By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ವಾಣಿವಿಲಾಸ ಸಾಗರ ಜಲಾಶಯ
    ವಿವಿ ಸಾಗರದ ಬಳಿ ಧರಣಿ ಸತ್ಯಾಗ್ರಹ | ಲಕ್ಷ್ಮಣ ಹೂಗಾರ್‌
    2 hours ago
    ಟಿ. ರಘುಮೂರ್ತಿ
    ಕೇಂದ್ರದ ಮಾನದಂಡಗಳ ಅನ್ವಯ ಬರ ಘೋಷಣೆ | ಉಳಿದ ತಾಲೂಕು ಸೇರ್ಪಡೆ ಸಾಧ್ಯತೆಯೂ ಇದೆ | ಟಿ.ರಘುಮೂರ್ತಿ
    8 hours ago
    ಭಾರತೀಯ ವಿಜ್ಞಾನ ಸಂಸ್ಥೆ
    ಎಸ್‌ಸಿ, ಎಸ್‌ಟಿ ಯುವಜನರಿಗೆ ಒಣಭೂಮಿ ಆಹಾರ ಉದ್ಯಮಗಳ ಕುರಿತು 3 ದಿನಗಳ ತರಬೇತಿ
    13 hours ago
    ಶ್ರೀ ಕೃಷ್ಣ ಜಯಂತಿ ಆಚರಣೆ ಸಂಬಂಧ ಪೂರ್ವಭಾವಿ ಸಭೆ
    ಸೆಪ್ಟೆಂಬರ್ 04ರಂದು ಶ್ರೀ ಕೃಷ್ಣ ಜಯಂತಿ | ಅರ್ಥಪೂರ್ಣ, ಶ್ರದ್ಧಾಭಕ್ತಿಯಿಂದ ಜಯಂತಿ ಆಚರಣೆ
    13 hours ago
    ಹುಣಸೇಕಟ್ಟೆ ಗ್ರಾಮದ ಸೇವಂತಿಗೆ ಜಮೀನುಗಳಿಗೆ ತೋಟಗಾರಿಕೆ ಅಧಿಕಾರಿಗಳ ತಂಡ ಭೇಟಿ ನೀಡಿ
    ಹುಣಸೇಕಟ್ಟೆಯಲ್ಲಿ ಸೇವಂತಿಗೆ ಬೆಳೆಗೆ ಫ್ಯೂಜೇರಿಯಂ ವಿಲ್ಟ್ ರೋಗ | ರೈತರಿಗೆ ತೋಟಗಾರಿಕೆ ಇಲಾಖೆ ತಾಂತ್ರಿಕ ಸಲಹೆ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 week ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    5 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 28 | ವೃತ್ತಿಪರ ವ್ಯವಹಾರದಲ್ಲಿ ಲಾಭ, ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ
    13 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 27 | ಹಠಾತ್ ಆರ್ಥಿಕ ಲಾಭದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 26 | ಶುಭ ಸುದ್ದಿ, ಕೈಗೊಂಡ ಕಾರ್ಯಗಳು ಯಶಸ್ವಿ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 25 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
    today bhavishya
    ದಿನ ಭವಿಷ್ಯ | ಆಗಸ್ಟ್ 24 | ಅನಿರೀಕ್ಷಿತ ಸಮಸ್ಯೆಗಳು, ಉದ್ಯೋಗದಲ್ಲಿ ಬಡ್ತಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಆಗಸ್ಟ್ 28 | ರಾಗಿ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
    6 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 27 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಆಗಸ್ಟ್ 24 | ಮೆಕ್ಕೆಜೋಳ, ಶೇಂಗಾ ರೇಟ್…..
    4 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 20 | ಹತ್ತಿ ರೇಟ್ ಎಷ್ಟಿದೆ?
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಆಗಸ್ಟ್ 19 | ಮೆಕ್ಕೆಜೋಳ, ಶೇಂಗಾ ರೇಟ್…..
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    3 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    5 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    Omkaalu (Carom seed snack)
    ಓಂಕಾಳನ್ನು ಬಳಸಿ ಹೊಟ್ಟೆಯ ಕೊಬ್ಬನ್ನು ಕಳೆದುಕೊಳ್ಳುವುದು ಹೇಗೆ? ತಿಳಿಯಿರಿ
    12 hours ago
    garlic with mustard oil
    ಬೆಳ್ಳುಳ್ಳಿಯನ್ನು ಸಾಸಿವೆ ಎಣ್ಣೆಯೊಂದಿಗೆ ಬೆರೆಸಿ ಕೂದಲಿಗೆ ಹಚ್ಚಿದರೆ ಏನಾಗುತ್ತದೆ? ತಿಳಿಯಿರಿ 
    13 hours ago
    Dark circles
    ಡಾರ್ಕ್ ಸರ್ಕಲ್‍ಗೆ ಆಲೂಗಡ್ಡೆ ಅಥವಾ ಸೌತೆಕಾಯಿಯಲ್ಲಿ ಯಾವುದು ಉತ್ತಮ? ತಿಳಿಯಿರಿ
    1 day ago
    Rahu Dosha
    ಜಾತಕದಲ್ಲಿ ರಾಹು ದೋಷವಿರುವವರು ಈ ಶುಭ ಬಣ್ಣಗಳನ್ನು ಬಳಸಿದರೆ ದೋಷಗಳು ದೂರವಾಗುತ್ತವೆಯಂತೆ
    2 days ago
    Pomegranate
    ಈ ಐದು ಜನರು ದಾಳಿಂಬೆ ತಿನ್ನುವುದು ಹಾನಿಕಾರಕವಂತೆ
    2 days ago
Reading: ಸಂಶೋಧನೆ, ವಿಮರ್ಶೆ ಪೂರ್ವಗ್ರಹರಹಿತವಾಗಿರಲಿ | ಚಿಂತಕ ಪ್ರೊ.ಬರಗೂರು ರಾಮಚಂದ್ರಪ್ಪ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಸಂಶೋಧನೆ, ವಿಮರ್ಶೆ ಪೂರ್ವಗ್ರಹರಹಿತವಾಗಿರಲಿ | ಚಿಂತಕ ಪ್ರೊ.ಬರಗೂರು ರಾಮಚಂದ್ರಪ್ಪ

