By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಲೋಕಸಭೆ ಚುನಾವಣೆ | ನಿವೃತ್ತ ಡಿಸಿ ಎಂ.ಕೆ.ಶ್ರೀರಂಗಯ್ಯ ಬಿಜೆಪಿ ಟಿಕೇಟ್ ಆಕಾಂಕ್ಷಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಲೋಕಸಭೆ ಚುನಾವಣೆ | ನಿವೃತ್ತ ಡಿಸಿ ಎಂ.ಕೆ.ಶ್ರೀರಂಗಯ್ಯ ಬಿಜೆಪಿ ಟಿಕೇಟ್ ಆಕಾಂಕ್ಷಿ

ಲೋಕಸಮರ 2024

ಲೋಕಸಭೆ ಚುನಾವಣೆ | ನಿವೃತ್ತ ಡಿಸಿ ಎಂ.ಕೆ.ಶ್ರೀರಂಗಯ್ಯ ಬಿಜೆಪಿ ಟಿಕೇಟ್ ಆಕಾಂಕ್ಷಿ

chitradurganews.com
Last updated: 28 February 2024 22:27
chitradurganews.com
1 year ago
Share
ನಿವೃತ್ತ ಡಿಸಿ ಎಂ.ಕೆ.ಶ್ರೀರಂಗಯ್ಯ
ನಿವೃತ್ತ ಡಿಸಿ ಎಂ.ಕೆ.ಶ್ರೀರಂಗಯ್ಯ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 29 FEBRUARY 2024

ಚಿತ್ರದುರ್ಗ: ಲೋಕಸಭೆ ಚುಣಾವಣೆಗೆ ದಿನಾಂಕ ಹತ್ತಿರವಾಗುತ್ತಿದ್ದಂತೆ, ಟಿಕೇಟ್ ಬೇಡಿಕೆಯ ಕಾವು ಹೆಚ್ಚಾಗತೊಡಗಿದೆ.

ಚಿತ್ರದುರ್ಗ ಲೋಕಸಭಾ ಕ್ಷೇತ್ರ ಸದ್ಯ ಬಿಜೆಪಿ ಹಿಡಿತದಲ್ಲಿದ್ದು, ಇಲ್ಲಿ ಎ.ನಾರಾಯಣಸ್ವಾಮಿ ಕೇಂದ್ರ ಸಚಿವರು, ಸಂಸದರೂ ಆಗಿದ್ದಾರೆ. ಈಗಾಗಲೇ ಇದ್ದವರಿಗೆ ಟಿಕೇಟ್ ದೊರೆಯುವುದು ಸಹಜ. ಈ ಕಾರಣಕ್ಕೆ ಹಾಲಿ ಸಂಸದರಿರುವ ಕ್ಷೇತ್ರದಲ್ಲಿ ಆ ಪಕ್ಷದಿಂದ ಟಿಕೇಟ್ ಬೇಡಿಕೆ ಹೆಚ್ಚಾಗಿ ಕೇಳಿ ಬರುವುದಿಲ್ಲ.
ಆದರೆ, ಎ.ನಾರಾಯಣಸ್ವಾಮಿ ಕಳೆದೊಂದು ತಿಂಗಳಿಂದ ನೀಡುತ್ತಿರುವ ರಾಜಕೀಯ ವೈರಾಗ್ಯದ ಹೇಳಿಕೆಗಳು ಆಕಾಂಕ್ಷಿಗಳ ಪಟ್ಟಿ ಬೆಳೆಯತೊಡಗಿದೆ.

