CHITRADURGA NEWS | 11 JUNE 2024
ಚಿತ್ರದುರ್ಗ: ಚಿತ್ರದುರ್ಗ ಮೂಲದ ವ್ಯಕ್ತಿಯ ಕೊಲೆ ಪ್ರಕರಣದಲ್ಲಿ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧನವಾಗಿರುವ ಸ್ಪೋಟಕ ಸುದ್ದಿ ಹೊರಬಿದ್ದಿದೆ.
ಚಿತ್ರದುರ್ಗದ ತುರುವನೂರು ರಸ್ತೆಯ ಶ್ರೀ ವೆಂಕಟರಮಣ ಸ್ವಾಮಿ ದೇವಸ್ಥಾನದ ಬಳಿ ಮನೆಯಿರುವ ರೇಣುಕಾಸ್ವಾಮಿ ಎನ್ನುವ ವ್ಯಕ್ತಿಯ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧಿಸಲಾಗಿದೆ.
ಇದನ್ನೂ ಓದಿ: ಐಟಿಐ, ಪಿಯುಸಿ ಪಾಸಾದ ವಿದ್ಯಾರ್ಥಿಗಳಿಂದ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ
ಕಳೆದ ಭಾನುವಾರ ಜೂನ್ 9 ರಂದು ರೇಣುಕಾಸ್ವಾಮಿ ಕೊಲೆ ನಂತರ ಕಾಮಾಕ್ಷಿಪಾಳ್ಯದ ಮೋರಿಗೆ ಎಸೆಯಲಾಗಿತ್ತು. ನಾಯಿಗಳು ಶವ ಎಳೆದಾಡುತ್ತಿದ್ದಾಗ ಕೊಲೆ ಪ್ರಕರಣ ಬಯಲಿಗೆ ಬಂದಿತ್ತು, ಈ ಪ್ರಕರಣದಲ್ಲಿ ಇಬ್ಬರನ್ನು ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದರು.
ಬಂಧಿತರು ನಟ ದರ್ಶನ್ ಹೆಸರು ಬಾಯಿಬಿಟ್ಟಿರುವ ಹಿನ್ನೆಲೆಯಲ್ಲಿ ದರ್ಶನ್ ಸೇರಿದಂತೆ ಹತ್ತು ಜನರನ್ನು ಬಂಧಿಸಿರುವ ಸುದ್ದಿಗಳು ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿವೆ.
ಇದನ್ನೂ ಓದಿ: ಪೊಲೀಸ್ ತನಿಖೆಗೆ ಕೈ ಜೋಡಿಸುತ್ತಿದ್ದ ಅಗಸ್ತ್ಯ ಇನ್ನಿಲ್ಲ
ರೇಣುಕಾಸ್ವಾಮಿ ಅಪೊಲೊ ಫಾರ್ಮಸಿ ಮೆಡಿಕಲ್ ಸ್ಟೋರ್ನಲ್ಲಿ ಕೆಲಸ ಮಾಡುತ್ತಿದ್ದರು. ಬೆಸ್ಕಾಂ ಇಲಾಖೆಯ ನಿವೃತ್ತ ಆಡಿಟರ್ ಶಿವನಗೌಡ ಹಾಗೂ ರತ್ನಪ್ರಭ ಎನ್ನುವವರ ಪುತ್ರ.
ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
ದೇಹದ ಮೇಲಿನ ಗಾಯಗಳನ್ನು ಆಧರಿಸಿ ಕಾಮಾಕ್ಷಿಪಾಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು. ಸಿ.ಸಿ. ಕ್ಯಾಮರಾ ಮತ್ತಿತರೆ ತಾಂತ್ರಿಕ ಸಾಕ್ಷ್ಯಗಳ ಮೇಲೆ ರೇಣುಕಾಸ್ವಾಮಿ ಗುರುತು ಪತ್ತೆ ಮಾಡಲಾಗಿತ್ತು.
ಇದನ್ನೂ ಓದಿ: ಜೆಇಇ ಫಲಿತಾಂಶ | ರಾಷ್ಟ್ರಮಟ್ಟದಲ್ಲಿ ಚಿತ್ರದುರ್ಗದ SRS ಪಿಯು ವಿದ್ಯಾರ್ಥಿಗಳ ಸಾಧನೆ
ರೇಣುಕಾಸ್ವಾಮಿ ನಟ ದರ್ಶನ್ ಅವರ ಪತ್ನಿಗೆ ಅಶ್ಲೀಲ ಮೆಸೇಜ್ ಕಳಿಸುತ್ತಿದ್ದ ಕಾರಣಕ್ಕೆ ಕೊಲೆಯಾಗಿದೆ ಎಂದು ಪೊಲೀಸ್ ಆಯುಕ್ತ ದಯಾನಂದ್ ತಿಳಿಸಿದ್ದಾರೆ.
ಈ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಹತ್ತು ಜನರನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
