CHITRADURGA NEWS | 25 JULY 2024
ಚಿತ್ರದುರ್ಗ: ಜೀವನ ನಿರ್ವಹಣೆ ಬಹಳ ಕಷ್ಟ ಆಗಿದೆ. ಅನುಕಂಪದ ಆಧಾರದಲ್ಲಿ ಸರ್ಕಾರಿ ಕೆಲಸ ನೀಡಿ ಎಂದು ದರ್ಶನ ಗ್ಯಾಂಗ್ನಿಂದ ಹತ್ಯೆಯಾದ ರೇಣುಕಾಸ್ವಾಮಿ ಪತ್ನಿ ಜಿ.ಎಸ್.ಸಹನಾ ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ.
ಗುರುವಾರ ಜಿಲ್ಲಾಧಿಕಾರಿ ವೆಂಕಟೇಶ್ ಅವರನ್ನು ಭೇಟಿ ಮಾಡಿ, ಮನೆಯಲ್ಲಿ ವಯಸ್ಸಾದ ಅತ್ತೆ, ಮಾವ ಹಾಗು ಮಾವನ ತಾಯಿ ಇದ್ದಾರೆ. ಘಟನೆಯಿಂದ ಇಡೀ ಕುಟುಂಬ ಮಾನಸಿಕವಾಗಿ ಕುಗ್ಗಿದೆ. ನಾನು ಆರು ತಿಂಗಳ ಗರ್ಭಿಣಿಯಾಗಿದ್ದು ಜೀವನ ಬಹಳ ಸಂಕಷ್ಟಕ್ಕೆ ಸಿಲುಕಿದೆ.
ಇದನ್ನೂ ಓದಿ: ಮಾಜಿ ಶಾಸಕ ಎಸ್.ಕೆ.ಬಸವರಾಜನ್ ವಿರುದ್ಧದ ಪ್ರಕರಣ ರದ್ದು
ನನ್ನ ಪತಿ ದುಡಿಮೆ ಮೇಲೆ ಕುಟುಂಬ ನಡೆಯುತ್ತಿತ್ತು. ಆದರೆ ಇದೀಗ ಸಮಸ್ಯೆ ತೀವ್ರವಾಗಿದೆ. ನಾನು ದ್ವಿತೀಯ ಪಿಯುಸಿ ಉತ್ತೀರ್ಣವಾಗಿದ್ದು, ನನ್ನ ವಿದ್ಯಾರ್ಹತೆಗೆ ತಕ್ಕಂತೆ ಕಾಯಂ ಸರ್ಕಾರಿ ಕೆಲಸ ನೀಡಿ. ಈ ಮೂಲಕ ಸಮಾಜದಲ್ಲಿ ಗೌರವಯುತ ಬದುಕು ನಡೆಸಲು ಅವಕಾಶ ಮಾಡಿ ಎಂದು ಮನವಿ ಮಾಡಿದ್ದಾರೆ.
‘ಜೀವನ ನಿರ್ವಹಣೆ ಕಷ್ಟ ಆಗುತ್ತದೆ, ಅನುಕಂಪದ ಆಧಾರದಲ್ಲಿ ಕೆಲಸ ನೀಡುವಂತೆ ಕೇಳಿದ್ದಾರೆ. ಸರ್ಕಾರದಿಂದ ಈ ಮನವಿಯ ತೀರ್ಮಾನ ಮಾಡಬೇಕಿದೆ. ಇವರ ಮನವಿ ಸರ್ಕಾರಕ್ಕೆ ಕಳುಹಿಸಿ ಕೊಡುತ್ತಿದ್ದೇನೆ. ಯಾವುದೇ ಇಲಾಖೆಯಂತ ಕೇಳಿಲ್ಲ, ಕಾಯಂ ಸರ್ಕಾರಿ ನೌಕರಿ ಎಂದು ಮನವಿ ಮಾಡಿದ್ದಾರೆ’ ಎಂದು ಜಿಲ್ಲಾಧಿಕಾರಿ ವೆಂಕಟೇಶ್ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number