News Desk Chitradurga News
Last updated: 6 July 2024 17:56
News Desk Chitradurga News
2 years ago
Share
barguru 1
ಚಿತ್ರದುರ್ಗ ತಾಲ್ಲೂಕಿನ ಜಿ.ಆರ್‌.ಹಳ್ಳಿ ಜ್ಞಾನಗಂಗೋತ್ರಿ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಚಿಂತಕ ಪ್ರೊ.ಬರಗೂರು ರಾಮಚಂದ್ರಪ್ಪ ಉದ್ಘಾಟಿಸಿದರು.
SHARE

CHITRADURGA NEWS | 06 JULY 2024
ಚಿತ್ರದುರ್ಗ: ಸಂಶೋಧನೆ, ವಿಮರ್ಶೆ, ಓದು ಪೂರ್ವಗ್ರಹ ಹಾಗೂ ಪಕ್ಷಪಾತ ರಹಿತವಾಗಿರಬೇಕು ಎಂದು ಚಿಂತಕ ಪ್ರೊ.ಬರಗೂರು ರಾಮಚಂದ್ರಪ್ಪ ಹೇಳಿದರು.

ತಾಲ್ಲೂಕಿನ ಜಿ.ಆರ್‌.ಹಳ್ಳಿ ಜ್ಞಾನಗಂಗೋತ್ರಿ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಶನಿವಾರ ದಾವಣಗೆರೆ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಹಾಗೂ ಜ್ಞಾನ ಗಂಗೋತ್ರಿ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಕನ್ನಡ ಅಧ್ಯಯನ ವಿಭಾಗದ ವತಿಯಿಂದ ಕನ್ನಡ ಸಾಹಿತ್ಯ ಸಂಶೋಧನೆಯ ಹೊಸ ಸಾಧ್ಯತೆಗಳು ವಿಷಯ ಕುರಿತು ಆಯೋಜಿಸಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

