
CHITRADURGA NEWS | 25 JULY 2024
ಚಿತ್ರದುರ್ಗ: ‘ನಟ ದರ್ಶನ್ ನಮ್ಮ ಮನೆಗೆ ಬರುವ ವಿಚಾರ ಗೊತ್ತಿಲ್ಲ, ಅಂತೆ ಕಂಥೆ ಎಲ್ಲಾ ಬೇಡ. ಒಂದು ವೇಳೆ ಬಂದರೂ ಕೂಡ ನಾವು ದ್ವೇಷ ಮಾಡೋದಿಲ್ಲ. ಬನ್ನಿ ಊಟ ಮಾಡಿ, ಕೂತುಕೊಳ್ಳಿ ಎನ್ನುತ್ತೇವೆ’…ಇದು ದರ್ಶನ್ ಗ್ಯಾಂಗ್ನಿಂದ ಹತ್ಯೆಯಾದ ರೇಣುಕಾಸ್ವಾಮಿ (Renukaswamy murder case) ಅವರ ತಂದೆ ಶಿವನಗೌಡ್ರು ಮಾತು.
ಚಿತ್ರದುರ್ಗದ ನಿವಾಸದಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಅವರು, ‘ನಾವು ಯಾರ ಬಗ್ಗೆಯೂ ಮಾತನಾಡುವುದಿಲ್ಲ. ಎಲ್ಲರ ಬಗ್ಗೆ ಒಳ್ಳೆಯ ಭಾವನೆ ಇದೆ. ಕಾನೂನು ಪ್ರಕಾರ ಏನೂ ನಡೆಯುತ್ತದೆಯೋ ಅದು ನಡೆಯಲಿ’ ಎಂದರು.

‘ನಾವು ಜಂಗಮರು ಯಾರನ್ನೂ ನಾವು ದ್ವೇಷ ಅಸೂಯೆ ಪಡುವವರಲ್ಲ. ದರ್ಶನ್ ನಮ್ಮ ಮನೆಗೆ ಬರುವುದಾದರೆ ಬರಲಿ, ಯಾರನ್ನು ಬೇಡ ಅನ್ನುವುದಿಲ್ಲ. ನಾವು ಯಾರ ಜೊತೆಯೂ ಶತೃತ್ವ ಬಯಸುವುದಿಲ್ಲ. ಒಳ್ಳೆಯ ರೀತಿಯಲ್ಲಿ ಗೌರವಿಸುತ್ತೇವೆ. ಎಲ್ಲರಿಗೂ ಗೌರವ ಕೊಡುತ್ತೇವೆ, ಪ್ರೀತಿ ವಿಶ್ವಾಸದಿಂದ ಇರುತ್ತೇವೆ’ ಎಂದು ತಿಳಿಸಿದರು.

ಇದನ್ನೂ ಓದಿ: ಫಲಕಾರಿಯಾಗದ ಚಿಕಿತ್ಸೆ | ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ನಿಧನ

‘ಆರ್ಥಿಕ ಸಹಾಯದ ಅಂತೆ ಕಂತೆ ವಿಚಾರ ಸದ್ಯಕ್ಕೆ ಬೇಡ. ಅವತ್ತಿನ ಪರಿಸ್ಥಿತಿ ನೋಡೋಣಾ. ದರ್ಶನ್ ಪತ್ನಿ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ವಿಚಾರ ನಮಗ್ಯಾಕೆ. ಸರ್ಕಾರ ಪ್ರಕರಣ ನಡೆಸುತ್ತಿದೆ. ಮಂತ್ರಿಗಳು ಅವರ ಕರ್ತವ್ಯ ಅವರು ಮಾಡುತ್ತಾರೆ’ ಎಂದರು.
ಇದನ್ನೂ ಓದಿ: ಮಾಜಿ ಶಾಸಕ ಎಸ್.ಕೆ.ಬಸವರಾಜನ್ ವಿರುದ್ಧದ ಪ್ರಕರಣ ರದ್ದು
ಕೊಲೆ ಆರೋಪದಲ್ಲಿ 21 ವರ್ಷ ಶಿಕ್ಷೆ ಪೂರ್ಣಗೊಳಿಸಿ ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾದ ತುರವನೂರಿನ ಸಿದ್ದಾರೂಢ ಜೈಲಿನಿಂದ ಹೊರ ಬರುವ ಒಂದು ದಿನ ಮುನ್ನ ದರ್ಶನ್ ಭೇಟಿ ಯಾಗಿದ್ದಾರೆ. ಈ ವೇಳೆ ‘ರೇಣುಕಾಸ್ವಾಮಿ ಮನೆಗೆ ಭೇಟಿ ನೀಡಿ ಕ್ಷಮೆ ಕೋರುತ್ತೇನೆ’ ಎಂದು ದರ್ಶನ್ ಹೇಳಿದ್ದರು ಎಂದು ಸಿದ್ದರೂಢ ಮಾಧ್ಯಮಗಳಿಗೆ ತಿಳಿಸಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
