರ‌‌ ಚಿಂತನೆಗಳ ಪ್ರಸ್ತುತತೆ | ಕಾನೂನು ಕಾಲೇಜಿನಲ್ಲಿ ಸಮ್ಮೇಳನ

News Desk Chitradurga News
Last updated: 4 April 2025 21:56
News Desk Chitradurga News
3 months ago
Share
ಸ್ವಾಮಿ ವಿವೇಕಾನಂದರ‌‌ ಚಿಂತನೆಗಳ ಪ್ರಸ್ತುತತೆ | ಕಾನೂನು ಕಾಲೇಜಿನಲ್ಲಿ ಸಮ್ಮೇಳನ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 05 APRIL 2025 

ಚಿತ್ರದುರ್ಗ: ಯುವಜನ ಸೇವಾ ಮತ್ತು ಕ್ರೀಡಾ ಸಬಲೀಕರಣ, ಎನ್.ಎಸ್.ಎಸ್. ವಿಭಾಗ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯ ಹುಬ್ಬಳ್ಳಿ ಇವರುಗಳ ಸಹಯೋಗದೊಂದಿಗೆ ಸರಸ್ವತಿ ಕಾನೂನು ಕಾಲೇಜಿನಲ್ಲಿ ವರ್ತಮಾನದ ಸನ್ನಿವೇಶದಲ್ಲಿ ಯುವಕರ ಬಗೆಗಿನ ಸ್ವಾಮಿ ವಿವೇಕಾನಂದರ ಚಿಂತನೆಗಳ ಪ್ರಸ್ತುತತೆ ಕುರಿತು ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಲಾಗಿದೆ.

Also Read: ಬೆಸ್ಕಾಂ ಎಇಇ ಸೇರಿ ಮೂರು ಜನರಿಗೆ ಜೈಲು ಶಿಕ್ಷೆ | ವಿದ್ಯುತ್‌ ತಗುಲಿ ಬಾಲಕ ಮೃತಪಟ್ಟಿದ್ದ ಪ್ರಕರಣ

ಸಮ್ಮೇಳನವನ್ನು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯದ ಉಪ ಕುಲಪತಿ ಪ್ರೊ.ಸಿ.ಬಸವರಾಜು ಮಾತನಾಡಿ, ಎಲ್ಲಾ ಧರ್ಮಗಳನ್ನು ಸಮಾನವಾಗಿ ಕಂಡಾಗ ಮಾನವೀಯ ಮೌಲ್ಯಗಳನ್ನು ಗೌರವಿಸಿದಂತಾಗುತ್ತದೆಂದು ಸ್ವಾಮಿ ವಿವೇಕಾನಂದ ವಿಶ್ವಕ್ಕೆ ಸಂದೇಶ ಸಾರಿದ್ದಾರೆ ಎಂದು ಹೇಳಿದರು.

ಅಮೇರಿಕಾದ ಚಿಕಾಗೋದಲ್ಲಿ 1893 ರಲ್ಲಿ ನಡೆದ ಧಾರ್ಮಿಕ ಸಂಸತ್ ಉದ್ದೇಶಿಸಿ ಮಾತನಾಡಿದ ಸ್ವಾಮಿ ವಿವೇಕಾನಂದರು ಹಿಂದೂ ಧರ್ಮ ಕೇವಲ ಭಾರತಕ್ಕಷ್ಟೆ ಅಲ್ಲ. ಇಡೀ ವಿಶ್ವಕ್ಕೆ ಬೇಕಾಗಿದೆಯೆಂದು ಭಾಷಣ ಮಾಡಿದ್ದರು.

ಸಾಮರಸ್ಯ, ಸಹಭಾಳ್ವೆ, ಐಕ್ಯತೆಯಿಂದ ಎಲ್ಲಾ ಜಾತಿ ಧರ್ಮದವರು ಬಾಳಬೇಕಾಗಿರುವುದರಿಂದ ಯಾವುದೆ ಒಂದು ಧರ್ಮವನ್ನು ಅವಮಾನಿಸಬಾರದು. ಎಲ್ಲಾ ಧರ್ಮಗಳಲ್ಲಿರುವ ಒಳ್ಳೆ ಅಂಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು.