ಇದನ್ನೂ ಓದಿ: ಮುರುಘಾ ಮಠ, ಎಸ್‍ಜೆಎಂ ವಿದ್ಯಾಪೀಠದ ಆಡಳಿತಕ್ಕೆ ಸಮಿತಿ ರಚಿಸಲು ಸುಪ್ರೀಂ ಕೋರ್ಟ್ ನಿರ್ದೇಶನ

ಸದ್ಯ ಮಾಜಿ ಸಂಸದ ಜನಾರ್ಧನ ಸ್ವಾಮಿ, ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಪುತ್ರ ರಘುಚಂದನ್, ಹರಪನಹಳ್ಳಿಯ ಡಾ.ರಮೇಶ್, ನಿವೃತ್ತ ಐಎಎಸ್ ಅಧಿಕಾರಿ ಲಕ್ಷ್ಮೀನಾರಾಯಣ, ಸೂರನಹಳ್ಳಿ ವಿಜಯಕುಮಾರ್, ಭಾರ್ಗವಿ ದ್ರಾವಿಡ್ ಸೇರಿದಂತೆ ಪಟ್ಟಿ ಬೆಳೆಯುತ್ತಲೇ ಇದೆ.

ಈ ನಡುವೆ ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಮಾದಾರ ಚನ್ನಯ್ಯ ಶ್ರೀಗಳನ್ನು ಅಭ್ಯರ್ಥಿ ಮಾಡಲಾಗುತ್ತದೆ ಎನ್ನುವ ಅಂತೆ-ಕಂತೆಗಳು ಓಡಾಡುತ್ತಿವೆ.

ಇದನ್ನೂ ಓದಿ: ಹೊನ್ನಾಳಿ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಬೆಲೆಯಲ್ಲಿ ಜಿಗಿತ

ಈಗ ಹೊಸ ಸೇರ್ಪಡೆ ಎಂಬಂತೆ ಈ ಹಿಂದೆ 2014ರಲ್ಲಿ ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಪಕ್ಕದ ತುಮಕೂರು ಜಿಲ್ಲೆಯ ಎಂ.ಕೆ.ಶ್ರೀರಂಗಯ್ಯ ಚಿತ್ರದುರ್ಗ ಲೋಕಸಭೆಗೆ ಟಿಕೇಟ್ ಆಕಾಂಕ್ಷಿಯಾಗಿದ್ದಾರೆ.

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಪೂರ್ಣ ಪರಿಚಯವಿದೆ. ಜಿಲ್ಲೆಯಲ್ಲಿ ಕೆಲಸ ಮಾಡಿರುವುದರಿಂದ ಇಲ್ಲಿನ ಕಷ್ಟ, ಸುಖಗಳ ಬಗ್ಗೆ ಅರಿವಿದೆ. ಅಭಿಮಾನಿಗಳು, ಹಿತೈಷಿಗಳು, ಬೆಂಬಲಿಗರ ಒತ್ತಾಯದ ಕಾರಣಕ್ಕೆ ಬಿಜೆಪಿ ಟಿಕೇಟ್ ಕೇಳಿದ್ದೇನೆ ಎಂದು ಸುದ್ದಿಗೋಷ್ಠಿಯಲ್ಲಿ ವಿವರಿಸಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗದ ಟಿ.ಸುಮಾ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆ

ಎ.ನಾರಾಯಣಸ್ವಾಮಿ ಅವರು ಸ್ಪರ್ಧೆ ಮಾಡದಿದ್ದರೆ, ನನಗೆ ಟಿಕೇಟ್ ಕೊಟ್ಟರೆ ಸ್ಪರ್ಧೆ ಮಾಡುತ್ತೇನೆ. ಜಿಲ್ಲೆಯಲ್ಲಿ ದಲಿತ ಎಡಗೈ ಸಮುದಾಯದ 4-5 ಲಕ್ಷ ಮತಗಳಿವೆ. ಜೊತೆಗೆ ನಾನು ಇಲ್ಲಿ ಸಾಕಷ್ಟು ಕೆಲಸ ಮಾಡಿರುವುದರಿಂದ, ಚಿತ್ರದುರ್ಗದ ಗಡಿ ಭಾಗದಲ್ಲೇ ನನ್ನ ಪರಿವಾರ ನೆಲೆಸಿರುವುದರಿಂದ ಇಲ್ಲಿ ಸ್ಪರ್ಧೆ ಮಾಡಲು ಬಯಸಿದ್ದೇನೆ ಎಂದು ಹೇಳಿದ್ದಾರೆ.