‘ಸಂಶೋಧನೆ, ವಿಮರ್ಶೆ ಮಾಡುವವರಿಗೆ ಜಾತಿ, ಧರ್ಮ, ಪಕ್ಷ, ಪಂಥ ಇವೆಲ್ಲವನ್ನೂ ಮೀರಿದ ಮನಸ್ಥಿತಿ ಇರಬೇಕು. ಈ ಸೂಕ್ಷ್ಮವನ್ನು ಸಾಧಿಸುವವನೇ ಸಂಶೋಧನೆ ಹಾಗೂ ವಿಮರ್ಶೆಯ ಹೊಸ ಸಾಧ್ಯತೆಗಳನ್ನು ಹುಡುಕಲು ಸಾಧ್ಯ’ ಎಂದು ತಿಳಿಸಿದರು.

baraguru 3
ಚಿತ್ರದುರ್ಗ ತಾಲ್ಲೂಕಿನ ಜಿ.ಆರ್‌.ಹಳ್ಳಿ ಜ್ಞಾನಗಂಗೋತ್ರಿ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಚಿಂತಕ ಪ್ರೊ.ಬರಗೂರು ರಾಮಚಂದ್ರಪ್ಪ ಮಾತನಾಡಿದರು.

‘ಕಂಡುಕೊಳ್ಳುವ ಕ್ರಿಯೆ ಎಷ್ಟರ ಮಟ್ಟಿಗೆ ಜಾಗೃತವಾಗಿರುತ್ತದೆಯೋ ಅಷ್ಟರ ಮಟ್ಟಿಗೆ ಸಂಶೋಧನೆ, ವಿಮರ್ಶೆಯ ಸಾಧ್ಯತೆಗಳು ಹೆಚ್ಚಾಗುತ್ತಾ ಹೋಗುತ್ತದೆ. ಹಾಗಾಗಿ ನಾವು ಕೊಂಡುಕೊಳ್ಳುವುದಕ್ಕೆ ಮಾತ್ರ ಮೀಸಲಾಗದೇ ಕಂಡುಕೊಳ್ಳುವ ಮನುಷ್ಯರಾಗೋಣ’ ಎಂದು ಹೇಳಿದರು.

ಕ್ಲಿಕ್‌ ಮಾಡಿ ಓದಿ: ನನಗೆ ಅಧಿಕಾರ ದೊಡ್ಡದಲ್ಲ | ಶಾಸಕ ಡಾ.ಎಂ.ಚಂದ್ರಪ್ಪ

ಸಂಘಟಿತ ವಲಯದಿಂದ ಅಸಂಘಟಿತ ವಲಯಕ್ಕೆ ಸ್ಥಿತ್ಯಂತರಗೊಳ್ಳಬೇಕಾದ ಕಾಲದಲ್ಲಿ ನಾವಿದ್ದೇವೆ. ಆದ್ದರಿಂದ ಅಳಿಸಿ ಹೋಗುವುದನ್ನು ಉಳಿಸುವುದು ಸಂಶೋಧನೆಯ ಕೆಲಸವಾಗಬೇಕು’ ಎಂದರು.

‘ಸಂಘಟಿತ ವಲಯದ ಸಂಶೋಧನೆಗಳು ಸಾಕಷ್ಟು ನಡೆಯುತ್ತಿದ್ದು, ಇದು ಸ್ವಾಗತಾರ್ಹ. ಆದರೆ ಸಂಘಟಿತ ವಲಯದಿಂದ ಅಸಂಘಟಿತ ವಲಯಕ್ಕೆ ಸಂಶೋಧನೆ ಸ್ಥಿತ್ಯಂತರ, ವಿಸ್ತರಣೆಗೊಳ್ಳಬೇಕಾಗಿದೆ. ಇದು ಹೊಸ ಸವಾಲು ಹಾಗೂ ಹೊಸ ಸಾಧ್ಯತೆಯೂ ಹೌದು’ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