Also Read: ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ | ಕೇಂದ್ರದ ವಿರುದ್ಧ ಮೌನ ಪ್ರತಿಭಟನೆ

ಪರಸ್ಪರರು ಅರ್ಥಮಾಡಿಕೊಂಡು ಸಹನೆಯಿಂದ ಬದುಕಿದಾಗ ಧರ್ಮ ಸಂಘರ್ಷಕ್ಕೆ ದಾರಿಯಿರುವುದಿಲ್ಲ. ಸೈದ್ದಾಂತಿಕ, ಧಾರ್ಮಿಕ ತಳಹದಿಯ ಮೇಲೆ ಸಮಾಜದಲ್ಲಿ ಶಾಂತಿ ಉಂಟು ಮಾಡಬಹುದೆನ್ನುವುದು ಸ್ವಾಮಿ ವಿವೇಕಾನಂದರವರ ಚಿಂತನೆಯಾಗಿತ್ತು ಎಂದರು.

ಇಂದಿನ ಯುವ ಜನಾಂಗಕ್ಕೆ ಸ್ವಾಮಿ ವಿವೇಕಾನಂದರವರ ಚಿಂತನೆ, ಆದರ್ಶ ಮುಖ್ಯ. ವಿಶ್ವದಲ್ಲಿಯೇ ಅಸಮಾನ್ಯ ಪುರುಷನಾಗಿದ್ದ ವಿವೇಕಾನಂದರವರ ಕೊಡುಗೆ ಅಪಾರ.

ವಿಜ್ಞಾನ, ತಂತ್ರಜ್ಞಾನ, ಸಂಸ್ಕøತಿ, ಧರ್ಮ, ಮಾನವೀಯತೆ ಹೀಗೆ ಎಲ್ಲಾ ರಂಗಗಳಲ್ಲಿಯೂ ಸ್ವಾಮಿ ವಿವೇಕಾನಂದರವರ ಚಿಂತನೆಗಳು ಅಡಗಿದೆ.

ಶಾಂತಿ, ಸಹೋದರತ್ವವನ್ನು ಹೇಗೆ ಹುಟ್ಟು ಹಾಕಬೇಕೆಂಬ ಕುರಿತು ಸದಾ ಆಲೋಚಿಸುತ್ತಿದ್ದ ಸ್ವಾಮಿ ವಿವೇಕಾನಂದರವರ ಮೌಲ್ಯಗಳು ಯುವ ಪೀಳಿಗೆಗೆ ದಾರಿ ದೀಪವಾಗಬೇಕು. ಧರ್ಮ ಎನ್ನುವುದು ಪುಸ್ತಕ, ಬರವಣಿಗೆಯಲ್ಲಿಲ್ಲ. ನಿಮ್ಮ ನಿಮ್ಮ ಅಂತರಾತ್ಮದಲ್ಲಿದೆ. ಸ್ವತಃ ಯೋಚನೆ, ವೈಯಕ್ತಿಕ ಶ್ರಮದಿಂದ ಜೀವನದಲ್ಲಿ ಸಾಧನೆ ಸಾಧ್ಯ ಎಂದು ತಿಳಿಸಿದರು.

Also Read: ರಾಜ್ಯ ಸರ್ಕಾರದ ಅಬಕಾರಿ ನೀತಿ ವಿರೋಧಿಸಿ ಮದ್ಯ ಮಾರಾಟಗಾರರ ಪ್ರತಿಭಟನೆ

ಮೌಲ್ಯ ವೃದ್ದಿಸಿಕೊಳ್ಳಲು ಅಂತರಂಗದ ಶಕ್ತಿಯನ್ನು ಬಳಸಿ. ನಿಸ್ವಾರ್ಥ ಸೇವೆಯಿಂದ ವ್ಯಕ್ತಿತ್ವ ಬೆಳೆಸಿಕೊಳ್ಳಬಹುದೆಂದು ಸ್ವಾಮಿ ವಿವೇಕಾನಂದರು ಕರೆ ನೀಡಿದ್ದಾರೆ. ಪ್ರತಿಯೊಂದು ಧರ್ಮದಲ್ಲೂ ಧಾರ್ಮಿಕ ಸತ್ವವಿದೆ. ಯಾವ ಕೆಲಸವನ್ನಾಗಲಿ, ಏಕಾಗ್ರತೆ, ಬದ್ದತೆಯಿಂದ ನಿಭಾಯಿಸಿದಾಗ ಗುರಿ ಮುಟ್ಟಲು ಸಾಧ್ಯ.

