
CHITRADURGA NEWS | 18 DECEMBER 2025
ಚಿತ್ರದುರ್ಗ: ಚಿತ್ರದುರ್ಗ ನಗರದ ವಿಆರ್ಎಸ್ ಬಡಾವಣೆ ನಿವಾರಿ ರೇಣುಕಾಸ್ವಾಮಿ ಕೊಲೆ ಪ್ರಕರಣ ಭಾರೀ ಸದ್ದು ಮಾಡಿತ್ತು. ಈ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಪವಿತ್ರಗೌಡ ಸೇರಿದಂತೆ ಹಲವರು ನ್ಯಾಯಾಂಗ ಬಂಧನದಲ್ಲಿದ್ದಾರೆ.
ಈಗ ಈ ಕೊಲೆ ಪ್ರಕರಣದ ವಿಚಾರಣೆಯನ್ನು ಬೆಂಗಳೂರಿನ 57ನೇ ಸೆಷನ್ಸ್ ಕೋರ್ಟ್ನಲ್ಲಿ ಕೈಗೆತ್ತಿಕೊಂಡಿದ್ದು, ಬುಧವಾರ 7ನೇ ಸಾಕ್ಷಿಯಾಗಿ ರೇಣುಕಾಸ್ವಾಮಿ ತಾಯಿ ರತ್ನಪ್ರಭ ಹಾಗೂ 8ನೇ ಸಾಕ್ಷಿಯಾಗಿ ರೇಣುಕಾಸ್ವಾಮಿ ತಂದೆ ಕಾಶಿನಾಥ ಶಿವನಗೌಡರು ಹೇಳಿಕೆ ದಾಖಲಿಸಿದರು.

ಇದನ್ನೂ ಓದಿ: ಉದ್ಯೋಗಿನಿ, ಚೇತನ, ಧನಶ್ರೀ ಇನ್ನಿತರ ಯೋಜನೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಸರ್ಕಾರದ ಪರವಾಗಿ ಎಸ್ಪಿಪಿ ಪ್ರಸನ್ನಕುಮಾರ್ ತಂದೆ ತಾಯಿ ಹೇಳಿಕೆಯನ್ನು ನ್ಯಾಯಾಲಯದ ಮುಂದೆ ದಾಖಲಿಸಿದರು.
ರೇಣುಕಾಸ್ವಾಮಿ ತಾಯಿ ರತ್ನಪ್ರಭ ತಮ್ಮ ಹೇಳಿಕೆಯಲ್ಲಿ, 2024 ಜೂನ್ 8 ರಂದು ಪುತ್ರ ರೇಣುಕಾಸ್ವಾಮಿ ಬೆಳಗ್ಗೆ ಫಾರ್ಮಸಿ ಕಂಪನಿ ಕೆಲಸಕ್ಕೆ ಹೋಗಿದ್ದ. ಮಧ್ಯಾಹ್ನ ಫೋನ್ ಮಾಡಿ ಸ್ನೇಹಿತರ ಜೊತೆ ಊಟಕ್ಕೆ ಹೋಗುತ್ತಿದ್ದೇನೆ. ಬರುವುದು ತಡವಾಗುತ್ತದೆ ಎಂದು ತಿಳಿಸಿದ್ದಾನೆ. ಆದರೆ, ಸಂಜೆ 7 ಗಂಟೆಯಾದರೂ ಮನೆಗೆ ಬರಲಿಲ್ಲ. ಫೋನ್ ಮಾಡಿದಾಗ ಸ್ವಿಚ್ಡ್ ಆಫ್ ಆಗಿತ್ತು.
ಇದನ್ನೂ ಓದಿ: ದಿನ ಭವಿಷ್ಯ | ಡಿಸೆಂಬರ್ 18 | ಉದ್ಯೋಗಿಗಳಿಗೆ ಶುಭ ಸುದ್ದಿ, ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ದೂರದ ಪ್ರಯಾಣ ಬೇಡ
ನಂತರ ನಾವು ಎಲ್ಲಾ ಕಡೆ ಹುಡುಕಾಟ ಮಾಡಿದ್ದು, ಎಲ್ಲಿಯೂ ಸಿಗಲಿಲ್ಲ. ಜೂನ್ 10 ರಂದು ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸರು ಫೋನ್ ಮಾಡಿ, ನಿಮ್ಮಮಗನ ವಿಚಾರವಾಗಿ ನೀವು ಬೆಂಗಳೂರಿಗೆ ಬರಬೇಕಾಗುತ್ತದೆ ಎಂದು ತಿಳಿಸಿದರು.