ಈಗಾಗಲೇ ಬಿಜೆಪಿ ವರಿಷ್ಠರನ್ನು ಭೇಟಿಯಾಗಿ ಮಾತನಾಡಿದ್ದೇನೆ. ಟಿಕೇಟ್ ನೀಡುವ ಸ್ಪಷ್ಟ ಭರವಸೆಯೇನು ಸಿಕ್ಕಿಲ್ಲ. ಆದರೆ, ಕ್ಷೇತ್ರದಲ್ಲಿ ಓಡಾಡುತ್ತಿದ್ದೇನೆ. ಜಿಲ್ಲೆಯ ಮುಖಂಡರನ್ನು ಮಾತನಾಡಿಸುತ್ತಿದ್ದೇನೆ. ಕ್ಷೇತ್ರದಲ್ಲಿ ಓಡಾಡಲು ಪಕ್ಷದ ಮುಖಂಡರು ತಿಳಿಸಿದ್ದಾರೆ. ನಾನು ಹೊರಗಿನವನಲ್ಲ. ಗಡಿ ಭಾಗದಲ್ಲೇ ನಮ್ಮ ಪರಿವಾರ ಇದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಇದನ್ನೂ ಓದಿ: ಕಾಂಗ್ರೆಸ್ ಕಚೇರಿ ಎದುರು ಹೈಡ್ರಾಮ

ಬಿಜೆಪಿಯಿಂದಲೇ ಸ್ಪರ್ಧೆ ಮಾಡುವ ಬಯಕೆ ಇದ್ದು, ಪಕ್ಷ ಅವಕಾಶ ನೀಡಿದರೆ ಸ್ಪರ್ಧಿಸುತ್ತೇನೆ. ಟಿಕೇಟ್ ಸಿಗದಿದ್ದರೆ ಕಾರ್ಯಕರ್ತನಾಗಿ ಪಕ್ಷ ಟಿಕೇಟ್ ನೀಡಿದವರ ಪರವಾಗಿ ಕೆಲಸ ಮಾಡುತ್ತೇನೆ ಎಂದರು.

ಇದನ್ನೂ ಓದಿ: ಬಿಎಎಂಎಸ್ ಪರೀಕ್ಷೆಯಲ್ಲಿ ಬಂಗಾರದ ಪದಕ ಪಡೆದ ಹಿರಿಯೂರಿನ ಡಾ.ಸ್ನೇಹ

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:BJPChitradurgaLok Sabha ElectionsMK SrirangaiahRetired DCTicket Aspirantಎಂ.ಕೆ.ಶ್ರಿರಂಗಯ್ಯಚಿತ್ರದುರ್ಗಟಿಕೇಟ್ ಆಕಾಂಕ್ಷಿನಿವೃತ್ತ ಡಿಸಿಬಿಜೆಪಿಲೋಕಸಭೆ ಚುನಾವಣೆ
Share This Article
Facebook Email Print
Previous Article ತರಾಸು ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಮಕ್ಕಳ ಹಬ್ಬ ಚಿಣ್ಣರ ಪ್ರತಿಭೆ ಅನಾವರಣಕ್ಕೆ ಸಾಕ್ಷಿಯಾಯಿತು ಮಕ್ಕಳ ಹಬ್ಬ
Next Article ಚಿತ್ರದುರ್ಗ ಜಿಲ್ಲಾ ಪಂಚಾಯತ್ ಕಚೇರಿ ಮಾರ್ಚ್ 06 ರಂದು ದಿಶಾ ಸಭೆ
Leave a Comment

Leave a Reply Cancel reply

Your email address will not be published. Required fields are marked *

Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up