ಸಾಮಾಜಿಕ ಪಿಡುಗು ಅಸಮತೋಲನ ನಿವಾರಣೆಗೆ ಶಿಕ್ಷಣವೊಂದೆ ಅಸ್ತ್ರ ಎನ್ನುವ ಜಾಗೃತಿಯನ್ನು ಯುವ ಪೀಳಿಗೆಯಲ್ಲಿ ಮೂಡಿಸಿರುವ ಸ್ವಾಮಿ ವಿವೇಕಾನಂದರು ಸದೃಢ ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರ ಮುಖ್ಯ. ನಕಾರಾತ್ಮಕ ಆಲೋಚನೆಯಿಂದ ಹೊರ ಬರಲು ಧ್ಯಾನ ಮಾಡಿ. ಸಮಾಜ ಪರಿವರ್ತನೆಗೆ ವಿವೇಕಾನಂದರವರಲ್ಲಿದ್ದ ಚಿಂತನೆಯನ್ನು ನೀವುಗಳು ಮೈಗೂಡಿಸಿಕೊಂಡರೆ ನಿಜವಾಗಿಯೂ ವಿವೇಕಾನಂದ ಆಶಯಗಳನ್ನು ಗೌರವಿಸಿದಂತಾಗುತ್ತದೆಂದು ಕಾನೂನು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಸರಸ್ವತಿ ವಿದ್ಯಾಸಂಸ್ಥೆ ಕಾರ್ಯದರ್ಶಿ ಹಾಗೂ ನ್ಯಾಯವಾದಿ ಡಿ.ಕೆ.ಶೀಲಾ ಮಾತನಾಡಿ ಸ್ವಾಮಿ ವಿವೇಕಾನಂದರು ಯುವ ಜನಾಂಗದ ಮೇಲೆ ಅಪಾರವಾದ ಭರವಸೆಯಿಟ್ಟುಕೊಂಡಿದ್ದರು. ಭಾರತದ ಭವಿಷ್ಯ ನಿಂತಿರುವುದೇ ಯುವ ಪೀಳಿಗೆ ಮೇಲೆ ಹಾಗಾಗಿ ವಿವೇಕಾನಂದರು ಯುವಕ-ಯುವತಿಯರ ಮೇಲೆ ಬೆಳಕು ಚೆಲ್ಲುತ್ತಿದ್ದರು. ಯಾವುದೇ ವೃತ್ತಿಯಾಗಲಿ ಶಿಸ್ತು, ಬದ್ದತೆ, ಏಕಾಗ್ರತೆಯಿಂದ ಮಾಡಬೇಕೆನ್ನುವುದು ಅವರ ಚಿಂತನೆಯಾಗಿತ್ತೆಂದರು.

ರಾಷ್ಟ್ರೀಯ ಸಮ್ಮೇಳದ ಅಧ್ಯಕ್ಷತೆ ವಹಿಸಿದ್ದ ಸರಸ್ವತಿ ಕಾನೂನು ಕಾಲೇಜು ಅಧ್ಯಕ್ಷರಾದ ಹೆಚ್.ಹನುಮಂತಪ್ಪ, ಸರಸ್ವತಿ ಕಾನೂನು ಕಾಲೇಜು ಪ್ರಾಚಾರ್ಯರಾದ ಡಾ.ಎಂ.ಎಸ್.ಸುಧಾದೇವಿ ಮಾತನಾಡಿದರು.