‘ಬರೀ ಹೂವು ನೋಡಿ ಬಹಳ ಸುಂದರವಾಗಿದೆ ಎಂದರೆ ಸಾಲದು, ತನ್ನ ಜೀವನವನ್ನೇ ತೇದು ಹೂವು ಮಾಡಿದ ಮೊಳಕೆಯನ್ನೂ ಜ್ಞಾಪಿಸಿಕೊಳ್ಳಬೇಕು. ಇದು ಮನುಷ್ಯನಿಗೆ ಇರುವ ಜವಾಬ್ದಾರಿ. ಹಾಗೆಯೇ ಸಂಶೋಧನೆಯು ಹಾಗೂ ಸಾಹಿತ್ಯ ಸೃಷ್ಠಿಯೂ ಸಹ ಹೂವುನಿಂದ ಮೊಳಕೆವರೆಗೂ ಬರಬೇಕಾಗಿದೆ’ ಎಂದರು.

‘ಸಾಮಾಜಿಕ, ಆರ್ಥಿಕ ಸಂರಚನೆಗೂ ಹಾಗೂ ಸಾಹಿತ್ಯ ಸೃಷ್ಠಿ, ಸಂಶೋಧನೆಗೆ ಸಂಬಂಧ ಇದೆ. ಸಾಮಾಜಿಕ ಮತ್ತು ಆರ್ಥಿಕ ಸಂರಚನೆಯ ಬೆಳವಣಿಗೆಗಳು ಸಾಹಿತ್ಯ, ಸಂಶೋಧನೆಯ ಮೇಲೆ ಪರಿಣಾಮ ಬೀರುತ್ತವೆ. ಆ ಸಂರಚನೆಯಯಲ್ಲಿಯೇ ಶ್ರೇಣಿಗಳಿರುತ್ತವೆ. ಕೆಲವು ಶ್ರೇಣಿಗಳು ನಮಗೆ ಎದ್ದು ಕಾಣಿಸುತ್ತವೆ ಅದನ್ನು ನಾವು ಪ್ರಧಾನ ಎಂದು ಭಾವಿಸುತ್ತೇವೆ. ಇನ್ನೂ ಕೆಲವು ಕಾಣಿಸುವುದಿಲ್ಲ ಅದನ್ನು ಅಧೀನ ಎಂದು ತಿಳಿದುಕೊಳ್ಳತ್ತೇವೆ’ ಎಂದು ತಿಳಿಸಿದರು.

ಕ್ಲಿಕ್‌ ಮಾಡಿ ಓದಿ: ಬಸವಣ್ಣ ಪಠ್ಯಕ್ಕೆ ‘ವೀರಶೈವ’ ಪದ ಸೇರಿಸಬೇಡಿ | ಮುಖ್ಯಮಂತ್ರಿಗೆ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಪತ್ರ

‘ಸಾಮಾಜಿಕ, ಆರ್ಥಿಕ ಸಂರಚನೆಯ ತಿಳುವಳಿಕೆ ಇದ್ದರೆ ಆ ತಿಳುವಳಿಕೆ ಮೂಲಕ ಸಾಹಿತ್ಯವನ್ನು ಬೇರೆ ಬೇರೆ ಆಯಾಮಗಳಿಂದ ಅರ್ಥ ಮಾಡಿಕೊಳ್ಳಲು ಸಾಧ್ಯ. ಅದು ಸಂಶೋಧನೆಯಲ್ಲೂ ಫಲಿತವಾಗಲು ಸಾಧ್ಯವಾಗಲಿದೆ’ ಎಂದರು.