ಮರುದಿನ ಅಂದರೆ ಜೂನ್ 11 ರಂದು ಬೆಳಗ್ಗೆ ಬೆಂಗಳೂರಿಗೆ ಹೋದಾಗ ಆಸ್ಪತ್ರೆಗೆ ಕರೆದೊಯ್ದು ಮಗನ ಮೃತದೇಹ ತೋರಿಸಿದರು. ನಟ ದರ್ಶನ್ ಹಾಗೂ ಅವರ ತಂಡ ಹಲ್ಲೆ ನಡೆಸಿ ಹತ್ಯೆ ಮಾಡಿದೆ ಎಂದು ತಿಳಿಸಿದರು ಎಂದು ನ್ಯಾಯಾಲಯದ ಮುಂದೆ ಹೇಳಿದರು.
ಇದನ್ನೂ ಓದಿ: ಮೀನು ಸಾಕಾಣೆಗೆ ಮತ್ಸ್ಯ ಸಂಪದ ಯೋಜನೆಗೆ ಅರ್ಜಿ ಆಹ್ವಾನ
ಮಗನ ದೇಹದ ತುಂಬಾ ಸಾಕಷ್ಟು ಗಾಯಗಳಾಗಿದ್ದವು. ಅಲ್ಲಲ್ಲಿ ಸುಟ್ಟ ಗಾಯಗಳಾಗಿದ್ದವು. ಇನ್ನೂ ಮಗನ ಮೈಮೇಲೆ ಇದ್ದ ಆಭರಣಗಳನ್ನು ಆರೋಪಿ ರಾಘವೇಂದ್ರ ಕದ್ದಿದ್ದು, ಸಿಕ್ಕಿವೆ ಅವನ್ನು ಗುರುತಿಸಿ ಎಂದು ತಂದಿದ್ದರು. ಉಂಗುರದಲ್ಲಿ ಆರ್ಎಸ್ (ರೇಣುಕಾಸ್ವಾಮಿ – ಸಹನಾ) ಎಂದಿತ್ತು ಎಂದು ವಿವರಿಸಿದರು.
ಪ್ರಸನ್ನಕುಮಾರ್ ವಿಚಾರಣೆ ಬಳಿಕೆ ಪವಿತ್ರಾಗೌಡ ಪರ ವಕೀಲ ಬಾಲನ್, ರೇಣುಕಾಸ್ವಾಮಿ ತಂದೆ ಕಾಶಿನಾಥ್ ಶಿವನಗೌಡರ್ ಹಾಗೂ ತಾಯಿ ರತ್ನಪ್ರಭ ಬಳಿ ಹಲವು ಪ್ರಶ್ನೆಗಳನ್ನು ಕೇಳಿದರು.
ಇದನ್ನೂ ಓದಿ: ಅಡಿಕೆ ಧಾರಣೆ | 17 ಡಿಸೆಂಬರ್ | ಯಾವ ಅಡಿಕೆಗೆ ಎಷ್ಟು ರೇಟ್
ಈ ವೇಳೆ ಪ್ರಕರಣದ ಪ್ರಮುಖ ಆರೋಪಿಗಳಾದ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ೭ ಮಂದಿ ಆರೋಪಿಗಳು ಜೈಲಿನಿಂದಲೇ ವೀಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದರು. ಪ್ರಕರಣದ ಮುಂದುವರೆದ ವಿಚಾರಣೆ ಡಿಸೆಂಬರ್ 18 ಗುರುವಾರ ಮಧ್ಯಾಹ್ನ(ಇಂದು)ಕ್ಕೆ ಮುಂದೂಡಲಾಯಿತು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