Also Read: ಅಧಿಕಾರಿ,‌ ಸಿಬ್ಬಂದಿ | ನಾಳೆ ಕಡ್ಡಾಯ ಹಾಜರಾತಿಗೆ ಡಿಸಿ ಸೂಚನೆ

ಸರಸ್ವತಿ ಕಾನೂನು ಕಾಲೇಜು ಉಪಾಧ್ಯಕ್ಷರು ಹಾಗೂ ನ್ಯಾಯವಾದಿ ಫಾತ್ಯರಾಜನ್, ಎನ್.ಎಸ್.ಎಸ್.ಕೋ-ಆರ್ಡಿನೇಟರ್ ಐ.ಬಿ.ಬೀರಾದರ್, ಆರ್ಥಿಕ ಚಿಂತಕ ಡಾ.ಎನ್.ಮಲ್ಲಿಕಾರ್ಜುನಪ್ಪ ಉಪಸ್ಥಿತರಿದ್ದರು.

ಸಹಾಯಕ ಪ್ರಾಧ್ಯಾಪಕ ಡಾ.ಡಿ.ಬಿ.ರವಿಕುಮಾರ್ ರಾಷ್ಟ್ರೀಯ ಪ್ರತಿಜ್ಞೆ ಬೋಧಿಸಿದರು. ಸಹಾಯಕ ಪ್ರಾಧ್ಯಾಪಕ ಡಾ.ಎನ್.ಡಿ.ಗೌಡ ಸ್ವಾಗತಿಸಿದರು. ದೈಹಿಕ ಶಿಕ್ಷಕ ಪಿ.ಮುರುಗೇಶ್ ನಿರೂಪಿಸಿದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga newsChitradurga UpdatesConferenceKannada Latest NewsKannada NewsSaraswati Law CollegeSwami VivekanandaThoughtsಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿಂತನೆಚಿತ್ರದುರ್ಗಚಿತ್ರದುರ್ಗ ನ್ಯೂಸ್ಸಮ್ಮೇಳನಸರಸ್ವತಿ ಕಾನೂನು ಕಾಲೇಜುಸ್ವಾಮಿ ವಿವೇಕಾನಂದ
Share This Article
Facebook Email Print
Previous Article today bhavishya Astrology: ದಿನ ಭವಿಷ್ಯ | ಏಪ್ರಿಲ್ 05 | ಹಠಾತ್ ಆರ್ಥಿಕ ಲಾಭ, ಉದ್ಯೋಗದಲ್ಲಿ ಬಡ್ತಿ, ದೂರದ ಪ್ರಯಾಣ
Next Article ಮರದ ದಿಮ್ಮಿ ಕಳ್ಳತನ ಯತ್ನ | ಗಿಡ ನೆಟ್ಟು ಬೆಳೆಸುವ ಶಿಕ್ಷೆ ವಿಧಿಸಿದ ನ್ಯಾಯಾಲಯ
Leave a Comment

Leave a Reply Cancel reply

Your email address will not be published. Required fields are marked *

today bhavishya
Astrology: ದಿನ ಭವಿಷ್ಯ | ಜೂನ್ 22 | ವ್ಯವಹಾರದಲ್ಲಿ ಅನಿರೀಕ್ಷಿತ ಅಡೆತಡೆಗಳು, ಆರೋಗ್ಯ ಸಮಸ್ಯೆ, ಹೊಸ ವಾಹನ ಖರೀದಿ
Dina Bhavishya
ಯೋಗಶಾಸ್ತ್ರದ ನಿರಂತರ ಅನುಷ್ಠಾನದಿಂದ ಜೀವನೋತ್ಸಾಹ | ಇಮ್ಮಡಿ ಸಿದ್ದರಾಮೇಶ್ವರ ಶ್ರೀ
ಮುಖ್ಯ ಸುದ್ದಿ
ಮಾಹಿತಿ ಹಕ್ಕು ಕಾಯ್ದೆ | ಶುಲ್ಕ ಪರಿಷ್ಕರಣೆಗೆ ಪ್ರಸ್ತಾವನೆ | ಆಯುಕ್ತ ರುದ್ರಣ್ಣ ಹರ್ತಿಕೋಟೆ
ಮುಖ್ಯ ಸುದ್ದಿ
ಅರ್ಜಿ ಅಹ್ವಾನ
ಜೂನ್ 30ರವರೆಗೆ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಅವಕಾಶ
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up