‘ಬುಡಕಟ್ಟು ಸಂಶೋಧನೆ, ಅಲೆಮಾರಿ ಬದುಕು, ದಲಿತ ಲೋಕ, ಮಹಿಳಾ ಲೋಕ ಸೇರಿದಂತೆ ಅಲಕ್ಷಿತವಾದ ಲೋಕ ಹೊರಗಡೆ ಬರುವ ಮುಖಾಂತರ ದೇಶದಲ್ಲಿ ನಡೆದ ದೊಡ್ಡ ಬೆಳವಣಿಗೆ ಅಂದರೆ ಬಹು ಸಂಸ್ಕೃತಿಯ ಅನಾವರಣ. ನಮ್ಮ ದೇಶ ಏಕ ಸಂಸ್ಕೃತಿಯ ದೇಶವಲ್ಲ, ಇದು ಬಹುಸಂಸ್ಕೃತಿಯ ದೇಶ, ಬಹು ಬದುಕು, ಬಹು ವಿನ್ಯಾಸಗಳ ದೇಶ. ನಮ್ಮಲ್ಲಿ ಬುಡಕಟ್ಟು, ಅಲೆಮಾರಿಗಳ ಸಂಶೋಧನೆ ಶುರುವಾದ ನಂತರ ಏಕ ಸಂಸ್ಕೃತಿಯ ಮಿಥ್ಯವನ್ನು ಹೊಡೆದು ಹಾಕಲಾಯಿತು. ಇದು ಅಲಕ್ಷಿತ ಸಂಶೋಧನೆಯ ಫಲ ಹಾಗೂ ಈ ದೇಶದಲ್ಲಿ ನಡೆದ ಬಹುದೊಡ್ಡ ಪಲ್ಲಟವಾಗಿದ್ದು, ಪ್ರಜಾಸತ್ತಾತ್ಮಕ ಮೌಲ್ಯ, ಪ್ರಜಾಸತ್ತಾತ್ಮಕ ಸಮಾಜಕ್ಕೆ ದೊಡ್ಡ ಕೊಡುಗೆ’ ಎಂದು ಹೇಳಿದರು.

‘ಸಾಹಿತ್ಯ ಕ್ಷೇತ್ರದವರಿಗೆ, ಸಂಶೋಧನೆಗೆ ಅಂತ್ಹಶಿಸ್ತೀಯ ತಿಳಿವಳಿಕೆಯ ಅಗತ್ಯವಿದೆ. ಚರಿತ್ರೆ, ಸಮಾಜಶಾಸ್ತ್ರ, ರಾಜಕೀಯ ಶಾಸ್ತ್ರ, ಅರ್ಥಶಾಸ್ತ್ರ, ಸಮಾಜ ಸಂರಚನೆಯ ತಿಳುವಳಿಕೆ ಇದ್ದಲ್ಲಿ, ಇಂತಹ ಸಾಹಿತ್ಯ ಏಕೆ ರಚನೆಯಾಗಿದೆ ಎಂಬುವುದು ಮನವರಿಕೆಯಾಗಲಿದೆ. ಹಾಗಾಗಿ ಸಾಹಿತ್ಯ ಕ್ಷೇತ್ರದವರಿಗೆ ಅಂತ್ಹಶಿಸ್ತೀಯ ತಿಳುವಳಿಕೆ ಬಹಳ ಮುಖ್ಯವಾಗಿದೆ’ ಎಂದರು.

baraguru 2
ಚಿತ್ರದುರ್ಗ ತಾಲ್ಲೂಕಿನ ಜಿ.ಆರ್‌.ಹಳ್ಳಿ ಜ್ಞಾನಗಂಗೋತ್ರಿ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಕನ್ನಡ ಸಾಹಿತ್ಯ ಸಂಶೋಧನೆಯ ಹೊಸ ಸಾಧ್ಯತೆಗಳ ಎಂಬ ವಿಷಯದ ಲೇಖನಗಳ ನವನೀತ ಬೃಹತ್ ಗ್ರಂಥವನ್ನು ಚಿಂತಕ ಪ್ರೊ.ಬರಗೂರು ರಾಮಚಂದ್ರಪ್ಪ ಲೋಕಾರ್ಪಣೆಗೊಳಿಸಿದರು.

‘ಶಿಕ್ಷಣ ವಿಸ್ತರಣೆಯಾದಂತೆ ಸಾಹಿತ್ಯ, ವಿಮರ್ಶೆ, ಸಂಶೋಧನೆಯ ವಿಸ್ತರಣೆಯೂ ಆಯಿತು. ಈ ಹಿನ್ನಲೆಯಲ್ಲಿ ಶಿಕ್ಷಣವು ಹಟ್ಟಿ, ಹಾಡಿ, ಗುಡಿಸಲು, ಮಣ್ಣಿನ ಮನೆ, ಮಹಿಳೆಯರಿಗೆ ಶಿಕ್ಷಣ ಬಂತು. ಹಟ್ಟಿಗೆ ಶಿಕ್ಷಣ ಬಂದ ಮೇಲೆ ಆತಂಕ, ಅಕ್ರೋಶ ಹೊರಬರಲು ಶುರುವಾಯಿತು. ಹಾಡುಗಳಿಂದ ಅದರ ಪಾಡುಗಳು, ಮಣ್ಣಿನ ಮನೆಯಿಂದ ಮನದಾಳ, ಮಹಿಳೆಯರಿಗೆ ಶಿಕ್ಷಣ ತಲುಪಿದ ನಂತರ ಇನ್ನೊಂದು ಆಯಾಮವೇ ಸಾಹಿತ್ಯದಲ್ಲಿ ಸೃಷ್ಠಿಯಾಯಿತು. ಹಾಗಾಗಿ ಶಿಕ್ಷಣದಿಂದ ಮಹಿಳಾ ಲೋಕ, ಬುಡಕಟ್ಟು ಲೋಕ, ಅಲೆಮಾರಿ ಲೋಕ ಸಾಹಿತ್ಯ ಸಂಸ್ಕೃತಿ ಸೇರಿದಂತೆ ಬೇರೆ ಬೇರೆ ಲೋಕ ಅನಾವರಣಕ್ಕೆ ಕಾರಣವಾಯಿತು’ ಎಂದರು.

ಕ್ಲಿಕ್‌ ಮಾಡಿ ಓದಿ: ವಿಎಲ್‌ಟಿ, ಪ್ಯಾನಿಕ್‌ ಬಟನ್ ಅಳವಡಿಕೆ ಕಡ್ಡಾಯ | ನಿರ್ಲಕ್ಷಿಸಿದರೆ ₹ 1000 ದಂಡ ಖಚಿತ

‘ಸಾಹಿತ್ಯ ಸಂಶೋಧನೆ, ವಿಮರ್ಶೆ ಒಂದರೊಳಗೊಂದು ಸೇರಿಕೊಂಡಿರುವುದನ್ನು ನಾವು ನೋಡುತ್ತಿದ್ದೇವೆ. ಸಾಹಿತ್ಯ ಸಂಶೋಧನೆಗೆ ವಿಮರ್ಶೆಯ ವಿವೇಕ ಬೇಕಾಗಿದೆ. ಆದರೆ ವಿಮರ್ಶೆ ಎಲ್ಲವೂ ಸಂಶೋಧನೆ ಆಗಬೇಕಾಗಿರುವುದಿಲ್ಲ. ಸಂಶೋಧನೆ ಅಂದರೆ ಅಜ್ಞಾತಗಳ ಹುಡುಕಾಟ. ವಿಮರ್ಶೆ ಎನ್ನುವುದು ವ್ಯಾಖ್ಯಾನಗಳ ಒಕ್ಕೂಟ’ ಎಂದು ಹೇಳಿದರು.

ಕನ್ನಡ ಸಾಹಿತ್ಯ ಸಂಶೋಧನೆಯ ಹೊಸ ಸಾಧ್ಯತೆಗಳ ಎಂಬ ವಿಷಯಕ್ಕೆ ಸಂಬಂಧಪಟ್ಟಂತೆ ಲೇಖನಗಳ ಒಳಗೊಂಡ ನವನೀತ ಬೃಹತ್ ಗ್ರಂಥವನ್ನು ಲೋಕಾರ್ಪಣೆಗೊಳಿಸಲಾಯಿತು.

ದಾವಣಗೆರೆ ವಿಶ್ವವಿದ್ಯಾಲಯ ಕುಲಪತಿ ಪ್ರೊ.ಬಿ.ಡಿ.ಕುಂಬಾರ, ವಿಶ್ರಾಂತಿ ಕುಲಪತಿ ಪ್ರೊ.ಮಲ್ಲೇಪುರಂ ಜಿ.ವೆಂಕಟೇಶ್‌, ಕುವೆಂಪು ವಿಶ್ವವಿದ್ಯಾಲಯದ ಡಾ.ಬಿ.ಆರ್‌.ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ನೆಲ್ಲಿಕಟ್ಟೆ ಎಸ್‌.ಸಿದ್ದೇಶ್‌, ಜಿ.ಆರ್.ಹಳ್ಳಿ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಂಯೋಜನಾಧಿಕಾರಿ ಪ್ರೊ.ಎಂ.ಯು.ಲೋಕೇಶ್‌, ಜಿಆರ್‌ ಹಳ್ಳಿ ಸ್ನಾತಕೋತ್ತರ ಕನ್ನಡ ಅಧ್ಯಯನ ಕೇಂದ್ರದ ಸಹಾಯಕ ಪ್ರಾಧ್ಯಾಪಕ ಡಾ.ಎಚ್‌.ಜಿ.ವಿಜಯ ಕುಮಾರ್‌, ದಾವಣಗೆರೆ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ವಿಭಾಗ ಅಧ್ಯಕ್ಷ ಡಾ.ವಿ.ಜಯರಾಮಯ್ಯ, ಶಿಕಾರಿಪುರ ಸುವ್ವಿ ಪಬ್ಲಿಕೇಷನ್‌ ಪ್ರಕಾಶಕ ಬಿ.ಎನ್‌.ಸುನೀಲ್‌ ಕುಮಾರ್‌, ತುಮಕೂರು ವಿಶ್ವವಿದ್ಯಾಲಯ ಪ್ರಾಧ್ಯಾಪಕಿ ಗೀತಾ ವಸಂತ, ಸರ್ಕಾರಿ ಕಲಾ ಕಾಲೇಜು ಸ್ನಾತಕೋತ್ತರ ಕನ್ನಡ ಅಧ್ಯಯನ ಕೇಂದ್ರದ ಸಹಾಯಕ ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:criticismprejudiceresearchthinkerUniversitywriterಚಿಂತಕಪೂರ್ವಗ್ರಹಬರಗೂರುವಿಮರ್ಶೆವಿಶ್ವವಿದ್ಯಾಲಯಸಂಶೋಧನೆ
Share This Article
Facebook Email Print
Previous Article MLA CHANDARAPA ನನಗೆ ಅಧಿಕಾರ ದೊಡ್ಡದಲ್ಲ | ಶಾಸಕ ಡಾ.ಎಂ.ಚಂದ್ರಪ್ಪ
Next Article bjp and jds workers protest at hiriyuru Govinda Karajola; ಹಿರಿಯೂರು ಬಿಇಓ ಕಚೇರಿ ಉದ್ಘಾಟನೆ ವೇಳೆ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ | ಸಂಸದ ಗೋವಿಂದ ಕಾರಜೋಳ ಕಡೆಗಣನೆಗೆ ಆಕ್ರೋಶ
Leave a Comment

Leave a Reply Cancel reply

Your email address will not be published. Required fields are marked *

ವಾಣಿವಿಲಾಸ ಸಾಗರ ಜಲಾಶಯ
ವಿವಿ ಸಾಗರದ ಬಳಿ ಧರಣಿ ಸತ್ಯಾಗ್ರಹ | ಲಕ್ಷ್ಮಣ ಹೂಗಾರ್‌
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ | ಆಗಸ್ಟ್ 28 | ರಾಗಿ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
ಟಿ. ರಘುಮೂರ್ತಿ
ಕೇಂದ್ರದ ಮಾನದಂಡಗಳ ಅನ್ವಯ ಬರ ಘೋಷಣೆ | ಉಳಿದ ತಾಲೂಕು ಸೇರ್ಪಡೆ ಸಾಧ್ಯತೆಯೂ ಇದೆ | ಟಿ.ರಘುಮೂರ್ತಿ
ಮುಖ್ಯ ಸುದ್ದಿ
Omkaalu (Carom seed snack)
ಓಂಕಾಳನ್ನು ಬಳಸಿ ಹೊಟ್ಟೆಯ ಕೊಬ್ಬನ್ನು ಕಳೆದುಕೊಳ್ಳುವುದು ಹೇಗೆ? ತಿಳಿಯಿರಿ
Life Style
© Chitradurga News 2025 | Powered By Karnatakabest.com
Loading Comments...
Welcome Back!

Sign in to your account

Username or Email Address
Password

Lost your password?

Not a member? Sign Up